ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಹೊಸ ಪ್ರಯೋಗ, ಹೊಸ ಬೆಳೆಗಳ ಹೊಸ ಚಿಂತನೆಯ ರೈತ ಧರೆಪ್ಪ ಕಿತ್ತೂರ

Team Udayavani, Feb 4, 2023, 7:46 PM IST

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ರಬಕವಿ-ಬನಹಟ್ಟಿ: ಗೊಲಭಾವಿ ತೇರದಾಳ ರಸ್ತೆಯ ರೈತ ಧರೆಪ್ಪ ಕಿತ್ತೂರ ಅವರ ತೋಟ ಅದೊಂದು ಕೃಷಿ ಪ್ರಯೋಗಾಲಯ. ಇಲ್ಲಿ ಕಿತ್ತೂರ ಕೃಷಿಯಲ್ಲಿ ನೂತನ ಪ್ರಯೋಗಗಳನ್ನು ಮಾಡುತ್ತ ಪ್ರತಿಯೊಂದರಲ್ಲೂ ಯಶಸ್ಸು ಸಾಧಿಸುತ್ತ ಹಲವಾರು ವರ್ಷಗಳಿಂದ ಸಾವಯವ ಕೃಷಿ ಮಾಡುತ್ತಾ ಇತರರಿಗೆ ಮಾದರಿಯಾಗಿದ್ದಾರೆ.

ಧರೆಪ್ಪ ತಮ್ಮ ತೋಟದಲ್ಲಿ ಎರಡುವರೆ ದಶಕಗಳಿಂದ ತಮ್ಮ ತೋಟದಲ್ಲಿ ರಾಸಾಯನಿಕ ಗೊಬ್ಬರವನ್ನೆ ಬಳಸಿಲ್ಲ. ಕೇವಲ ದನಕರುಗಳ ಮೂತ್ರ, ಶೆಗಣಿ, ಗಿಡ ಮರಗಳ ಎಲೆಗಳನ್ನು ಬಳಸಿ ಗೊಬ್ಬರವನ್ನು ತಯಾರು ಮಾಡುತ್ತಿದ್ದಾರೆ. ಇನ್ನೂ ಸಸ್ಯಜನ್ಯ ಮತ್ತು ಪ್ರಾಣಿ ಜನ್ಯ ಕೀಟನಾಶಕಗಳನ್ನು ಕಾಲಕ್ಕೆ ತಕ್ಕಂತೆ ತಾವೇ ತಯಾರು ಮಾಡಿಕೊಂಡು ಬೆಳೆಗಳಿಗೆ ನೀಡುತ್ತಾ ಬಂದಿದ್ದಾರೆ.

ಈಗ ಧರೆಪ್ಪ ಕಿತ್ತೂರ ತಮ್ಮ ಒಂದು ಎಕರೆ ತೋಟದಲ್ಲಿ ಕಬ್ಬಿನ ಬೆಳೆಯ ಜೊತೆಗೆ ಅಂತರ ಬೆಳೆಯಾಗಿ 12 ಕ್ಕೂ ಹೆಚ್ಚು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಕಬ್ಬು ಮುಖ್ಯ ಬೆಳೆಯಾದರೆ ಬಿಳಿ ಈರುಳ್ಳಿ, ಸಬಸ್ಸಗಿ, ಮೆಂತೆ, ಕೊತ್ತಂಬರಿ, ಪಾಲಕ, ಮೂಲಂಗಿ, ಮನಸಿನಕಾಯಿ, ಟೊಮೆಟೊ, ಬದನೆ, ಬೆಂಡಿ, ಚವಳಿ, ಬೀಟರೂಟ್‌ಗಳನ್ನು ಬೆಳೆಯುತ್ತಿದ್ದಾರೆ.

ಅವರು ಬೆಳೆಯುತ್ತಿರುವ ಹನ್ನೆರಡು ಬೆಳೆಗಳು ನಾಟಿ ಮಾಡಿದ 35 ದಿನಗಳ ನಂತರ ಇಳುವರಿಯನ್ನು ನೀಡಲು ಆರಂಭಿಸುತ್ತವೆ. ನಂತರ 120 ದಿನಗಳ ಕಾಲ ಸತತವಾಗಿ ಇಳುವರಿಯನ್ನು ನೀಡುತ್ತವೆ. ನಂತರ ಈ ಎಲ್ಲ ಬೆಳೆಗಳನ್ನು ತೆಗೆದು ಕೇವಲ ಕಬ್ಬಿನ ಬೆಳೆ ಮಾತ್ರ ಉಳಿಯುತ್ತದೆ. ಇನ್ನೂ ಮುಖ್ಯವಾಗಿ ತಾವು ಬೆಳೆದ ಬೆಳೆಗಳಿಗೆ ತಾವೇ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿದರೆ, ಬಹಳಷ್ಟು ಮಾರಾಟಗಾರರು ಅವರ ತೋಟಕ್ಕೆ ಬಂದು ಖರೀದಿ ಮಾಡಿಕೊಂಡು ಹೋಗುತ್ತಾರೆ.

ಧರೆಪ್ಪ ಕಿತ್ತೂರ ಮೊಬೈಲ್ ಕೃಷಿ ವಿಶ್ವವಿದ್ಯಾಲಯವಿದ್ದಂತೆ. ಯಾವುದೆ ರೈತರು ಬೆಳೆಗಳ ಕುರಿತು ಮಾಹಿತಿಯನ್ನು ಕೇಳಿದಾಗ ಪ್ರತಿಯೊಂದು ಅಂಶವನ್ನು ಅವರಿಗೆ ತಿಳಿಸಿ ಸಹಾಯ ಮಾಡುತ್ತಾರೆ. ರಾಜ್ಯ ಮತ್ತು ಹೊರ ರಾಜ್ಯಗಳ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧಿಕಾರಿಗಳು ಇವರ ತೋಟಕ್ಕೆ ಭೇಟಿ ನೀಡಿ ಮಾಹಿತಿಯನ್ನು ಕೂಡಾ ಪಡೆದುಕೊಂಡು ಹೋಗುತ್ತಿದ್ದಾರೆ.

ಒಂದೇ ರೀತಿಯ ಬೆಳೆಗಳಿಗೆ ಅಂಟಿಕೊಳ್ಳದೆ ವೈವಿಧ್ಯಮಯವಾದ ಬೆಳೆಗಳನ್ನು ಬೆಳೆಯವುದರಿಂದ ನಿರಂತರವಾದ ಲಾಭವನ್ನು ಮಾಡಿಕೊಳ್ಳಲು ಸಾಧ್ಯ. ಇದರಿಂದಾಗಿ ರೈತರಿಗೆ ಹಣಕಾಸಿನ ತೊಂದರೆಯಾಗುವುದಿಲ್ಲ ಎನ್ನುತ್ತಾರೆ ಧರೆಪ್ಪ ಕಿತ್ತೂರ.

ಕಪ್ಪು ಅರಿಸಿನ ಬೆಳೆಯುತ್ತಿರುವು ರೈತ: ಧರೆಪ್ಪ ಕಿತ್ತೂರ ಸದ್ಯ ಈ ಭಾಗದಲ್ಲಿ ಕಪ್ಪು ಅರಿಸಿನ ಬೆಳೆದು ಗಮನ ಸೆಳೆದಿದ್ದಾರೆ. ಅವರು ಕಪ್ಪು ಅರಿಸಿನದ ಬೀಜಗಳನ್ನು ಹಿಮಾಚಲ ಪ್ರದೇಶದಿಂದ ತೆಗೆದುಕೊಂಡು ಬಂದು ಇಲ್ಲಿ ಬೆಳೆಯುತ್ತಿದ್ದಾರೆ. ಈಗ ಪ್ರಾಯೋಗಿಕವಾಗಿ ತಮ್ಮ ತೋಟದ ಹತ್ತು ಗುಂಟೆ ಪ್ರದೇಶದಲ್ಲಿ ಕಪ್ಪು ಅರಿಸಿನ ಬೆಳೆದು ಲಾಭವನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಅರಿಸಿನಿ ನೇರಳೆ ಇಲ್ಲವೆ ಬೂದು ಬಣ್ಣದ್ದಾಗಿರುತ್ತದೆ. ಇದನ್ನು ಸಂಸ್ಕರಿಸಿದ ನಂತರ ಕಪ್ಪು ಬಣ್ಣದ್ದಾಗುತ್ತದೆ.

ಹಳದಿ ಬಣ್ಣದ ಅರಿಸಿನ ಬೆಳೆಯಲು ಒಂಭತ್ತು ತಿಂಗಳು ಬೇಕಾದರೆ ಕಪ್ಪು ಅರಿಸಿನವು ಕೇವಲ ಆರು ತಿಂಗಳ ಬೆಳೆಯಾಗಿದೆ ಮತ್ತು ಕಡಿಮೆ ನೀರಿನಲ್ಲಿ ಬೆಳೆಯುವಂತಹ ಅರಿಸಿನವಾಗಿದೆ.
ಇದು ಮುಖ್ಯವಾಗಿ ಔಷಧೀಯ ಗುಣವುಳ್ಳ ಅರಿಸಿನವಾಗಿರುವುದರಿಂದ ಭಾರಿ ಬೇಡಿಕೆ ಇದೆ. ಜನರು ಇನ್ನೂ ಹಸಿಯಾಗಿರುವ ಅರಿಸಿನ ಬೀಜಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಈ ಅರಿಸಿನ ಅಂದಾಜು ರೂ. ನಾಲ್ಕು ಸಾವಿರಕ್ಕೆ ಒಂದು ಕೆ.ಜಿ. ಯಂತೆ ಮಾರಾಟವಾಗುತ್ತಿದೆ. ಹತ್ತು ಗುಂಟೆ ಪ್ರದೇಶದಲ್ಲಿ ಎರಡು ಕ್ವಿಂಟಲದಷ್ಟು ಅರಿಸಿನ ಬೆಳೆದಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನೇ ಇನ್ನಷ್ಟು ಬೆಳೆಯುವ ಚಿಂತನೆಯಲ್ಲಿದ್ದಾರೆ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.