ಹಿರೋಶಿಮಾದಲ್ಲಿ ಕ್ವಾಡ್ ಜಿ7 ಶೃಂಗ: ಚೀನಕ್ಕೆ PM Modi ಖಡಕ್ ಸಂದೇಶ
Team Udayavani, May 21, 2023, 8:40 AM IST
ಹಿರೋಶಿಮಾ: ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಕ್ವಾಡ್, ಜಿ7 ಶೃಂಗದಲ್ಲಿ ಭಾಗಿಯಾಗುವುದರ ಜತೆಗೆ, ವಿಶ್ವನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕ್ವಾಡ್ ಶೃಂಗದ ಉದ್ಘಾಟನ ಸಭೆಯಲ್ಲಿ ಮಾತನಾಡಿದ ಅವರು, “ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ವ್ಯಾಪಾರ, ನಾವೀನ್ಯ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಈ ಪ್ರದೇಶದ ಯಶಸ್ಸು ಮತ್ತು ಭದ್ರತೆಯು ಇಡೀ ಜಗತ್ತಿಗೇ ಮಹತ್ವವಾದದ್ದು’ ಎಂದು ಹೇಳಿದರು.
ಇದೇ ವೇಳೆ, “ಭಾರತವು ತನ್ನ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಿಕೊಳ್ಳಲು ಬದ್ಧವಾಗಿದೆ. ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ನೌಕಾ ವಿವಾದಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಾಗುತ್ತದೆ’ ಎನ್ನುವ ಮೂಲಕ ವಿಸ್ತರಣಾವಾದವನ್ನು ನೆಚ್ಚಿಕೊಂಡಿರುವ ಚೀನಕ್ಕೆ ಪರೋಕ್ಷ ಸಂದೇಶ ರವಾನಿಸಿದರು.
2024ರ ಕ್ವಾಡ್ ಶೃಂಗದ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ ಎಂದೂ ಮೋದಿ ತಿಳಿಸಿದರು. ಇದೇ ವೇಳೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನೂ ಭೇಟಿಯಾದ ಮೋದಿ, “ಯುದ್ಧವು ಅತ್ಯಂತ ಗಂಭೀರ ವಿಚಾರ. ಈ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಏನೇನು ಬೇಕೋ ಅದನ್ನು ನಾವು ಮಾಡುತ್ತೇವೆ’ ಎಂದು ಭರವಸೆ ನೀಡಿದರು. ಹಿರೋಶಿಮಾದಲ್ಲಿ ಮಹಾತ್ಮಾ ಗಾಂಧಿಯ ಪುತ್ಥಳಿಯನ್ನೂ ಅನಾವರಣಗೊಳಿಸಿದರು.
ಹಸ್ತಲಾಘವ-ಆಲಿಂಗನ
ಪ್ರಧಾನಿ ಮೋದಿ ಅವರನ್ನು ಕಾಣುತ್ತಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಧಾವಿಸಿ ಬಂದು ಆಲಿಂಗಿಸಿಕೊಂಡರು. ಅನಂ ತರ ಪರಸ್ಪರ ಹಸ್ತಲಾಘವ ಮಾಡಿಕೊಂಡ ನಾಯಕರು, ಕುಶಲೋಪರಿ ವಿಚಾರಿಸಿಕೊಂಡರು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ