ಸಂಧಾನ ಯಶಸ್ವಿ:ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಶೀಘ್ರವೇ ನಿರ್ಧಾರ: ಎಂಟಿಬಿ
Team Udayavani, Jul 13, 2019, 11:58 AM IST
ಬೆಂಗಳೂರು: ಶಾಸಕ ಸುಧಾಕರ್ ಅವರ ಜೊತೆ ಚರ್ಚಿಸಿ ರಾಜೀನಾಮೆ ವಾಪಸ್ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ..ಇದು ಅತೃಪ್ತ ಶಾಸಕ, ಸಚಿವ ಎಂಟಿಬಿ ನಾಗರಾಜ್ ಹೇಳಿಕೆ.
ಶನಿವಾರ ಮುಂಜಾನೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್ ದಿಢೀರ್ ಎಂಬಂತೆ ಎಂಟಿಬಿ ನಾಗರಾಜ್ ಮನೆಗೆ ಭೇಟಿ ನೀಡಿ ಸುಮಾರು ಆರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಎಂಟಿಬಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರು ನನ್ನ ಮನವಲಿಕೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾನು ಸುಧಾಕರ್ ಅವರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಯಾವುದೋ ಒಂದು ಗಳಿಕೆಯಲ್ಲಿ ಏನೋ ನಡೆದು ಹೋಯಿತು. ಅವೆಲ್ಲವನ್ನೂ ಮರೆತು ಇದೀಗ ನಾವೆಲ್ಲ ಒಗ್ಗಟ್ಟಿನಿಂದ ಇರಲು ತೀರ್ಮಾನಿಸಿದ್ದೇವೆ. ಹೀಗಾಗಿ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಎಂಟಿಬಿ ಕಾಲಾವಕಾಶ ಕೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಏತನ್ಮಧ್ಯೆ ಆರು ಗಂಟೆಗಳ ಕಾಲ ಮಾತುಕತೆ ನಡೆಸಿದರೂ ಎಂಟಿಬಿ ನಾಗರಾಜ್ ಮನವೊಲಿಕೆಗೆ ಒಪ್ಪಿಲ್ಲವಾಗಿತ್ತು ಎಂದು ವರದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ