ಪಿಪಿಎಫ್ ಖಾತೆ ಮೆಚ್ಯೂರಿಟಿ ಅನಂತರದ ಆಯ್ಕೆಗಳೇನು?


Team Udayavani, Dec 20, 2020, 6:30 AM IST

ಪಿಪಿಎಫ್ ಖಾತೆ ಮೆಚ್ಯೂರಿಟಿ ಅನಂತರದ ಆಯ್ಕೆಗಳೇನು?

ಹೂಡಿಕೆದಾರರು 15 ವರ್ಷಗಳ ಬಳಿಕ ಮತ್ತೆ 5 ವರ್ಷಗಳಿಗೆ ಅದನ್ನು ವಿಸ್ತರಿಸುವ ಅವಕಾಶ ಇದೆ. ಇದಕ್ಕಾಗಿ ಖಾತೆ ವಿಸ್ತರಣೆಯ ಅರ್ಜಿ ಸಲ್ಲಿಸಬೇಕು. ಮೆಚ್ಯೂರಿಟಿ ಆದ ಒಂದು ವರ್ಷದೊಳಗೆ ಇದನ್ನು ಮಾಡಬೇಕು.

ಸುರಕ್ಷಿತ ಹೂಡಿಕೆಗೆ ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌(ಪಿಪಿಎಫ್) ಅತ್ಯುತ್ತಮ ಆಯ್ಕೆ. ಸರಕಾರದ ಬೆಂಬಲ ಇರುವುದರಿಂದ ನಮ್ಮ ಉಳಿತಾಯಕ್ಕೆ ಹೆಚ್ಚಿನ ಖಾತರಿ ಲಭಿಸುತ್ತದೆ. ಇಷ್ಟಲ್ಲದೇ ನಿಶ್ಚಿತವಾದ ರಿಟರ್ನ್ಸ್ ಮತ್ತು ಬಡ್ಡಿ ದರ ಲಭಿಸುತ್ತದೆ. ಹದಿನೈದು ವರ್ಷಗಳಿಗೆ ಪಿಪಿಎಫ್ ಮೆಚ್ಯೂರಿಟಿ ಆಗುತ್ತದೆ.

ಇದರಲ್ಲಿ ಹೂಡಿಕೆ ಮಾಡುವ ಸಂದರ್ಭ ಕೆಲವೊಂದು ಅಂಶಗಳನ್ನು ನೆನಪಿನಲ್ಲಿಡುವುದು ಆವಶ್ಯಕ. ಒಂದು ವರ್ಷಕ್ಕೆ ಕನಿಷ್ಠ ಎಂದರೆ 500 ರೂ. ಮತ್ತು ಗರಿಷ್ಠ 1,50,000ರೂ. ಹೂಡಿಕೆ ಮಾಡಬಹುದು. ಇದು ಬ್ಯಾಂಕ್‌ ಮತ್ತು ಅಂಚೆ ಕಚೇರಿಗಳಲ್ಲಿ ದೊರೆಯುತ್ತದೆ.

ಪಿಪಿಎಫ್ನಲ್ಲಿ ಮಾಡುವ ಹೂಡಿಕೆಗೆ ಆದಾಯ ತೆರಿಗೆಯಲ್ಲಿ ಸೆಕ್ಷನ್‌ 80ಇ ಅಡಿ ವಿನಾಯಿತಿ ಸಿಗುತ್ತದೆ. ಹೂಡಿಕೆ ಮಾಡುವ ಮೊತ್ತ, ಅದರಿಂದ ಗಳಿಸುವ ಬಡ್ಡಿ ಹಾಗೂ ಮೆಚ್ಯೂರಿಟಿ ಮೊತ್ತಕ್ಕೆ ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ವಿನಾಯಿತಿ (Exempt) ನೀಡಲಾಗುತ್ತದೆ. ಒಂದು ಸಲ ಪಿಪಿಎಫ್ ಮೊತ್ತ ಮೆಚ್ಯೂರ್‌ ಆದ ಅನಂತರ ಹೂಡಿಕೆದಾರರ ಮುಂದೆ ಮೂರು ಆಯ್ಕೆಗಳಿರುತ್ತವೆ.

– ಪಿಪಿಎಫ್ ಖಾತೆಯನ್ನು ಕೊನೆಗೊಳಿಸುವುದು.
– ಹೊಸದಾಗಿ ಯಾವುದೇ ಮೊತ್ತ ಹೂಡಿಕೆ ಮಾಡದೆ ಇನ್ನೂ ಐದು ವರ್ಷ ಮುಂದುವರಿಸುವುದು.
– ಪಿಪಿಎಫ್ ಖಾತೆ ಕೊನೆಗೊಳಿಸುವುದು. ಪಿಪಿಎಫ್ ಖಾತೆ ಕೊನೆಗೊಳಿಸಿ, ಆ ಮೊತ್ತವನ್ನು ಉಳಿತಾಯ ಖಾತೆಗೆ ವರ್ಗಾವಣೆ ಮಾಡಿಕೊಳ್ಳಬಹುದು.

ಇದಕ್ಕಾಗಿ ಆಯಾ ಬ್ಯಾಂಕ್‌ ಅಥವಾ ಅಂಚೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಪಿಪಿಎಫ್ ಖಾತೆಯ ಒರಿಜಿನಲ್‌ ಪಾಸ್‌ ಬುಕ್‌, ಕ್ಯಾನ್ಸಲ್‌ ಆದ ಚೆಕ್‌ ಹಾಗೂ ಅರ್ಜಿ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಹೂಡಿಕೆದಾರರಿಗೆ ತತ್‌ಕ್ಷಣಕ್ಕೆ ಹಣದ ಅಗತ್ಯ ಇಲ್ಲ ಎಂದಾದಲ್ಲಿ ಪಿಪಿಎಫ್ ಖಾತೆಗೆ ಯಾವುದೇ ಹೆಚ್ಚುವರಿ ಹಣ ಹಾಕದೆ ಅದನ್ನು ಮುಂದುವರಿಸಬಹುದು. ಅದಕ್ಕೆ ಬಡ್ಡಿ ಬರುತ್ತದೆ. ಇದಕ್ಕೆ ಯಾವುದೇ ಅರ್ಜಿ ನೀಡುವ ಅಗತ್ಯ ಇಲ್ಲ. ಹೂಡಿಕೆದಾರರಿಗೆ ಆರ್ಥಿಕ ವರ್ಷದಲ್ಲಿ ಒಮ್ಮೆ ಹಣ ವಿಥ್‌ ಡ್ರಾ ಮಾಡುವ ಆಯ್ಕೆ ಇರುತ್ತದೆ.

ಪಿಪಿಎಫ್ ಖಾತೆಯನ್ನು ಐದು ವರ್ಷಗಳಂತೆ ಎಷ್ಟು ಅವಧಿಗಳಿಗೆ ಬೇಕಾದರೂ ವಿಸ್ತರಿಸಬಹುದಾಗಿದೆ. ಪಿಪಿಎಫ್ ಖಾತೆ ಎಪ್ರಿಲ್‌ನಲ್ಲಿ ಮೆಚ್ಯೂರಿಟಿ ಆಗುತ್ತದೆ. ಆದ್ದರಿಂದ ಹೊಸದಾಗಿ ಹೂಡಿಕೆ ಮಾಡುವತ್ತ ಚಿಂತಿಸಬಹುದು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.