ಹತ್ತು ದಿನಗಳಲ್ಲಿ ಕೃಷಿ ಸಾಲ ಮನ್ನಾ ಕೈ ಪ್ರಣಾಳಿಕೆ ಬಿಡುಗಡೆ ಮಾಡಿದ ಪ್ರಿಯಾಂಕಾ


Team Udayavani, Feb 10, 2022, 7:10 AM IST

ಹತ್ತು ದಿನಗಳಲ್ಲಿ ಕೃಷಿ ಸಾಲ ಮನ್ನಾ ಕೈ ಪ್ರಣಾಳಿಕೆ ಬಿಡುಗಡೆ ಮಾಡಿದ ಪ್ರಿಯಾಂಕಾ

ಲಕ್ನೋ: “ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಾಲ ಮನ್ನಾ. ಇಪ್ಪತ್ತು ಲಕ್ಷ ಸರಕಾರಿ ಉದ್ಯೋಗಗಳನ್ನು ನೀಡಲು ವ್ಯವಸ್ಥೆ ಮಾಡು ತ್ತೇವೆ’ ಇದು ಫೆ.10ರಂದು ಶುರುವಾಗಲಿರುವ ಉತ್ತರ ಪ್ರದೇಶ ಚುನಾವಣೆಗಾಗಿ ಕಾಂಗ್ರೆಸ್‌ ಬುಧವಾರ ಬಿಡುಗಡೆ ಮಾಡಿರುವ ಪ್ರಣಾಳಿಕೆಯ ಪ್ರಧಾನ ಅಂಶ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಕ್ನೋದಲ್ಲಿ ಪ್ರಣಾಳಿಕೆ “ಉನ್ನತಿ ವಿಧಾನ್‌’ ಅನ್ನು ಬಿಡುಗಡೆ ಮಾಡಿದ್ದಾರೆ.

ಮನೆಮನೆ ಪ್ರಚಾರ ನಡೆಸಿದ ಅಮಿತ್‌ ಶಾ
ಗೋವಾದ ಬಿಜೆಪಿ ಸ್ಟಾರ್‌ ಪ್ರಚಾರಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬುಧವಾರ ರಾಜ್ಯದಲ್ಲಿ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಹಾಗೆಯೇ ರಾಜ್ಯದ ಇನ್ನೊಂದು ಭಾಗದಲ್ಲಿ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಕೂಡ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನದಿಂದಲೇ ಮಯೇಮ್‌, ಬಿಚೋಲಿಮ್‌, ರಾಜೇಶ್‌ ಪಕ್ಲೃಕರ್‌ ಅವರ 2 ಕ್ಷೇತ್ರ ಸೇರಿ ಹಲವೆಡೆ ಮನೆ ಮನೆ ಪ್ರಚಾರ ನಡಸಿದ ಶಾ, ಸಾರ್ವಜನಿಕ ಸಭೆಯಲ್ಲೂ ಭಾಗವಹಿಸಿದ್ದರು.

ಗ್ರಾಮ ಪಂಚಾಯತ್‌ನಲ್ಲೂ ಎಟಿಎಂ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಬುಧವಾರ ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ಬಗ್ಗೆ ವಿವರಣೆ ನೀಡಿದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮೀ, ಬಡವರಿಗೆ ವರ್ಷಕ್ಕೆ 3 ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು, ಹಾಗೆಯೆ ಪ್ರತೀ ಗ್ರಾಮಪಂಚಾಯತ್‌ಗಳಲ್ಲಿ ಕನಿಷ್ಠ ಒಂದು ಎಟಿಎಂ ಅನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ. ಯುವಕರಿಗೆ 50,000 ಸರಕಾರಿ ನೌಕರಿ ನೀಡುತ್ತೇವೆ. ರೈತರಿಗೆ ವರ್ಷಕ್ಕೆ 10,000 ರೂ. ಆರ್ಥಿಕ ನೆರವು ನೀಡುತ್ತೇವೆ ಎಂದಿರುವ ಧಾಮೀ, ಲವ್‌ ಜೆಹಾದ್‌ ಕಾಯ್ದೆಯನ್ನು ಇನ್ನಷ್ಟು ಬಿಗು ಮಾಡುತ್ತೇವೆ ಎಂದಿದ್ದಾರೆ.

ಭರವಸೆ ಏನು?
1. ಬೀಡಾಡಿ ದನಗಳಿಂದ ಬೆಳೆ ಹಾಳಾದರೆ ರೈತರಿಗೆ ಮೂರು ಸಾವಿರ ರೂ. ಪರಿಹಾರ
2. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
3. ಸೋಂಕಿನ ಅವಧಿಯಲ್ಲಿ ನಿಧನರಾದ ಕೊರೊನಾ ವಾರಿಯರ್ಸ್‌ ಕುಟುಂಬಸ್ಥರಿಗೆ 50 ಲಕ್ಷ ರೂ. ಪರಿಹಾರ
4. ಪೊಲೀಸ್‌, ಆರೋಗ್ಯ ಇಲಾಖೆ ಸೇರಿದಂತೆ 12 ಲಕ್ಷ ಸರಕಾರಿ ಹುದ್ದೆ ಭರ್ತಿಗೆ ಕ್ರಮ. 20 ಲಕ್ಷ ಸರಕಾರಿ ಉದ್ಯೋಗ
5. ಪ್ರತೀ ಕ್ವಿಂಟಾಲ್‌ ಭತ್ತಕ್ಕೆ 2,500 ರೂ., ಪ್ರತಿ ಕ್ವಿಂಟಾಲ್‌ ಕಬ್ಬಿಗೆ 400 ರೂ. ನೀಡಿ ಖರೀದಿ.
6. ಗೋಧನ್‌ ನ್ಯಾಯ ಯೋಜನೆ ಅಡಿಯಲ್ಲಿ ಪ್ರತೀ ಕೆಜಿ ಸೆಗಣಿಗೆ 2 ರೂ. ನೀಡಿ ಖರೀದಿ
7. ವಿಧಾನ ಪರಿಷತ್‌ನಲ್ಲಿ
ನಿವೃತ್ತ ಸೈನಿಕರಿಗೆ ಮೀಸಲು ಮತ್ತು ಪತ್ರಕರ್ತರ ವಿರುದ್ಧ ಕೇಸುಗಳು ವಾಪಸ್‌
8. ಕೆಲವು ಸಮುದಾಯಗಳಿಗೆ ಎಸ್‌ಟಿ ಮಾನ್ಯತೆ ನೀಡಲು ಕ್ರಮ.

 

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.