ಯು.ಕೆ.ಗೆ ಕ್ವಾರಂಟೈನ್‌ ತಿರುಗೇಟು


Team Udayavani, Oct 2, 2021, 6:40 AM IST

ಯು.ಕೆ.ಗೆ ಕ್ವಾರಂಟೈನ್‌ ತಿರುಗೇಟು

ಹೊಸದಿಲ್ಲಿ/ವಾಷಿಂಗ್ಟನ್‌: ಭಾರತದಿಂದ 2 ಡೋಸ್‌ ಲಸಿಕೆ ಪಡೆದುಕೊಂಡಿದ್ದರೂ ಪ್ರಮಾಣಪತ್ರ ಕ್ರಮಬದ್ಧವಾಗಿಲ್ಲ ಎಂದು ತಕರಾರು ತೆಗೆದಿರುವ ಯುನೈಟೆಡ್‌ ಕಿಂಗ್‌ಡಮ್‌ಗೆ ಕೇಂದ್ರ ಸರಕಾರದ ಸರಿಯಾದ ಪಾಠ ಕಲಿಸಿದೆ. ಅ.4ರಿಂದ ಅನ್ವಯವಾಗುವಂತೆ ಯು.ಕೆ.ಯಿಂದ ದೇಶಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಹತ್ತು ದಿನಗಳ ಕ್ವಾರಂಟೈನ್‌ ನಿಯಮ ಕಡ್ಡಾಯಗೊಳಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಆ ದೇಶದಿಂದ ಆಗಮಿಸುವರಲ್ಲಿ ಲಸಿಕೆ ಪಡೆದವರು, ಪಡೆಯದವರು ಎಂಬ ವರ್ಗೀಕರಣ ಮಾಡದೆ ನಿಯಮ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ. ಇದರ ಜತೆಗೆ ಪ್ರಯಾಣಕ್ಕೆ 72 ಗಂಟೆಗಳ ಮುನ್ನ ನಡೆಸಲಾಗಿರುವ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ಪ್ರಮಾಣ ಪತ್ರವನ್ನು ಪ್ರಯಾಣಿಕರು ಹಾಜರುಪಡಿಸಬೇಕಿದೆ.

ಯುನೈಟೆಡ್‌ ಕಿಂಗ್‌ಡಮ್‌ ಸರಕಾರ ಅ.4ರಿಂದ ಅನ್ವಯವಾಗುವಂತೆ ನಿಯ ಮಗಳಲ್ಲಿ ಬದಲಾವಣೆ ಮಾಡಿತ್ತು. ಈ ಪೈಕಿ ಕೊವಿಶೀಲ್ಡ್‌ ಅನ್ನು ಮಾನ್ಯತೆ ಪಡೆದ ಲಸಿಕೆಯ ಪಟ್ಟಿಗೆ ಸೇರಿಸಿರಲಿಲ್ಲ. ಜತೆಗೆ ಪ್ರಮಾಣಪತ್ರಕ್ಕೂ ತಕರಾರು ತೆಗೆದಿತ್ತು. ಕೇಂದ್ರ ಸರಕಾರ ಪ್ರಬಲ ಆಕ್ಷೇಪ ಮಾಡಿದ ಬಳಿಕ ಕೊವಿಶೀಲ್ಡ್‌ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಗೆ ಸೇರಿಸಲಾಗಿತ್ತು. ಆದರೆ ಪ್ರಮಾಣಪತ್ರದ ಬಗ್ಗೆ ಮಾತ್ರ ಅಲ್ಲಿನ ಸರಕಾರ ಕ್ರಮ ಕೈಗೊಳ್ಳಲೇ ಇಲ್ಲ. ಈ ಬಗ್ಗೆ ಪದೇ ಪದೆ ಮನವಿ ಮಾಡಿದ್ದರೂ, ಪ್ರಯೋಜನವಾಗದ್ದರಿಂದ ಕೇಂದ್ರ ಕ್ವಾರಂಟೈನ್‌ ನಿಯಮ ಕಡ್ಡಾಯಗೊಳಿಸಿದೆ.

196 ದಿನಗಳಿಗೆ ಕನಿಷ್ಠ: ದೇಶದಲ್ಲಿ 196 ದಿನಗಳಿಗೆ ಹೋಲಿಕೆ ಮಾಡಿದರೆ, ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ ಸಕ್ರಿಯ ಸೋಂಕು ಸಂಖ್ಯೆ 2,75,224ಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್‌ ಬಳಿಕ ಕನಿಷ್ಠದ್ದು. ಇನ್ನು ಇದೇ ಅವಧಿ ಯಲ್ಲಿ 26, 727 ಹೊಸ ಸೋಂಕು ದೃಢಪಟ್ಟಿದೆ. ಇದು ಶೇ.13ರಷ್ಟು ಹೆಚ್ಚಳವಾಗಿದೆ. ಜತೆಗೆ 277 ಮಂದಿ ಸಾವನ್ನಪ್ಪಿದ್ದಾರೆ. ಚೇತರಿಕೆ ಪ್ರಮಾಣ ಶೇ.97.86 ಆಗಿದೆ.

ಇದನ್ನೂ ಓದಿ:ಕಾಂಗ್ರೆಸ್‌ ವರ್ಸಸ್‌ ಕ್ಯಾಪ್ಟನ್‌ ಮಾಜಿ ಸಿಎಂ-ರಾವತ್‌ ವಾಕ್ಸಮರ

18 ತಿಂಗಳ ಆಸೀಸ್‌ ನಿರ್ಬಂಧ ಅಂತ್ಯ
ಬರೋಬ್ಬರಿ 18 ತಿಂಗಳ ಬಳಿಕ ಆಸ್ಟ್ರೇಲಿಯಾ ಸರಕಾರ ಲಾಕ್‌ ಡೌನ್‌ ನಿಯಮಗಳನ್ನು ಸಡಿಲಿಸಿದೆ. ಮುಂದಿನ ತಿಂಗಳಿಂದ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಅನುಮತಿ ನೀಡಿದೆ. ಮೊದಲನೇ ಹಂತದಲ್ಲಿ ಆಸೀಸ್‌ ಪ್ರಜೆಗಳಿಗೆ ಮತ್ತು ಆ ದೇಶದ ಶಾಶ್ವತ ಪೌರತ್ವ ಹೊಂದಿದವರಿಗೆ, ಅನಂತರದ ಹಂತದಲ್ಲಿ ಇತರ ದೇಶಗಳ ಪ್ರಯಾಣಿಕರಿಗೆ ಅನುಮತಿ ನೀಡಲಾಗುತ್ತದೆ. ಲಸಿಕೆ ಪಡೆದವರು ವಿದೇಶಕ್ಕೆ ತೆರಳಿದರೆ, 7 ದಿನ ಗಳ ಹೋಂ ಕ್ವಾರಂಟೈನ್‌ ಹಾಗೂ ಲಸಿಕೆ ಪೂರ್ಣ ವಾಗದವರು ಪ್ರಯಾಣ ಮಾಡಿ ಬಂದರೆ 14 ದಿನಗಳ ಕಾಲ ಹೋಟೆಲ್ ನಲ್ಲಿ ಕ್ವಾರಂಟೈನ್‌ ಆಗ ಬೇಕು ಎಂದು ಪ್ರಧಾನಿ ಸ್ಕಾಟ್‌ ಮಾರಿಸನ್‌ ತಿಳಿಸಿದ್ದಾರೆ.

ಕೊವಿಶೀಲ್ಡ್‌ಗೆ ಮಾನ್ಯತೆ
ದೇಶದ ಕೊವಿಶೀಲ್ಡ್‌ ಲಸಿಕೆಗೆ ಆಸ್ಟ್ರೇಲಿಯಾ ಸರಕಾರ ಮಾನ್ಯತೆ ನೀಡಿದೆ. ಹೀಗಾಗಿ, ಅದನ್ನು ಪಡೆದುಕೊಂಡ ದೇಶದ ವಿದ್ಯಾರ್ಥಿಗಳಿಗೆ ಆ ದೇಶಕ್ಕೆ ಪ್ರಯಾಣ ಮಾಡುವುದು ಸುಲಭವಾಗಲಿದೆ. ಈ ಬಗ್ಗೆ ಕೇಂದ್ರ ಸರಕಾರ ಆಸೀಸ್‌ ಪ್ರಧಾನಿ ಸ್ಕಾಟ್‌ ಮಾರಿಸನ್‌ಗೆ ಒತ್ತಡ ಹೇರಿತ್ತು. ಇದರ ಜತೆಗೆ ಅಲ್ಲಿನ ಸರಕಾರ ಚೀನದ ಸಿನೊವಾಕ್‌ ಲಸಿಕೆಗೆ ಕೂಡ ಮಾನ್ಯತೆ ಸಿಕ್ಕಿದೆ.

ಕೊರೊನಾಕ್ಕೆ ಬರಲಿದೆ ಮಾತ್ರೆ!
ಅಮೆರಿಕದ ಮೆರ್ಕ್‌ ಆ್ಯಂಡ್‌ ರಿಡ್ಜ್ಬ್ಯಾಕ್‌ ಬಯೋಥೆರಪ್ಯೂಟಿಕ್ಸ್‌ ಎಂಬ ಔಷಧ ಕಂಪೆನಿ ಸೋಂಕಿಗೆ ಮಾತ್ರೆಯನ್ನು ಅಭಿವೃದ್ಧಿಪಡಿಸಿ ರುವುದಾಗಿ ಹೇಳಿಕೊಂಡಿದೆ. ಅದಕ್ಕೆ ಮಾಲ್‌ನ್ಯುಪಿರಾವಿರ್‌ (molnupiravir ) ಎಂಬ ಹೆಸರು ಇರಿಸಲಾಗಿದೆ. ಅದನ್ನು ತೆಗೆದುಕೊಂಡರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುವ ಅಗತ್ಯ ಬರುವುದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ. ಸದ್ಯ ಮೂರನೇ ಹಂತದ ಪ್ರಯೋಗಗಳು ನಡೆಯುತ್ತಿದೆ. ಕಂಪೆನಿ ಹೇಳಿಕೊಂಡಿರುವ ಪ್ರಕಾರ ಅದು ಶೇ.50ರಷ್ಟು ಸಾವು ಸಂಭವಿಸುವುದನ್ನು ತಡೆ ಯುತ್ತದೆ. ಒಂದು ವೇಳೆ ಅಮೆರಿಕ ಸರಕಾರ ಅದಕ್ಕೆ ಅನುಮತಿ ನೀಡಿದರೆ, ಜಗತ್ತಿನ ಮೊದ ಲನೇಯದ್ದು ಎಂಬ ಹೆಗ್ಗಳಿಕೆ ಅದಕ್ಕೆ ಸಿಗಲಿದೆ.

ಟಾಪ್ ನ್ಯೂಸ್

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!

1-awwqeqwe

ಕೊಚ್ಚಿನ್ ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.