ಅರ್ಜಿ ಇಲ್ಲದೆ ಸಾಧಕರನ್ನು ಗುರುತಿಸಲು ಕ್ರಮ: ಸುನಿಲ್‌

ಡಾ| ಯು. ಬಿ. ರಾಜಲಕ್ಷ್ಮೀ, ರೋಹಿತ್‌ ಕುಮಾರ್‌ ಅವರಿಗೆ ಪೌರ ಸಮ್ಮಾನ

Team Udayavani, Dec 12, 2021, 5:40 AM IST

ಅರ್ಜಿ ಇಲ್ಲದೆ ಸಾಧಕರನ್ನು ಗುರುತಿಸಲು ಕ್ರಮ: ಸುನಿಲ್‌

ಕಾರ್ಕಳ: ಮುಂದಿನ ರಾಜ್ಯೋತ್ಸವ ಸಂದರ್ಭ ಅರ್ಜಿಗಳನ್ನು ಸ್ವೀಕರಿಸದೆ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತರಂಗ ವಾರಪತ್ರಿಕೆಯ ಸಂಪಾದಕಿ ಡಾ| ಯು.ಬಿ. ರಾಜಲಕ್ಷ್ಮೀ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲು ಅವರಿಗೆ ಕಾರ್ಕಳದಲ್ಲಿ ಶನಿವಾರ ಜರಗಿದ ಹುಟ್ಟೂರ ಪೌರ ಅಭಿನಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್‌ ಉದ್ಘಾಟಿಸಿದರು. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅಭಿನಂದನ ಭಾಷಣ ಮಾಡಿ, ಡಾ| ರಾಜಲಕ್ಷ್ಮೀ ಸದ್ದುಗದ್ದಲವಿಲ್ಲದೆ ಎಲೆಮರೆಯ ಕಾಯಿಯಂತೆ ಸಾಧನೆಯ ಹಾದಿಯಲ್ಲಿ ನಡೆದು ಬಂದವರು. ದೀರ್ಘಾವಧಿ ತರಂಗ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವುದಲ್ಲದೆ ತರಂಗ ಪತ್ರಿಕೆಯ ವ್ಯವಸ್ಥಾಪಕಿ ಡಾ| ಸಂಧ್ಯಾ ಪೈ ಪ್ರೀತಿಗೆ ಪಾತ್ರರಾದವರು ಎಂದರು.

ಅಂತೆಯೇ ರೋಹಿತ್‌ ಕಟೀಲು ಅವರಲ್ಲಿ ಹಿರಿಯರಲ್ಲಿ ರಕ್ತಗತವಾಗಿದ್ದ ನಾಯಕತ್ವ, ಹೋರಾಟ ಮನೋಭಾವ, ಸೌಂದರ್ಯ ಪ್ರಜ್ಞೆ ಬೆಳೆದು ಬಂದಿದೆ ಎಂದರು.

ಇದನ್ನೂ ಓದಿ:ಒಂಟೆ ಸವಾರಿ ವಿಡಿಯೋ ಹಂಚಿಕೊಂಡ ಸಚಿವ ಕಿರಣ್‌ ರಿಜಿಜು 

ಹಿರಿಯ ಉದ್ಯಮಿ ಬೋಳ ಪ್ರಭಾಕರ ಕಾಮತ್‌, ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ| ಮಂಜುನಾಥ ಕೋಟ್ಯಾನ್‌, ಬಿಲ್ಲವ ಸಮಾಜ ಅಧ್ಯಕ್ಷ ಡಿ.ಆರ್‌. ರಾಜು, ಉದ್ಯಮಿಗಳಾದ ಮಹೇಶ್‌ ಶೆಟ್ಟಿ, ಕುಡುಪುಲಾಜೆ, ಚಿತ್ರ ನಟಿಯರಾದ ದುನಿಯ ರಶ್ಮಿ, ಭಾವನಾ ಮಾತನಾಡಿ ದರು. ಕರಿಯಣ್ಣ ಶೆಟ್ಟಿ, ಶಿವರಾಮ ಶೆಟ್ಟಿ, ಅಪ್ಸರಾ ರೋಹಿತ್‌ ಕುಮಾರ ಕಟೀಲು, ಸಮಿತಿ ಅಧ್ಯಕ್ಷ ಸುನಿಲ್‌ ಕುಮಾರ್‌ ವೇದಿಕೆಯಲ್ಲಿದ್ದರು.

ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿ ವಂದಿಸಿದರು. ರಾಜೇಂದ್ರ ಭಟ್‌ ನಿರೂಪಿಸಿದರು. ಪ್ರಶಸ್ತಿ ಪುರಸ್ಕೃತರಿಬ್ಬರಿಗೂ ತುಪ್ಪದ ನಂದಾದೀಪ ಬೆಳಗಿ, ಪನ್ನೀರು ಚಿಮುಕಿಸಿ, ಅವರದೇ ಎತ್ತರದ ಮಾನ ಪತ್ರ, ಸ್ಮರಣಿಕೆ ಫ‌ಲಪುಷ್ಪ ನೀಡಿ ಗೌರವಿಸಲಾಯಿತು. ಡಾ| ರಾಜಲಕ್ಷ್ಮೀ ಸಮ್ಮಾನ ಸ್ವೀಕರಿಸಿದ ವೇಳೆ ತರಂಗ ಪತ್ರಿಕೆಯ ವ್ಯವಸ್ಥಾಪಕಿ ಡಾ| ಸಂಧ್ಯಾ ಎಸ್‌. ಪೈ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.