ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ ವಿರೋಧಿಸಿ ಬಂದ್ ಗೆ ಕರೆ; ಗೋಶಾಮಹಲ್ ನಲ್ಲಿ ಬಿಗಿ ಬಂದೋಬಸ್ತ್
ಒವೈಸಿಯಂತಹ ದ್ವೇಷ ಭಾಷಣ ಮಾಡುವವರನ್ನು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಯಾಕೆ ಬಂಧಿಸಿಲ್ಲ
Team Udayavani, Sep 3, 2022, 3:43 PM IST
ತೆಲಂಗಾಣ: ಬಿಜೆಪಿಯಿಂದ ಅಮಾನತುಗೊಂಡಿರುವ ಶಾಸಕ ಟಿ.ರಾಜಾ ಸಿಂಗ್ ಬಂಧನವನ್ನು ವಿರೋಧಿಸಿ ಅವರ ಬೆಂಬಲಿಗರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಶಾಮಹಲ್ ಪ್ರದೇಶದಲ್ಲಿ ಹೈದರಾಬಾದ್ ಪೊಲೀಸರು ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕರ್ನಾಟಕ ಸಂಗೀತ ಗಾಯಕ ಪದ್ಮಭೂಷಣ ಟಿ.ವಿ.ಶಂಕರನಾರಾಯಣನ್ ವಿಧಿವಶ
ಶುಕ್ರವಾರ ಶ್ರೀರಾಮ್ ಯುವಸೇನಾ ಪತ್ರಿಕಾಗೋಷ್ಠಿ ನಡೆಸಿದ್ದ ವೇಳೆ, ಶನಿವಾರ ಗೋಶಾಮಹಲ್ ಬಂದ್ ಗೆ ಕರೆ ನೀಡಿದ್ದರು. ಈ ಪ್ರಕರಣದಲ್ಲಿ ನಿಜವಾದ ಆರೋಪಿ ಸಚಿವ ಕೆಟಿಆರ್ ಹೊರತುಪಡಿಸಿ ಬೇರೆ ಯಾರೂ ಅಲ್ಲ ಎಂದು ಆರೋಪಿಸಿದ್ದರು.
ಹೈದರಾಬಾದ್ ನಲ್ಲಿ ಮುನಾವರ್ ಫಾರೂಖಿಗೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ ಶ್ರೀರಾಮ್ ಯುವಸೇನಾ, ಭಾರೀ ಭದ್ರತೆಯೊಂದಿಗೆ ಹೈದರಾಬಾದ್ ನಲ್ಲಿ ಮುನಾವರ್ ಗೆ ಸರ್ಕಾರ ಹೇಗೆ ಅನುಮತಿ ನೀಡಿತು? ಮುನಾವರ್ ಹಿಂದೂ ದೇವರನ್ನು ಅವಹೇಳನ ಮಾಡಿರುವುದಾಗಿ ದೂರಿತ್ತು.
ತೆಲಂಗಾಣ ರಾಷ್ಟ್ರೀಯ ಸಮಿತಿ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಆರೋಪಿಸಿರುವ ಯುವಸೇನಾ, ತೆಲಂಗಾಣ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಭಿನ್ನಾಭಿಪ್ರಾಯಗಳಿರುವುದೇಕೆ? ಒವೈಸಿಯಂತಹ ದ್ವೇಷ ಭಾಷಣ ಮಾಡುವವರನ್ನು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಯಾಕೆ ಬಂಧಿಸಿಲ್ಲ. ಕೇವಲ ಶಾಸಕ ರಾಜಾ ಸಿಂಗ್ ಅವರನ್ನು ಮಾತ್ರ ಈ ಕಾಯ್ದೆಯಡಿ ಬಂಧಿಸಿದ್ದೇಕೆ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ