ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ನೀವು ಹಾಲಿವುಡ್ ನಲ್ಲಿ ನಟಿಸಲು ಯಾಕೆ ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದರು

Team Udayavani, Mar 28, 2023, 1:46 PM IST

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ವಾಷಿಂಗ್ಟನ್/ಮುಂಬೈ: ಬಾಲಿವುಡ್ ಖ್ಯಾತ ನಟಿ, ನಿರ್ಮಾಪಕಿ ಪ್ರಿಯಾಂಕಾ ಚೋಪ್ರಾ…ಭಾರತೀಯ ಸಿನಿಮಾರಂಗದ ಬಹು ಬೇಡಿಕೆಯ ನಟಿಯಾಗಿದ್ದರು. ದ ಹೀರೋ ಲವ್ ಸ್ಟೋರಿ ಆಫ್ ಸ್ಪೈ, ಅಂದಾಝ್, ಮುಜಸೇ ಶಾದಿ ಕರೋಗಿ, ಡಾನ್ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಚೋಪ್ರಾ ಎರಡು ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ ಹಾಗೂ ಐದು ಫಿಲ್ಮ್ ಫೇರ್ ಅವಾರ್ಡ್ಸ್ ಗೆ ಭಾಜನರಾಗಿದ್ದರು. ಆದರೆ ಬಹುಬೇಡಿಕೆಯ ನಟಿಯಾಗಿದ್ದ ಪ್ರಿಯಾಂಕಾ ಚೋಪ್ರಾ ದಿಢೀರನೆ ಬಾಲಿವುಡ್ ತೊರೆದು ಅಮೆರಿಕಕ್ಕೆ ವಲಸೆ ಹೋಗಿರುವ ಹಿಂದಿನ ಕಾರಣ ಏನು ಎಂಬುದನ್ನು ಸ್ವತಃ ಚೋಪ್ರಾ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಉಮೇಶ್ ಪಾಲ್ ಪ್ರಕರಣ: ಗ್ಯಾಂಗ್ ಸ್ಟರ್ ಅತೀಖ್ ಅಹಮದ್ ದೋಷಿ ಎಂದು ಕೋರ್ಟ್ ತೀರ್ಪು

ಪ್ರಿಯಾಂಕಾ ಅವರು ಡಾಕ್ಸ್ ಶೇಫರ್ಡ್ ಅವರ ಪಾಡ್ ಕಾಸ್ಟ್ Armchair ಎಕ್ಸ್ ಪರ್ಟ್ ನಲ್ಲಿ ಮಾತನಾಡುತ್ತ, ಸಿನಿಮಾರಂಗದಲ್ಲಿನ ರಾಜಕೀಯದಿಂದ ಬೇಸತ್ತಿದ್ದೆ. ಯಾಕೆಂದರೆ ಬಾಲಿವುಡ್ ನಲ್ಲಿ ನನ್ನ ಮೂಲೆಗುಂಪು ಮಾಡಲಾಗಿತ್ತು. ಅಲ್ಲದೇ ನನ್ನ ಕಾರ್ಯಕ್ಷೇತ್ರದ ಬದಲಾವಣೆಯನ್ನು ಅವರು ಬಯಸಿದ್ದರು. ಹಿಂದಿ ಸಿನಿಮಾರಂಗದಲ್ಲಿ ನನ್ನ ಉದ್ದೇಶಪೂರ್ವಕವಾಗಿ ದೂರ ಇಡುತ್ತಿರುವ ಪ್ರಸಂಗದಿಂದ ನಾನು ಬಾಲಿವುಡ್ ಬಿಡುವಂತೆ ಮಾಡಿರುವುದಾಗಿ ಚೋಪ್ರಾ ದೂರಿದ್ದಾರೆ.

“ತನ್ನ ಮ್ಯೂಸಿಕ್ ವಿಡಿಯೋವನ್ನು ಗಮನಿಸಿದ್ದ ದೇಸಿ ಹಿಟ್ಸ್ ನ ಅಂಜುಲಾ ಆಚಾರ್ಯ ಅವರು ನಾನು “ಸಾತ್ ಖೂನ್ ಮಾಫ್” ಸಿನಿಮಾದ ಚಿತ್ರೀಕರಣದಲ್ಲಿದ್ದ ವೇಳೆ ಕರೆ ಮಾಡಿ, ಅಮೆರಿಕದಲ್ಲಿ ನಿಮಗೆ ಸಂಗೀತ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ ಅಂತ ಕೇಳಿದ್ದರು. ಹೀಗೆ ನಾನು ಬಾಲಿವುಡ್ ನಿಂದ ನನ್ನ ವೃತ್ತಿ ಜೀವನದ ಮತ್ತೊಂದು ಮಜಲನ್ನು ಪ್ರವೇಶಿಸಲು ಕಾರಣವಾಯ್ತು. ಅದಕ್ಕೆ ನನಗೆ ಸಾಥ್ ನೀಡಿದ್ದು ಸಂಗೀತ ಕ್ಷೇತ್ರ ಎಂಬುದಾಗಿ ಪ್ರಿಯಾಂಕಾ ಚೋಪ್ರಾ ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ಅಮೆರಿಕದಲ್ಲಿದ್ದಾಗ ನನಗೆ ಯಾರೋ ಒಬ್ಬರು ನೀವು ಹಾಲಿವುಡ್ ನಲ್ಲಿ ನಟಿಸಲು ಯಾಕೆ ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದರು. ಅದರಂತೆ 2015ರಲ್ಲಿ ಹಾಲಿವುಡ್ ನ ಕ್ವಾಂಟಿಕೋ ಸಿನಿಮಾದಲ್ಲಿ ಚೋಪ್ರಾ ಲೀಡ್ ರೋಲ್ ನಲ್ಲಿ ನಟಿಸಿದ್ದರು.

ಪ್ರಿಯಾಂಕಾ ಚೋಪ್ರಾ ಅಮೆರಿಕನ್ ಸಿಂಗರ್, ನಟ ನಿಕ್ ಜೋನಾಸ್ ಜೊತೆ ಡೇಟಿಂಗ್ ನಲ್ಲಿದ್ದು, 2018ರಲ್ಲಿ ನಿಕ್ ಮತ್ತು ಜೋನಾಸ್ ವಿವಾಹವಾಗಿದ್ದರು. ಅಮೆರಿಕದಲ್ಲಿ ವಾಸವಾಗಿರುವ ದಂಪತಿಗೆ ಒಂದು ಹೆಣ್ಣು (ಬಾಡಿಗೆ ತಾಯಿ ಮೂಲಕ) ಮಗುವಿದೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ: ಕಂಗನಾ

ಸಿನಿಮಾರಂಗದ ರಾಜಕೀಯದಿಂದ ತಾನು ಬಾಲಿವುಡ್ ಬಿಟ್ಟು ಅಮೆರಿಕ ಸೇರುವಂತಾಗಿತ್ತು ಎಂಬ ಪ್ರಿಯಾಂಕಾ ಚೋಪ್ರಾ ಹೇಳಿಕೆಗೆ ಮತ್ತೊಬ್ಬ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಬಾಲಿವುಡ್ ತೊರೆಯಲು ನಿರ್ಮಾಪಕ ಕರಣ್ ಜೋಹರ್ ಕಾರಣ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಾಲಿವುಡ್ ನಟ ಶಾರುಖ್ ಖಾನ್ ಜೊತೆಗಿನ ಚೋಪ್ರಾ ಗೆಳೆತನದ ಕಾರಣದಿಂದಾಗಿ ಕರಣ್ ಜೋಹರ್ ಪ್ರಿಯಾಂಕಾಳನ್ನು ಬ್ಯಾನ್ ಮಾಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ ಎಂದು ಕಂಗನಾ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಶಾರುಖ್ ಖಾನ್ ಜೊತೆಗಿನ ಗೆಳೆತನ ಹಾಗೂ ಸಿನಿಮಾರಂಗದ ಮಾಫಿಯಾದ ಪರಿಣಾಮ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ತೊರೆಯುವಂತೆ ಮಾಡಲಾಯ್ತು. ಇದಕ್ಕೆ ಕರಣ್ ಜೋಹರ್ ಕಾರಣ ಎಂದು ಕಂಗನಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.