ಮಹಾದಾಯಿಗಾಗಿ ಕೇಂದ್ರದ ಮೇಲೆ ಒತ್ತಡ
ಅಧಿಕಾರಿಗಳ ಜತೆ ಜಾರಕಿಹೊಳಿ ಚರ್ಚೆ ನಾಳೆ ಕೇಂದ್ರ ಸಚಿವರ ಭೇಟಿ
Team Udayavani, Feb 25, 2020, 6:30 AM IST
ಬೆಂಗಳೂರು: ಮಹಾದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ತೀರ್ಪಿನ ಗೆಜೆಟ್ ಅಧಿ ಸೂಚನೆ ಹೊರಡಿಸುವಂತೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.
ಮಹಾದಾಯಿ ವಿವಾದದ ಬೆಳವಣಿಗೆ ಮತ್ತು ರಾಜ್ಯ ಸರಕಾರದ ಮುಂದಿನ ನಡೆ ಬಗ್ಗೆ ಸೋಮವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿರುವ ಅವರು, ಬುಧವಾರ ಬೆಳಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಅದೇ ದಿನ ಸಂಜೆ ರಾಜ್ಯದ ಜಲ ವಿವಾದಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಾದ ಮಾಡುತ್ತಿರುವ ರಾಜ್ಯದ ವಕೀಲರ ತಂಡದೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
2018ರಲ್ಲಿ ಮಹಾದಾಯಿ ನ್ಯಾಯ ಮಂಡಳಿ ತೀರ್ಪು ನೀಡಿದ್ದರೂ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸದೆ ಇದ್ದುದರಿಂದ ಯೋಜನೆ ವಿಳಂಬವಾಗಿದೆ. ಆದರೆ ಫೆ.20 ರಂದು ಸುಪ್ರೀಂ ಕೋರ್ಟ್ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲನೆ ನಡೆಸು ವಂತೆ ಕೋರಲು ಗೋವಾ ಸರಕಾರ ಸಿದ್ಧತೆ ಮಾಡಿ ಕೊಳ್ಳುತ್ತಿರುವುದರಿಂದ ಆದಷ್ಟು ಬೇಗ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಚಿವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿಯೋಗ ಬಗ್ಗೆ ಸಿಎಂ ಜತೆ ಚರ್ಚೆ
ಮಹಾದಾಯಿ ಆದೇಶವನ್ನು ಗೆಜೆಟ್ ನೊಟಿಫಿಕೇಶನ್ ಹೊರಡಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸರ್ವ ಪಕ್ಷಗಳ ನಿಯೋಗ ಕರೆದೊಯ್ಯುವ ಕುರಿತು ಸಿಎಂ ಯಡಿಯೂರಪ್ಪ ಅವ ರೊಂದಿಗೆ ಸಮಾಲೋಚನೆ ನಡೆಸಿ ಅನಂತರ ನಿರ್ಧಾರ ಕೈಗೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್