ಹಸುರು ವಲಯಗಳಿಗೆ ವಿನಾಯಿತಿ ಉಸಿರು

14 ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ; ಹಾಟ್‌ಸ್ಪಾಟ್‌ಗಳಲ್ಲಿ ಮಾತ್ರ ಕಠಿನ ನಿರ್ಬಂಧ

Team Udayavani, Apr 29, 2020, 6:10 AM IST

ಹಸುರು ವಲಯಗಳಿಗೆ ವಿನಾಯಿತಿ ಉಸಿರು

ಬೆಂಗಳೂರು: ಉಡುಪಿ ಸೇರಿದಂತೆ ಹಸುರು ವಲಯದಲ್ಲಿರುವ ರಾಜ್ಯದ 14 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರಾರಂಭಕ್ಕೆ ಸಮ್ಮತಿ ನೀಡುವ ಮೂಲಕ ಲಾಕ್‌ಡೌನ್‌ ಸಡಿಲಿಕೆ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಈ ಮೂಲಕ ಕೋವಿಡ್-19  ಕಾರಣದಿಂದ ಮುದುಡಿಕೊಂಡಿದ್ದ ಆರ್ಥಿಕ ಚಟುವಟಿಕೆ, ಜನಜೀವನ ಮುಂದಿನ ದಿನಗಳಲ್ಲಿ ಚೇತರಿಸಿಕೊಳ್ಳಲಿದೆ.

ಆದರೆ ಕೋವಿಡ್-19 ಹಾಟ್‌ಸ್ಪಾಟ್‌ ಹೊಂದಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಯಥಾಪ್ರಕಾರ ಮುಂದುವರಿ ಯಲಿದೆ. ಅಂದರೆ ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಈ ಹಿಂದಿನ ಆದೇಶವೇ ಊರ್ಜಿತದಲ್ಲಿ ಇರಲಿದೆ.

ರಾಜ್ಯದ ಕೋವಿಡ್-19 ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ಮತ್ತು ಆರೋಗ್ಯಾಧಿಕಾರಿಗಳ ಅಭಿಪ್ರಾಯದ ವರದಿಯನ್ನು ಕೇಂದ್ರಕ್ಕೆ ರವಾನಿಸಿರುವ ರಾಜ್ಯ ಸರಕಾರ, ಬಳಿಕ ಈ ನಿರ್ಧಾರ ತೆಗೆದುಕೊಂಡಿದೆ.

ಬಹುತೇಕ ಹಾಟ್‌ಸ್ಪಾಟ್‌ ಜಿಲ್ಲೆಗಳಲ್ಲಿ ಮೇ 3ರ ಬಳಿಕವೂ ಎರಡು ವಾರ ಲಾಕ್‌ಡೌನ್‌ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಜಿಲ್ಲಾ ಉಸ್ತುವಾರಿಗಳ ತೀರ್ಮಾನಕ್ಕೆ
ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳ ತಾಲೂಕುಗಳಲ್ಲಿ ವಾಣಿಜ್ಯ ಚಟುವಟಿಕೆ ಆರಂಭ ಮಾಡುವ ತೀರ್ಮಾನವನ್ನು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳ ತೀರ್ಮಾನಕ್ಕೆ ಬಿಡಲಾಗಿದೆ.

ರಾಮನಗರದಲ್ಲಿ ನಿಗಾ
ಹಸುರು ವಲಯದಲ್ಲಿದ್ದರೂ ರಾಮನಗರ ಜಿಲ್ಲೆಗೆ ಸಡಿಲಿಕೆ ಪೂರ್ಣ ಅನ್ವಯ ಇಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುರೇಶ್‌ ಕುಮಾರ್‌, ರಾಮನಗರ ಜಿಲ್ಲೆಯು ಕೋವಿಡ್-19 ತೀವ್ರಗತಿಯಲ್ಲಿರುವ ಬೆಂಗಳೂರಿಗೆ ಹತ್ತಿರ ಇರುವ ಕಾರಣ ಇನ್ನೂ ನಿಗಾ ವಹಿಸಬೇಕಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಡಿಲಿಕೆ ಮಾಡಿಲ್ಲ, ಪರಿಸ್ಥಿತಿ ಸುಧಾರಿಸಿದ ಅನಂತರ ಪರಿಶೀಲಿಸಲಾಗುವುದು ಎಂದಿದ್ದಾರೆ.

ಯಾವ ಜಿಲ್ಲೆಗಳಿಗೆ ಸಡಿಲಿಕೆ?
ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ ಜಿಲ್ಲೆಗಳು.ರಾಮನಗರ ಜಿಲ್ಲೆಯಲ್ಲಿ ಕೈಗಾರಿಕೆ ಬಿಟ್ಟು ಇನ್ನುಳಿದ ವಿನಾಯಿತಿ ಇರಲಿದೆ.

ಜುಲೈ ಅಂತ್ಯದವರೆಗೂ ಮನೆಯಿಂದಲೇ ಕೆಲಸ
ಐಟಿ ನೌಕರರು ಜು.31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಲಾಕ್‌ಡೌನ್‌ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿಶಂಕರ್‌ ಪ್ರಸಾದ್‌ ಅವರು ಈ ವಿಷಯ ಪ್ರಕಟಿಸಿದ್ದಾರೆ.

ಉಡುಪಿಗೂ ಅರ್ಹತೆ:ಜಿಲ್ಲಾಧಿಕಾರಿ ಜಗದೀಶ್‌
ಹಸುರು ವಲಯಕ್ಕೆ ಸೇರ್ಪಡೆಗೊಳ್ಳುವ ಅರ್ಹತೆಯನ್ನು ಆಧರಿಸಿ ರಾಜ್ಯ ಸರಕಾರ ಉಡುಪಿಗೂ ವಿನಾಯಿತಿ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪ್ರಕಟಿಸಿದ್ದಾರೆ. ಹಸುರು ವಲಯಕ್ಕೆ ಅನ್ವಯಿಸುವ ನಿರ್ಬಂಧಗಳೊಂದಿಗೆ ವಾಣಿಜ್ಯ, ಕೈಗಾರಿಕೆ ಚಟುವಟಿಕೆ ಆರಂಭಗೊಳ್ಳಲಿವೆ. ಆದರೆ ಲಾಕ್‌ಡೌನ್‌ ಮೇ 3ರ ವರೆಗೆ ಮುಂದುವರಿಯಲಿದೆ ಎಂದವರು ಹೇಳಿದ್ದಾರೆ.

ಎಲ್ಲೆಲ್ಲಿ
ಏನೆಲ್ಲ ಸಡಿಲಿಕೆ?
ಹಸುರು ವಲಯದ 14 ಜಿಲ್ಲೆ
(ರಾಮನಗರ ಬಿಟ್ಟು )

-ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಿಂದ ಹೊರಗೆ ಗ್ರಾಮೀಣ ಭಾಗದಲ್ಲಿ ಉತ್ಪಾದನ ಘಟಕ ಸಹಿತ ಕೈಗಾರಿಕೆಗಳ ಆರಂಭ; ಎಸ್‌ಇಝಡ್‌, ರಫ್ತು ವಲಯ, ಕೈಗಾರಿಕಾ ಪ್ರದೇಶಗಳಲ್ಲಿ ಚಟುವಟಿಕೆ ಪ್ರಾರಂಭ.

-ಪಾಲಿಕೆ, ನಗರಸಭೆ , ಪುರಸಭೆ ವ್ಯಾಪ್ತಿಯಲ್ಲಿ ಸಿಂಗಲ್‌, ಮಲ್ಟಿ ಬ್ರ್ಯಾಂಡ್‌ ಮಾಲ್‌ ಹೊರತುಪಡಿಸಿದಂತೆ ಅಂಗಡಿ ಮುಂಗಟ್ಟು, ವಸತಿ ಸಂಕೀರ್ಣ ಮಳಿಗೆ, ಮಾರುಕಟ್ಟೆ ಸಂಕೀರ್ಣಗಳಲ್ಲಿನ ಮಳಿಗೆಗಳು.

ಏನೆಲ್ಲ
ನಿಯಮ ಪಾಲನೆ?
-ಶೇ. 50 ಸಿಬಂದಿಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಕಾರ್ಯ ನಿರ್ವಹಿಸಬಹುದು.

-ಕಾರ್ಮಿಕರನ್ನು ತಮ್ಮಲ್ಲೇ ಉಳಿಸಿಕೊಳ್ಳಬೇಕು; ಊಟ, ವಸತಿ ವ್ಯವಸ್ಥೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್  ವ್ಯವಸ್ಥೆ ಮಾಡಬೇಕು.

ಮಿತವ್ಯಯ ದಾರಿ
ಕೋವಿಡ್-19 ಸಂಕಟ ಮುಂದುವರಿಯುವ ಸಾಧ್ಯತೆ ಇರುವುದರಿಂದ ರಾಜ್ಯ ಸರಕಾರ ಮಿತವ್ಯಯದ ದಾರಿ ಹಿಡಿದಿದೆ.ಸಿಎಂ ಬಿಎಸ್‌ವೈ ಅವರು ಆರ್ಥಿಕ ಇಲಾಖೆ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದು, ಅನಗತ್ಯ ವೆಚ್ಚ ಕಡಿವಾಣಕ್ಕೆ ಸೂಚಿಸಿದ್ದಾರೆ. ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಕಟ್ಟಡ ನಿರ್ಮಾಣ, ದುರಸ್ತಿ, ಹೊಸ ವಾಹನ, ಪೀಠೊಪಕರಣ ಖರೀದಿ ಬೇಡ; ನಿಗಮ, ಮಂಡಳಿಗಳಿಗೆ ತೀರಾ ಅಗತ್ಯ ಇದ್ದರೆ ಮಾತ್ರ ಅನುದಾನ ಬಿಡುಗಡೆ ಸಹಿತ ಸಮಗ್ರ ಆರ್ಥಿಕ ಮಿತವ್ಯಯ ಕ್ರಮ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.

ಸರಕಾರಿ ನೌಕರರ ವೇತನಕ್ಕೆ ಕತ್ತರಿ ಇಲ್ಲ
ರಾಜ್ಯ ಸರಕಾರಿ ನೌಕರರಿಗೆ ಎಪ್ರಿಲ್‌ ವೇತನದಲ್ಲಿ ಕಡಿತ ಮಾಡದಿರಲು ಸರಕಾರ ನಿರ್ಧರಿಸಿದ್ದು, ವೇತನ ಪಾವತಿಗೆ ಸಂಪನ್ಮೂಲ ಕ್ರೋಡೀಕರಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ನಾನಾ ಇಲಾಖೆಗಳಲ್ಲಿ ಬಳಕೆಯಾಗದ ಮತ್ತು ಸದ್ಯ ಬಳಕೆಗೆ ಅಗತ್ಯವಿಲ್ಲದ ಮೊತ್ತ ಕ್ರೋಡೀಕರಣದ ಮೂಲಕ ವೇತನ ಪಾವತಿಗೆ ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.