ಮರದ ಕೊಂಬೆ ಬಿದ್ದು ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Team Udayavani, Mar 16, 2022, 9:10 PM IST
ರಬಕವಿ-ಬನಹಟ್ಟಿ : ಹೊಸ ಬಸ್ನಿಲ್ದಾಣದ ಪಕ್ಕದಲ್ಲಿನ ಪ್ರಮುಖ ರಸ್ತೆ ಪಕ್ಕದಲ್ಲಿನ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಯುವಕ ನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ 7.30ಕ್ಕೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿ ವಿದ್ಯಾನಗರ ನಿವಾಸಿ ಮಹಾದೇವ ದುಂಡಪ್ಪ ಮಹಾಲಿಂಗಪುರ(41) ಸಾವನ್ನಪ್ಪಿದ ಯುವಕ. ಬುಧುವಾರ ಸಂತೆ ದಿನವಾಗಿದ್ದು, ಈ ರಸ್ತೆಯಲ್ಲಿ ಪ್ರತಿ ಬುಧವಾರ ಸಂತೆ ಸೇರಿ ಜನಜಂಗುಳಿಯಿಂದ ಕೂಡಿದ್ದು, ರಾತ್ರಿ ಹೊತ್ತು 7.30 ಆಗಿದ್ದರಿಂದ ಸಂತೆಯಲ್ಲಿ ಅಲ್ಪ ಪ್ರಮಾಣದಲ್ಲಿ ಜನ ಕಡಿಮೆಯಾಗಿತ್ತು,
ಈ ವೇಳೆ ಒಮ್ಮಿಂದೊಮ್ಮೇಲೆ ಆಲದ ಮರದ ಕೊಂಬೆಯೊಂದು ಮುರಿದು ಬಿದ್ದಿದ್ದು, ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಾದೇವ ಎಂಬುವವರು ಕೊಂಬೆಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಉಳಿದ ಜನ ಓಡೋಡಿ ಹೋಗಿ ಪರಾಗಿದ್ದಾರೆ. ಘಟನೆಯಿಂದ ಕೆಲ ಮಹಿಳೆಯರಿಗೆ ಸಣ್ಣ ಪುಟ್ಟ ಗಾಯಗಳಾದ ವರದಿಯಾಗಿದೆ.
ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಕೆ ಮುಂದುವರೆದಿದೆ.
ಇದನ್ನೂ ಓದಿ : ಗುಣಮಟ್ಟದ ಬೋಧನೆಗೆ ತರಬೇತಿ ಅತ್ಯಗತ್ಯ: ಪ್ರಶಾಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ