
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ; ಕೆರೆಯ ತಳಭಾಗದಲ್ಲಿ ವರುಣಾ ದೇವರ ಮೂರ್ತಿ ದರ್ಶನ
ತಳಭಾಗದಲ್ಲಿರುವ ಶ್ರೀವರುಣ ದೇವರನ್ನು ಶುಚಿಗೊಳಿಸಿ ಪೂಜೆ ನೆರವೇರಿಸಲಾಗಿದೆ.
Team Udayavani, Mar 28, 2023, 6:34 PM IST

ಪುತ್ತೂರು: ಇಲ್ಲಿನ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವರ ಕೆರೆಯ ಮಧ್ಯದ ದೇವರ ಕಟ್ಟೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಕೆರೆಯ ಪುಷ್ಕರಣಿ ಒಳಗಿನ ನೀರನ್ನು ಖಾಲಿ ಮಾಡಿದ್ದು, ಈ ಸಂದರ್ಭದಲ್ಲಿ ಭಕ್ತರು ಕೆರೆಯ ತಳದಲ್ಲಿರುವ ಶ್ರೀ ವರುಣ ದೇವರ ಮೂರ್ತಿಯ ದರ್ಶನ ಪಡೆದು ಕಣ್ತುಂಬಿಕೊಂಡರು.
ಇದನ್ನೂ ಓದಿ:ಏಷ್ಯಾದ ಅತೀ ದೊಡ್ಡ ಟ್ಯೂಲಿಪ್ ಹೂಗಳ ಉದ್ಯಾನವನ; ಒಂದೇ ವಾರದಲ್ಲಿ 1 ಲಕ್ಷ ಪ್ರವಾಸಿಗರ ಭೇಟಿ
ಶ್ರೀ ವರುಣ ದೇವರ ಮೂರ್ತಿಯನ್ನು ಶುಚಿಗೊಳಿಸಿ ಪೂಜೆ ನೆರವೇರಿಸಲಾಯಿತು. ಕೆರೆಯ ಹೊಸ ಕಟ್ಟೆಯ ನವೀಕರಣದ ನಿಟ್ಟಿನಲ್ಲಿ ನೀರನ್ನು ಹೊರ ತೆಗೆಯಲಾಗಿದೆ. ಅದರಂತೆ ಸುಮಾರು 35 ವರ್ಷಗಳ ನಂತರ ಪುಷ್ಕರಣಿಯ ತಳಭಾಗದಲ್ಲಿರುವ ಶ್ರೀವರುಣ ದೇವರನ್ನು ಶುಚಿಗೊಳಿಸಿ ಪೂಜೆ ನೆರವೇರಿಸಲಾಗಿದೆ.
ಸುಮಾರು 1987ರಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕೆರೆಯಲ್ಲಿ ವರುಣನ ವಿಗ್ರಹ ಇರುವ ಬಗ್ಗೆ ತಿಳಿದು ಬಂದಿದ್ದು, ಅಂದು ಕೆರೆಯನ್ನು ಸ್ವಚ್ಚಗೊಳಿಸಿ ವರುಣ ದೇವರಿಗೆ ಪೂಜೆ ಸಲ್ಲಿಸಲಾಗಿತ್ತು. ಶೀಘ್ರದಲ್ಲೇ ನೂತನ ಪುಷ್ಕರಣೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ಕೆ ಭಕ್ತರು ತನು, ಮನ, ಧನ ಸಹಾಯ ನೀಡಬೇಕೆಂದು ಮಹಾಲಿಂಗೇಶ್ವರ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ