ಶಿವಸೇನಾ ಪಕ್ಷ ಯಾರ ಪಾಲಾಗಲಿದೆ? ಸಾಕ್ಷ್ಯ ಸಲ್ಲಿಸಿ-ಠಾಕ್ರೆ, ಶಿಂಧೆಗೆ ಚುನಾವಣಾ ಆಯೋಗ ಸೂಚನೆ
ಜಟಾಪಟಿ ಚುನಾವಣಾ ಆಯೋಗದ ಮೆಟ್ಟಿಲೇರುವಂತಾಗಿದೆ.
Team Udayavani, Jul 23, 2022, 10:33 AM IST
ನವದೆಹಲಿ: ಶಿವಸೇನಾ ಪಕ್ಷದಲ್ಲಿ ತಾವು ಹೊಂದಿರುವ ಸದಸ್ಯರ ಬಹುಮತವನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ಒದಗಿಸುವಂತೆ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನಿವಾಸಿಗಳು: ಪೊಲೀಸ್ ದಾಳಿ
ಪಕ್ಷದ ಚಿಹ್ನೆಯಾದ ಬಿಲ್ಲು ಮತ್ತು ಬಾಣ ತಮಗೆ ಸೇರಿದ್ದು ಎಂದು ಉದ್ಧವ್ ಮತ್ತು ಶಿಂಧೆ ಬಣ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಎರಡೂ ಬಣಗಳೂ ಆಗಸ್ಟ್ 8ರಂದು 1 ಗಂಟೆಯೊಳಗೆ ಸಾಕ್ಷ್ಯವನ್ನು ಒದಗಿಸಬೇಕೆಂದು ಸೂಚನೆ ನೀಡಿದೆ.
ತಮ್ಮದೇ ನಿಜವಾದ ಶಿವಸೇನಾ ಎಂದು ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ ಬಣ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಇದೀಗ ಜಟಾಪಟಿ ಚುನಾವಣಾ ಆಯೋಗದ ಮೆಟ್ಟಿಲೇರುವಂತಾಗಿದೆ.
ಪಕ್ಷದ ಕೆಲವು ಸದಸ್ಯರು, ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ಉದ್ಧವ್ ಠಾಕ್ರೆ ಬಣದ ಅನಿಲ್ ದೇಸಾಯಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಅಷ್ಟೇ ಅಲ್ಲ ಶಿಂಧೆ ಬಣ ಶಿವಸೇನಾ ಅಥವಾ ಬಾಳಾ ಸಾಹೇಬ್ ಅವರ ಹೆಸರನ್ನು ಬಳಸಿಕೊಂಡು ಯಾವುದೇ ರಾಜಕೀಯ ಪಕ್ಷ ಸ್ಥಾಪಿಸುವಂತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ