ತೈಲೋತ್ಪನ್ನಗಳ ಬೆಲೆ: ಸರಕಾರ ತೆರಿಗೆ ವಿನಾಯಿತಿ ನೀಡಲಿ


Team Udayavani, Jun 7, 2021, 6:45 AM IST

tax-deduction

ಪಂಚರಾಜ್ಯಗಳ ಚುನಾವಣ ಫ‌ಲಿತಾಂಶ ಘೋಷಣೆಯಾದ ಬಳಿಕ ನಿರಂತರವಾಗಿ ಏರಿಕೆಯಾಗುತ್ತಲೇ ಸಾಗಿರುವ ತೈಲೋತ್ಪನ್ನಗಳ ಬೆಲೆ ಈಗ ದೇಶದ ಆರು ರಾಜ್ಯಗಳಲ್ಲಿ ಶತಕದ ಗಡಿ ದಾಟಿದೆ. ಮೇ 4ರ ಬಳಿಕ 20ನೇ ಬಾರಿಗೆ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದ್ದು ರವಿವಾರ ಪೆಟ್ರೋಲ್‌ ಪ್ರತೀ ಲೀ. ಗೆ 21 ಪೈಸೆ ಮತ್ತು ಡೀಸೆಲ್‌ ಪ್ರತೀ ಲೀ. ಗೆ 20 ಪೈಸೆಗಳಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಸತತವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತೈಲ ಕಂಪೆನಿಗಳು ತೈಲೋತ್ಪನ್ನಗಳ ಬೆಲೆಯನ್ನು ಏರಿಸುತ್ತಲೇ ಬಂದಿವೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಬ್ರೆಂಟ್‌ ಕಚ್ಚಾತೈಲ ಬೆಲೆ ಬ್ಯಾರೆಲ್‌ಗೆ 72 ಅಮೆರಿಕನ್‌ ಡಾಲರ್‌ಗಳಿಗೇರಿದೆ. ಅಂತಾರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಅನಿಶ್ಚತತೆ ಮುಂದುವರಿದಿರುವುದರಿಂದ ತೈಲೋತ್ಪನ್ನಗಳ ಬೆಲೆ ಒಂದೇ ಸಮನೆ ಹೆಚ್ಚುತ್ತಲೇ ಸಾಗಿದೆ. ಇತ್ತ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಕೊರೊನಾದಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳಿಂದ ತಮ್ಮ ಬೊಕ್ಕಸಕ್ಕೆ ಹರಿದು ಬರುತ್ತಿರುವ ಆದಾಯಕ್ಕೆ ಕತ್ತರಿ ಹಾಕಿಕೊಳ್ಳಲು ಸಿದ್ದವಾಗಿಲ್ಲ. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುವಂತಾಗಿದೆ.

ದೇಶವೀಗ ಕೊರೊನಾ 2ನೇ ಅಲೆ ಹೊಡೆತದಿಂದ ನಿಧಾನವಾಗಿ ಚೇತ ರಿಸಿಕೊಳ್ಳಲಾರಂಭಿಸಿದೆ. ಮೊದಲ ಅಲೆಗಿಂತ ಅತ್ಯಂತ ಕ್ಷಿಪ್ರಗತಿಯಲ್ಲಿ ದೇಶಾದ್ಯಂತ ವ್ಯಾಪಿಸಿ ಭಾರೀ ಸಂಖ್ಯೆಯ ಜನರನ್ನು ಬಾಧಿಸಿದ್ದೇ ಅಲ್ಲದೆ ಬಲುದೊಡ್ಡ ಸಂಖ್ಯೆಯಲ್ಲಿ ಜನರ ಪ್ರಾಣವನ್ನೂ ಕಸಿದುಕೊಂಡಿದ್ದ 2ನೇ ಅಲೆ ಇಡೀ ದೇಶವನ್ನು ಕಂಗೆಡಿಸಿತ್ತು. ಈ ಬಾರಿ ಲಾಕ್‌ಡೌನ್‌, ನಿರ್ಬಂಧ ಹೇರುವ ಹೊಣೆಗಾರಿಕೆಯನ್ನು ಕೇಂದ್ರ ಸರಕಾರ ಆಯಾಯ ರಾಜ್ಯಗಳಿಗೆ ನೀಡಿದ್ದರಿಂದಾಗಿ ರಾಜ್ಯ ಸರಕಾರಗಳು ತಮ್ಮಲ್ಲಿನ ಸ್ಥಿತಿಗತಿಗನುಗುಣವಾಗಿ ಲಾಕ್‌ಡೌನ್‌, ನಿರ್ಬಂಧಗಳನ್ನು ಜಾರಿಗೊಳಿಸಿ ಕೊರೊನಾ ನಿಯಂತ್ರಣಕ್ಕಾಗಿ ಹರಸಾಹಸ ಪಡುವಂತಾಯಿತು. ಇದೀಗ ಕೊರೊನಾ ಎರಡನೇ ಅಲೆಯ ತೀವ್ರತೆ ಕ್ರಮೇಣ ಕಡಿಮೆಯಾಗುತ್ತಿದ್ದು ಬಹುತೇಕ ರಾಜ್ಯಗಳು ಹಂತಹಂತವಾಗಿ ಲಾಕ್‌ಡೌನ್‌, ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಲಾರಂಭಿಸಿವೆ. ಮುಂದಿನ ಒಂದೆರಡು ವಾರಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳೀತು ಎಂಬ ವಿಶ್ವಾಸ ಮೂಡಿದೆ. ಇಂಥ ಸಂದರ್ಭದಲ್ಲಿ ತೈಲ ಬೆಲೆಗಳು ಗಗನಕ್ಕೇರಿರುವುದು ತುಸು ಆತಂಕಕಾರಿ ವಿಷಯವೇ. ತೈಲ ಬೆಲೆಗಳು ಏರುಮುಖೀಯಾಗಿದ್ದರೆ ಜನಜೀವನ ಮಾತ್ರವಲ್ಲದೆ ಇಡೀ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಲು ಮತ್ತಷ್ಟು ಸಮಯ ಹಿಡಿದೀತು.

ದೇಶದ ಆರ್ಥಿಕ ವ್ಯವಸ್ಥೆಯೊಂದಿಗೆ ನೇರವಾದ ನಂಟು ಹೊಂದಿ ರುವ ತೈಲ ಬೆಲೆಗಳ ಮೇಲೆ ನಿಯಂತ್ರಣ ಸಾಧಿಸುವುದು ಈಗಿನ ತುರ್ತು ಅಗತ್ಯವಾಗಿದೆ. ಈ ದಿಸೆಯಲ್ಲಿ ಕೇಂದ್ರ ಸರಕಾರ ಆದ್ಯತೆಯ ಮೇಲೆ ಗಮನ ಹರಿಸಲೇಬೇಕಿದೆ. ಕನಿಷ್ಠ ಪಕ್ಷ ದೇಶದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುವವರೆಗಾದರೂ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಣ ತನ್ನ ಪಾಲಿನ ತೆರಿಗೆಯಲ್ಲಿ ಕಡಿತಗೊಳಿಸಬೇಕಿದೆ. ಇದರ ಜತೆಯಲ್ಲಿ ರಾಜ್ಯ ಸರಕಾರಗಳೂ ವ್ಯಾಟ್‌ ಸಹಿತ ಸ್ಥಳೀಯ ತೆರಿಗೆಗಳಲ್ಲಿ ಕೊಂಚ ರಿಯಾಯಿತಿಯನ್ನು ನೀಡುವ ಮೂಲಕ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಿದೆ. ತೈಲೋತ್ಪನ್ನ ಕಂಪೆನಿಗಳು ಕೂಡ ಈ ಸಂದಿಗ್ಧದ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ನಿರ್ಧಾರವನ್ನು ಕೈಗೊಂಡು ತೈಲೋತ್ಪನ್ನಗಳು ಜನಸಾಮಾನ್ಯರ ಕೈಗೆಟಕುವಂತೆ ಮಾಡಬೇಕು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.