ಶೀಘ್ರ 2ನೇ ಹಂತದ ಪ್ಯಾಕೇಜ್? ವಿತ್ತ ಸಚಿವೆ, ಗೃಹ ಸಚಿವರ ಜತೆ ಪ್ರಧಾನಿ ಮೋದಿ ಚರ್ಚೆ
Team Udayavani, May 3, 2020, 6:00 AM IST
ಹೊಸದಿಲ್ಲಿ: ಕೋವಿಡ್-19 ದಿಂದ ಸಂಕಷ್ಟಕ್ಕೀಡಾಗಿರುವ ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳು, ಕೃಷಿಕರ ಸಹಿತ ಎಲ್ಲ ವರ್ಗಗಳಿಗಾಗಿ ಕೇಂದ್ರ ಸರಕಾರ 2ನೇ ಹಂತದ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ.
ಈ ಸಂಬಂಧ ಶನಿವಾರ ಪ್ರಧಾನಿ ಮೋದಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಜತೆಗೆ ಚರ್ಚೆ ನಡೆಸಿದ್ದಾರೆ. ಜತೆಗೆ ಕೃಷಿ ವಲಯಕ್ಕೆ ಉತ್ತೇಜನ ನೀಡುವ ಸಲುವಾಗಿ ಉನ್ನತ ಮಟ್ಟದ ಅಧಿಕಾರಿಗಳ ಜತೆಗೂ ಸಭೆ ನಡೆಸಿದ್ದಾರೆ.
ದೇಶದ ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿದ್ದು, ಇವುಗಳನ್ನು ಉಳಿಸುವ ಸಲುವಾಗಿ ಕೆಲವು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಂಬಂಧ ಸೋಮವಾರ ಅಧಿಕೃತವಾಗಿ ಪ್ರಕಟನೆ ಹೊರಬೀಳುವ ಸಾಧ್ಯತೆ ಇದೆ.
ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ರೈತರಿಗೆ ಸಾಂಸ್ಥಿಕ ಸಾಲ ಮತ್ತು ಕಾನೂನಿನ ಬೆಂಬಲದೊಂದಿಗೆ ವಿವಿಧ ನಿರ್ಬಂಧಗಳಿಂದ ಈ ಕ್ಷೇತ್ರಕ್ಕೆ ವಿನಾಯಿತಿ ನೀಡುವ ಕುರಿತು ಮೋದಿ ಅವರು ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ.
ಆರ್ಬಿಐ ಸಭೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಅವರೂ ವಿವಿಧ ಬ್ಯಾಂಕ್ ಮುಖ್ಯಸ್ಥರ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಸಾಲ ಮರು ಪಾವತಿ ಕಂತುಗಳಿಗೆ 3 ತಿಂಗಳ ವಿರಾಮ, ಲಾಕ್ಡೌನ್ ಬಳಿಕ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು (ಎನ್ಬಿ ಎಫ್ ಸಿಗಳು), ಸಣ್ಣ ಸಾಲ ಉದ್ದಿಮೆಗಳು, ಗೃಹ ಸಾಲ ಕಂಪೆನಿಗಳು ಮತ್ತು ಮ್ಯೂಚುವಲ್ ಫಂಡ್ಗಳಿಗೆ ನೀಡ ಬಹುದಾದ ಸಾಲದ ಬಗ್ಗೆ ಮಾತುಕತೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ