![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಕರ್ನಾಟಕದ ಕೋಲಾರದಲ್ಲಿ ನಡೆದ ರಾಜಕೀಯ ಸಭೆಯಲ್ಲಿ ನೀಡಿದ್ದ ಹೇಳಿಕೆ ಪ್ರಕರಣ
Team Udayavani, Mar 23, 2023, 12:46 PM IST
![Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್](https://www.udayavani.com/wp-content/uploads/2023/03/Gadnhi-620x364.jpg)
ಗುಜರಾತ್(ಸೂರತ್): “ಮೋದಿ” ಉಪನಾಮಕ್ಕೆ ಸಂಬಂಧಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ದೋಷಿ ಎಂದು ಸೂರತ್ ಕೋರ್ಟ್ ಗುರುವಾರ (ಮಾರ್ಚ್ 23) ತೀರ್ಪು ನೀಡಿ, ಎರಡು ವರ್ಷಗಳ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ:ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರಾಜಕೀಯ ಸಭೆಯಲ್ಲಿ ರಾಹುಲ್ ಗಾಂಧಿ “ಮೋದಿ ಉಪನಾಮ”ದ ಕುರಿತು ನೀಡಿದ್ದ ಹೇಳಿಕೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿಯಾಗಿದ್ದು, ಎರಡು ವರ್ಷಗಳ ಶಿಕ್ಷೆ ಪ್ರಕಟಿಸಿದೆ. ಏತನ್ಮಧ್ಯೆ ಜಾಮೀನು ನೀಡಿರುವ ಕೋರ್ಟ್, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತ್ತಿನಲ್ಲಿಟ್ಟಿದ್ದು, ಈ ಶಿಕ್ಷೆ ಕುರಿತು ರಾಹುಲ್ ಮೇಲ್ಮನವಿ ಸಲ್ಲಿಸಬೇಕಾಗಿದೆ.
“ಎಲ್ಲಾ ಕಳ್ಳರು ಸಾಮಾನ್ಯವಾಗಿ ಮೋದಿ ಎಂಬ ಸರ್ ನೇಮ್ ಹೊಂದಿದ್ದು ಹೇಗೆ? ಎಂದು ರಾಹುಲ್ ಗಾಂಧಿ ಚುನಾವಣಾ Rallyಯಲ್ಲಿ ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಗುಜರಾತ್ ಬಿಜೆಪಿ ಶಾಸಕ, ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ತಲೆಮರೆಸಿಕೊಂಡಿರುವ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಬೆಳಗ್ಗೆ ಗುಜರಾತ್ ಗೆ ಆಗಮಿಸಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.