ಕೋವಿಡ್ ವಿರುದ್ಧ ಹೋರಾಟ: ರಾಜ್ಯಗಳ ಪ್ರಯತ್ನಗಳಿಗೆ ಪ್ರಧಾನಿ ಶ್ಲಾಘನೆ


Team Udayavani, Jun 17, 2020, 5:45 PM IST

ಕೋವಿಡ್ ವಿರುದ್ಧ ಹೋರಾಟ: ರಾಜ್ಯಗಳ ಪ್ರಯತ್ನಗಳಿಗೆ ಪ್ರಧಾನಿ ಶ್ಲಾಘನೆ

ಬೆಂಗಳೂರು: ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿ, ರಾಜ್ಯಗಳು ಇನ್ನು ಅನ್ ಲಾಕ್ ನತ್ತ ಹೆಜ್ಜೆಯಿಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ ಎಂದು ಸಲಹೆ ನೀಡಿದರು.

ಆತ್ಮನಿರ್ಭರ್ ಪ್ಯಾಕೇಜ್ ಆರ್ಥಿಕ ಚಟುವಟಿಕೆ ಚುರುಕುಗಾಗಲು ನೆರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ 5 ಟಿ ತತ್ವವನ್ನು ವಿವರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನಿರಂತರವಾಗಿ ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲಾಗಿದೆ.

ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ.

ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಕೋವಿಡ್ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ 72ಕ್ಕೆ ಹೆಚ್ಚಿದ್ದು, ಪರೀಕ್ಷಾ ಸಾಮರ್ಥ್ಯ ದಿನಕ್ಕೆ 15 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ. 1.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇಕಡಾ 3.6 ರಷ್ಟಿದೆ ಎಂದು ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದರು.

ಕೋವಿಡ್ ವಾರ್ ರೂಂ ಸ್ಥಾಪನೆಯ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ.

ರಾಜ್ಯದ ಎಲ್ಲ ಭಾಗಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದ್ದು, ತಜ್ಞ ವೈದ್ಯರೊಂದಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ನಿರಂತರ ಸಂಪರ್ಕದಲ್ಲಿದ್ದು ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಪ್ರಾತ್ಯಕ್ಷಿಕೆ ನೀಡಿದರು.

ಅವರು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ತಂತ್ರಜ್ಞಾನದ ಬಳಕೆ, ತರಬೇತಿ ಕಾರ್ಯಕ್ರಮಗಳು, ಪಂಚಾಯತ್ ಮಟ್ಟದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು.

ಸಭೆಯ ಪ್ರಾರಂಭದಲ್ಲಿ ಲಡಾಕ್ ನಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಮೌನ ಆಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.