ಪಕ್ಷೇತರರಿಗೆ ಕೂಡಲೇ ಖಾತೆ ಕೊಡಿ, ಶಿಕ್ಷಣ ಸಚಿವರನ್ನು ನೇಮಿಸಿ: ವಿಶ್ವನಾಥ್
Team Udayavani, Jun 18, 2019, 3:14 PM IST
ಬೆಂಗಳೂರು:ಪಕ್ಷೇತರರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈವರೆಗೂ ಖಾತೆ ಹಂಚಿಕೆ ಮಾಡದ ಬಗ್ಗೆ ಜೆಡಿಎಸ್ ಹಿರಿಯ ಮುಖಂಡ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಲಿತರಿಗೆ, ಹಿಂದುಳಿದವರಿಗೆ ಅವಮಾನ ಮಾಡಬೇಡಿ. ಸಚಿವ ಸ್ಥಾನ ನೀಡಿ ಎಷ್ಟು ದಿನ ಆಯಿತು. ಆದರೆ ಖಾತೆ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪುಸ್ತಕ ಸೇರಿದಂತೆ ಹತ್ತಾರು ಸಮಸ್ಯೆ ಗಳಿವೆ. ಮಹೇಶ್ ರಾಜೀನಾಮೆ ಕೊಟ್ಟ ನಂತರ ಇಲಾಖೆಗೆ ಮುಖ್ಯಸ್ಥರೇ ಇಲ್ಲದಂತಾಗಿದೆ. ಈ ಇಲಾಖೆಗೆ ತುರ್ತಾಗಿ ಒಬ್ಬ ಸಚಿವರು ಬೇಕಾಗಿದ್ದಾರೆ ಎಂದರು.
ಮುಖ್ಯಮಂತ್ರಿ ಬಳಿ ಅಬಕಾರಿ ಸೇರಿದಂತೆ ಹಲವು ಖಾತೆಗಳಿವೆ. ಕೆಲವನ್ನು ಬೇರೆಯವರಿಗೆ ಹಂಚಿಕೆ ಮಾಡಲಿ ಎಂದ ವಿಶ್ವನಾಥ್ ಅವರು, ಫಾರುಕ್ ಗೆ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಪ ಸಂಖ್ಯಾತರಿಗೆ ಅವಕಾಶ ನೀಡಲೇ ಬೇಕಿತ್ತು. ಫಾರುಕ್ ಗೆ ಸ್ಥಾನ ಕೊಟ್ಟಿದ್ರೆ, ಒಬ್ಬ ಅಲ್ಪ ಸಂಖ್ಯಾತ, ಒಬ್ಬ ಹಿಂದುಳಿದ ವರ್ಗ, ಒಬ್ಬ ದಲಿತ ರಿಗೆ ಅವಕಾಶ ಕೊಟ್ಟಂತೆ ಆಗ್ತಿತ್ತು. ಜೆಡಿಎಸ್ ಒಂದು ಜಾತ್ಯಾತೀತ ಪಕ್ಷ. ಎಲ್ಲ ವರ್ಗಕ್ಕೂ ಅವಕಾಶ ನೀಡಬೇಕಿತ್ತು ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ