ಯು.ಕೆ.ಗೆ ಕ್ವಾರಂಟೈನ್‌ ತಿರುಗೇಟು


Team Udayavani, Oct 2, 2021, 6:40 AM IST

ಯು.ಕೆ.ಗೆ ಕ್ವಾರಂಟೈನ್‌ ತಿರುಗೇಟು

ಹೊಸದಿಲ್ಲಿ/ವಾಷಿಂಗ್ಟನ್‌: ಭಾರತದಿಂದ 2 ಡೋಸ್‌ ಲಸಿಕೆ ಪಡೆದುಕೊಂಡಿದ್ದರೂ ಪ್ರಮಾಣಪತ್ರ ಕ್ರಮಬದ್ಧವಾಗಿಲ್ಲ ಎಂದು ತಕರಾರು ತೆಗೆದಿರುವ ಯುನೈಟೆಡ್‌ ಕಿಂಗ್‌ಡಮ್‌ಗೆ ಕೇಂದ್ರ ಸರಕಾರದ ಸರಿಯಾದ ಪಾಠ ಕಲಿಸಿದೆ. ಅ.4ರಿಂದ ಅನ್ವಯವಾಗುವಂತೆ ಯು.ಕೆ.ಯಿಂದ ದೇಶಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಹತ್ತು ದಿನಗಳ ಕ್ವಾರಂಟೈನ್‌ ನಿಯಮ ಕಡ್ಡಾಯಗೊಳಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಆ ದೇಶದಿಂದ ಆಗಮಿಸುವರಲ್ಲಿ ಲಸಿಕೆ ಪಡೆದವರು, ಪಡೆಯದವರು ಎಂಬ ವರ್ಗೀಕರಣ ಮಾಡದೆ ನಿಯಮ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ. ಇದರ ಜತೆಗೆ ಪ್ರಯಾಣಕ್ಕೆ 72 ಗಂಟೆಗಳ ಮುನ್ನ ನಡೆಸಲಾಗಿರುವ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ಪ್ರಮಾಣ ಪತ್ರವನ್ನು ಪ್ರಯಾಣಿಕರು ಹಾಜರುಪಡಿಸಬೇಕಿದೆ.

ಯುನೈಟೆಡ್‌ ಕಿಂಗ್‌ಡಮ್‌ ಸರಕಾರ ಅ.4ರಿಂದ ಅನ್ವಯವಾಗುವಂತೆ ನಿಯ ಮಗಳಲ್ಲಿ ಬದಲಾವಣೆ ಮಾಡಿತ್ತು. ಈ ಪೈಕಿ ಕೊವಿಶೀಲ್ಡ್‌ ಅನ್ನು ಮಾನ್ಯತೆ ಪಡೆದ ಲಸಿಕೆಯ ಪಟ್ಟಿಗೆ ಸೇರಿಸಿರಲಿಲ್ಲ. ಜತೆಗೆ ಪ್ರಮಾಣಪತ್ರಕ್ಕೂ ತಕರಾರು ತೆಗೆದಿತ್ತು. ಕೇಂದ್ರ ಸರಕಾರ ಪ್ರಬಲ ಆಕ್ಷೇಪ ಮಾಡಿದ ಬಳಿಕ ಕೊವಿಶೀಲ್ಡ್‌ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಗೆ ಸೇರಿಸಲಾಗಿತ್ತು. ಆದರೆ ಪ್ರಮಾಣಪತ್ರದ ಬಗ್ಗೆ ಮಾತ್ರ ಅಲ್ಲಿನ ಸರಕಾರ ಕ್ರಮ ಕೈಗೊಳ್ಳಲೇ ಇಲ್ಲ. ಈ ಬಗ್ಗೆ ಪದೇ ಪದೆ ಮನವಿ ಮಾಡಿದ್ದರೂ, ಪ್ರಯೋಜನವಾಗದ್ದರಿಂದ ಕೇಂದ್ರ ಕ್ವಾರಂಟೈನ್‌ ನಿಯಮ ಕಡ್ಡಾಯಗೊಳಿಸಿದೆ.

196 ದಿನಗಳಿಗೆ ಕನಿಷ್ಠ: ದೇಶದಲ್ಲಿ 196 ದಿನಗಳಿಗೆ ಹೋಲಿಕೆ ಮಾಡಿದರೆ, ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ ಸಕ್ರಿಯ ಸೋಂಕು ಸಂಖ್ಯೆ 2,75,224ಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್‌ ಬಳಿಕ ಕನಿಷ್ಠದ್ದು. ಇನ್ನು ಇದೇ ಅವಧಿ ಯಲ್ಲಿ 26, 727 ಹೊಸ ಸೋಂಕು ದೃಢಪಟ್ಟಿದೆ. ಇದು ಶೇ.13ರಷ್ಟು ಹೆಚ್ಚಳವಾಗಿದೆ. ಜತೆಗೆ 277 ಮಂದಿ ಸಾವನ್ನಪ್ಪಿದ್ದಾರೆ. ಚೇತರಿಕೆ ಪ್ರಮಾಣ ಶೇ.97.86 ಆಗಿದೆ.

ಇದನ್ನೂ ಓದಿ:ಕಾಂಗ್ರೆಸ್‌ ವರ್ಸಸ್‌ ಕ್ಯಾಪ್ಟನ್‌ ಮಾಜಿ ಸಿಎಂ-ರಾವತ್‌ ವಾಕ್ಸಮರ

18 ತಿಂಗಳ ಆಸೀಸ್‌ ನಿರ್ಬಂಧ ಅಂತ್ಯ
ಬರೋಬ್ಬರಿ 18 ತಿಂಗಳ ಬಳಿಕ ಆಸ್ಟ್ರೇಲಿಯಾ ಸರಕಾರ ಲಾಕ್‌ ಡೌನ್‌ ನಿಯಮಗಳನ್ನು ಸಡಿಲಿಸಿದೆ. ಮುಂದಿನ ತಿಂಗಳಿಂದ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಅನುಮತಿ ನೀಡಿದೆ. ಮೊದಲನೇ ಹಂತದಲ್ಲಿ ಆಸೀಸ್‌ ಪ್ರಜೆಗಳಿಗೆ ಮತ್ತು ಆ ದೇಶದ ಶಾಶ್ವತ ಪೌರತ್ವ ಹೊಂದಿದವರಿಗೆ, ಅನಂತರದ ಹಂತದಲ್ಲಿ ಇತರ ದೇಶಗಳ ಪ್ರಯಾಣಿಕರಿಗೆ ಅನುಮತಿ ನೀಡಲಾಗುತ್ತದೆ. ಲಸಿಕೆ ಪಡೆದವರು ವಿದೇಶಕ್ಕೆ ತೆರಳಿದರೆ, 7 ದಿನ ಗಳ ಹೋಂ ಕ್ವಾರಂಟೈನ್‌ ಹಾಗೂ ಲಸಿಕೆ ಪೂರ್ಣ ವಾಗದವರು ಪ್ರಯಾಣ ಮಾಡಿ ಬಂದರೆ 14 ದಿನಗಳ ಕಾಲ ಹೋಟೆಲ್ ನಲ್ಲಿ ಕ್ವಾರಂಟೈನ್‌ ಆಗ ಬೇಕು ಎಂದು ಪ್ರಧಾನಿ ಸ್ಕಾಟ್‌ ಮಾರಿಸನ್‌ ತಿಳಿಸಿದ್ದಾರೆ.

ಕೊವಿಶೀಲ್ಡ್‌ಗೆ ಮಾನ್ಯತೆ
ದೇಶದ ಕೊವಿಶೀಲ್ಡ್‌ ಲಸಿಕೆಗೆ ಆಸ್ಟ್ರೇಲಿಯಾ ಸರಕಾರ ಮಾನ್ಯತೆ ನೀಡಿದೆ. ಹೀಗಾಗಿ, ಅದನ್ನು ಪಡೆದುಕೊಂಡ ದೇಶದ ವಿದ್ಯಾರ್ಥಿಗಳಿಗೆ ಆ ದೇಶಕ್ಕೆ ಪ್ರಯಾಣ ಮಾಡುವುದು ಸುಲಭವಾಗಲಿದೆ. ಈ ಬಗ್ಗೆ ಕೇಂದ್ರ ಸರಕಾರ ಆಸೀಸ್‌ ಪ್ರಧಾನಿ ಸ್ಕಾಟ್‌ ಮಾರಿಸನ್‌ಗೆ ಒತ್ತಡ ಹೇರಿತ್ತು. ಇದರ ಜತೆಗೆ ಅಲ್ಲಿನ ಸರಕಾರ ಚೀನದ ಸಿನೊವಾಕ್‌ ಲಸಿಕೆಗೆ ಕೂಡ ಮಾನ್ಯತೆ ಸಿಕ್ಕಿದೆ.

ಕೊರೊನಾಕ್ಕೆ ಬರಲಿದೆ ಮಾತ್ರೆ!
ಅಮೆರಿಕದ ಮೆರ್ಕ್‌ ಆ್ಯಂಡ್‌ ರಿಡ್ಜ್ಬ್ಯಾಕ್‌ ಬಯೋಥೆರಪ್ಯೂಟಿಕ್ಸ್‌ ಎಂಬ ಔಷಧ ಕಂಪೆನಿ ಸೋಂಕಿಗೆ ಮಾತ್ರೆಯನ್ನು ಅಭಿವೃದ್ಧಿಪಡಿಸಿ ರುವುದಾಗಿ ಹೇಳಿಕೊಂಡಿದೆ. ಅದಕ್ಕೆ ಮಾಲ್‌ನ್ಯುಪಿರಾವಿರ್‌ (molnupiravir ) ಎಂಬ ಹೆಸರು ಇರಿಸಲಾಗಿದೆ. ಅದನ್ನು ತೆಗೆದುಕೊಂಡರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುವ ಅಗತ್ಯ ಬರುವುದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ. ಸದ್ಯ ಮೂರನೇ ಹಂತದ ಪ್ರಯೋಗಗಳು ನಡೆಯುತ್ತಿದೆ. ಕಂಪೆನಿ ಹೇಳಿಕೊಂಡಿರುವ ಪ್ರಕಾರ ಅದು ಶೇ.50ರಷ್ಟು ಸಾವು ಸಂಭವಿಸುವುದನ್ನು ತಡೆ ಯುತ್ತದೆ. ಒಂದು ವೇಳೆ ಅಮೆರಿಕ ಸರಕಾರ ಅದಕ್ಕೆ ಅನುಮತಿ ನೀಡಿದರೆ, ಜಗತ್ತಿನ ಮೊದ ಲನೇಯದ್ದು ಎಂಬ ಹೆಗ್ಗಳಿಕೆ ಅದಕ್ಕೆ ಸಿಗಲಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.