ಪುತ್ತೂರು ಕಂಬಳ ಗದ್ದೆಯಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಯುವಕ ವಶಕ್ಕೆ
Team Udayavani, Feb 1, 2023, 5:45 AM IST
ಪುತ್ತೂರು: ಪುತ್ತೂರಿನ ಕೋಟಿ ಚೆನ್ನಯ ಕಂಬಳ ಗದ್ದೆ ಪರಿಸರದಲ್ಲಿ ಯುವಕನೋರ್ವ ಯುವತಿಯ ಫೋಟೋ ತೆಗೆಯುತ್ತಿದ್ದ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಪೊಲೀಸರಿಗೊಪ್ಪಿಸಿದ ಮತ್ತು ವಿಚಾರಣೆ ವೇಳೆ ಆತನ ಮೊಬೈಲ್ನಲ್ಲಿ ಅನೇಕ ಯುವತಿಯರ ಪೊಟೋ ಇರುವುದು ಬೆಳಕಿಗೆ ಬಂದಿದೆ.
ಕುರಿಯ ಮೂಲದ ಯುವಕ ಎಂದು ವಿಚಾರಣೆ ವೇಳೆ ತಿಳಿದು ಬಂದಿದ್ದು ಈತ ಕಂಬಳದ ಪರಿಸರದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ. ಈ ಸಂದರ್ಭ ಓರ್ವ ಯುವತಿ ಇದನ್ನು ಗಮನಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಳು. ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದಿದ್ದು, ಯುವಕನ ಮೊಬೈಲ್ ಪರಿಶೀಲನೆ ನಡೆಸಿದಾಗ ಇನ್ನು ಹಲವು ಯುವತಿಯರ ಫೋಟೋಗಳು ಇರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ, ಯುವಕನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು