ಪುತ್ತೂರು: ನೀರಿನ ಟ್ಯಾಂಕ್ಗೆ ಬಿದ್ದು 3 ಮಕ್ಕಳು ಸಾವು
Team Udayavani, Apr 3, 2019, 8:52 PM IST
ಪುತ್ತೂರು: ನೀರಿನ ಟ್ಯಾಂಕಿಗೆ ಬಿದ್ದು ಮೂರೂ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪಾಣಜೆ ಬಳಿಯ ಅರ್ಲ ಪದವಿನ ಉಡ್ಡ೦ಗಳ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ(13) ,ಚೈತ್ರಾ (10)ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ . ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳು . ಇಂದು ಶಾಲೆಗೆ ರಜೆಯಿದ್ದ ಕಾರಣ ಆಟವಾಡಲು ತೆರಳಿದ್ದರು ,ಆಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.