ಪಂಜಾಬ್: ತೀವ್ರಗೊಂಡ ಪ್ರತಿಭಟನೆ : ಸೆ. 29ರ ವರೆಗೂ ರೈಲು ತಡೆಗೆ ರೈತರ ನಿರ್ಧಾರ
Team Udayavani, Sep 27, 2020, 6:30 AM IST
ಹೊಸದಿಲ್ಲಿ: ಸಂಸತ್ನಲ್ಲಿ ಅಂಗೀಕಾರಗೊಂಡಿರುವ 3 ಕೃಷಿ ಮಸೂದೆಗಳ ವಿರುದ್ಧದ ರೈತರ ಪ್ರತಿಭಟನೆ ಶನಿವಾರವೂ ಮುಂದುವರಿದಿತ್ತು. ಪಂಜಾಬ್, ಹರಿಯಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನ್ನದಾತರು ರ್ಯಾಲಿ, ಪ್ರತಿಭಟನೆಗಳನ್ನು ಕೈಗೊಂಡಿದ್ದಾರೆ.
ಪಂಜಾಬ್ನ ವಿವಿಧ ಭಾಗಗಳಲ್ಲಿ ರೈತ ಸಂಘಟನೆಗಳು ರೈಲು ತಡೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. ಅಮೃತಸರದಲ್ಲಿ ರೈತರು ತಮ್ಮ ಅಂಗಿಗಳನ್ನು ಬಿಚ್ಚಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಸೆ.26ರವರೆಗೆ ನಡೆಯಲಿದೆ ಎಂದು ಘೋಷಿಸಲಾಗಿದ್ದ ರೈಲು ತಡೆಯನ್ನು ಸೆ.29ರವ ರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 28ರಷ್ಟು ರೈಲುಗಳ ಸಂಚಾರವನ್ನು ರೈಲ್ವೇ ಇಲಾಖೆ ರದ್ದುಮಾಡಿದೆ.
ಭತ್ತ ಖರೀದಿ ಪ್ರಕ್ರಿಯೆ ಆರಂಭ
ರೈತರ ಪ್ರತಿಭಟನೆಗಳ ನಡುವೆಯೇ ಪಂಜಾಬ್ ಮತ್ತು ಹರಿಯಾಣದಲ್ಲಿ ತತ್ಕ್ಷಣವೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರಕಾರ ಆದೇಶಿಸಿದೆ. ಬಹುತೇಕ ರಾಜ್ಯಗಳಲ್ಲಿ ಮುಂದಿನ ವಾರ ದಿಂದ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಆದರೆ, ಈ ಎರಡು ರಾಜ್ಯಗಳಲ್ಲಿ ಶನಿವಾರ ದಿಂದಲೇ ಭತ್ತ ಖರೀದಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ರೈತರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದೂ ಅವರು ಹೇಳಿದ್ದಾರೆ.
ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿರುವವರು ರೈತ ವಿರೋಧಿಗಳು. ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆಯನ್ನು ಪ್ರಧಾನಿ ಮೋದಿ ನೀಡಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಈ ಮಸೂದೆ ಅಂಗೀಕರಿಸಲಾಗಿದೆ.
– ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ