ಪಿಎಸ್ ಐ ನೇಮಕಾತಿಯ ಆಯ್ಕೆ ಪಟ್ಟಿ ರದ್ಧತಿಗೆ ವಂಚಿತ ಆಕಾಂಕ್ಷಿಗಳ ಆಗ್ರಹ
Team Udayavani, Feb 3, 2022, 12:33 PM IST
ಕಲಬುರಗಿ: ಇತ್ತೀಚೆಗೆ ಬಿಡುಗಡೆಯಾದ 545 ಪಿಎಸ್ ಐ ಹುದ್ದೆಗಳ ತಾತ್ಕಾಲಿಕ ಆಯ್ಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ಆಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 371 (ಜೆ) ಅಡಿ 2016ರಲ್ಲಿ ಹೊರಡಿಸಿದ ಸುತ್ತೋಲೆಯಂತೆ ಮೀಸಲಾತಿ ನೀಡಬೇಕಿತ್ತು. ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ರಾಜ್ಯ ವ್ಯಾಪ್ತಿ ಪಟ್ಟಿಯಲ್ಲಿ ಪರಿಗಣಿಸಿ, ಉಳಿದ ಅಭ್ಯರ್ಥಿಗಳನ್ನು 371(ಜೆ) ಅಡಿ ಸೀಮಿತಗೊಳಿಸಿ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ, ಅತಿ ಹೆಚ್ಚು ಅಂಕ ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಮೇರಿಟ್ ಆಧರಿಸಿ ರಾಜ್ಯ ಪಟ್ಟಿಯಲ್ಲಿ ಪ್ರಕಟಿಸದೇ, ಎಲ್ಲರನ್ನೂ 371 (ಜೆ) ಅಡಿಯೇ ಸೀಮಿತಗೊಳಿಸುವ ಮೂಲಕ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಾ ನಿರತ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಈಗಿನ ತಾತ್ಕಾಲಿಕ ಆಯ್ಕೆಯನ್ನು ರದ್ದು ಪಡಿಸಿ, ನಿಯಮದಂತೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ : 2020ರ ಗಾಲ್ವಾನ್ ಸಂಘರ್ಷದಲ್ಲಿ ಸಾವನ್ನಪ್ಪಿದ್ದ ಚೀನಾ ಸೈನಿಕರ ಸಾವಿನ ಸಂಖ್ಯೆ ಬಯಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್