ಎನ್‌ಇಪಿ ಜಾರಿಗೆ ಖಾಸಗಿ ಶಾಲೆಗಳ ಸಲಹೆ ಮುಖ್ಯ: ಹೊರಟ್ಟಿ


Team Udayavani, Feb 26, 2022, 9:30 PM IST

ಎನ್‌ಇಪಿ ಜಾರಿಗೆ ಖಾಸಗಿ ಶಾಲೆಗಳ ಸಲಹೆ ಮುಖ್ಯ: ಹೊರಟ್ಟಿ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಸಂಬಂಧ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪಾತ್ರ ಮಹತ್ವದ್ದಾಗಿದೆ. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಶಾಲಾ ಶಿಕ್ಷಣದಲ್ಲಿ ಅಳವಡಿಸಿಕೊಳ್ಳಬಹುದಾದ ಸಲಹೆ-ಸೂಚನೆಗಳನ್ನು ನೀಡುವಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಶಿಕ್ಷಕ ಮತ್ತು ಶಿಕ್ಷೇತರ ಸಿಬಂದಿ ಸಂಯೋಜನ ಸಮಿತಿಯು (ಕೆಪಿಎಂಟಿಸಿಸಿ) ಶನಿವಾರ ನಗರದಲ್ಲಿ ಆಯೋಜಿಸಿದ್ದ “ಎನ್‌ಇಪಿ-2020 ಮತ್ತು ಶಾಲಾ ಶಿಕ್ಷಣದ ನಿಯಂತ್ರಕ ವಾಸ್ತುಶಿಲ್ಪ’ ಎಂಬ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಎನ್‌ಇಪಿ ಜಾರಿಗೊಳಿಸುವುದು ಕಷ್ಟದ ಕೆಲಸ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ತಿರಸ್ಕರಿಸಲಾಗಿದೆ. ಹೀಗಾಗಿ, ಎನ್‌ಇಪಿಯನ್ನು ಹೇಗೆ ಜಾರಿಗೊಳಿಸಬೇಕು? ಇದರಿಂದಾಗುವ ಪರಿಣಾಮಗಳೇನು, ಪರಿಹಾರಗಳೇನು ಎಂಬುದರ ಕುರಿತು ಸಲಹೆ-ಸೂಚನೆ ನೀಡುವಂತೆ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿ, ರಾಜ್ಯ ಸರಕಾರವು ಖಾಸಗಿ ಶಾಲೆಗಳಿಗೆ ಯಾವುದೇ ಅನುದಾನ ನೀಡದಿದ್ದರೂ ಅಗ್ನಿ ಸುರಕ್ಷೆ, ಕಟ್ಟಡ ಸುರಕ್ಷೆ ಸಹಿತ ಹಲವು ವಿಷಯಗಳಲ್ಲಿ ತೊಂದರೆ ನೀಡುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರವು ಐಸಿಎಸ್‌ಇ ಮತ್ತು ಸಿಬಿಎಸ್‌ಇ ಮಂಡಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದರು.

ಎನ್‌ಇಪಿ ಕಾರ್ಯಪಡೆ ಅಧ್ಯಕ್ಷ ಮದನ್‌ ಗೋಪಾಲ್‌ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ಚಟುವಟಿಕೆ ಆಧಾರಿತ ಕಲಿಕೆಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಎನ್‌ಇಪಿ-2020 ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಹೊಸ ನೀತಿಯಲ್ಲ. ಶಿಕ್ಷಣದಲ್ಲಿ ಇಲ್ಲದನ್ನು ಹೊಸದಾಗಿ ಅಳವಡಿಸಿಕೊಳ್ಳಲಾಗುತ್ತಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ 3ನೇ ವರ್ಷದ ಮಗು ಕಲಿಯಬೇಕಾದ ಶಿಕ್ಷಣವನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಸಮಾವೇಶದಲ್ಲಿ ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ, ವಿಧಾನ ಪರಿಷತ್‌ ಸದಸ್ಯ ಕೆಪಿಎಂಟಿಸಿಸಿ ಸಮಿತಿ ಸಂಚಾಲಕ ಡಿ. ಶಶಿಕುಮಾರ್‌, ಸದಸ್ಯರಾದ ಎಂ.ಶ್ರೀನಿವಾಸ್‌, ಡಾ| ಅಮಿತ್‌ ಹಾಗೂ ವಿವಿಧ ರಾಜ್ಯಗಳ ಖಾಸಗಿ ಶಾಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.