ಬಜೆಟ್ 2020 ಕಿರು ವಿಮರ್ಶೆ: ರೇಲ್ವೇ ವೆಚ್ಚ ಕಡಿತ, ಮೂಲ ಸೌಕರ್ಯಕ್ಕೆ ಒತ್ತು


Team Udayavani, Feb 1, 2020, 3:34 PM IST

railway

ಹೊಸದಿಲ್ಲಿ; ಈ ಬಾರಿಯ ಕೇಂದ್ರ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಸಂಸತ್ತಿನಲ್ಲಿ ಮಂಡಿಸಿದ್ದು, ಹಲವು ರೈಲ್ವೇ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಮೂಲಸೌಕರ್ಯ ಸುಧಾರಣೆ, ಇಂಧನ ಮಿತವ್ಯಯ, ಪ್ರಯಾಣಿಕರ ಅನುಕೂಲ ಇತ್ಯಾದಿಗಳಿಗೆ ಆದ್ಯತೆ ನೀಡಲಾಗಿದೆ. ರೈಲ್ವೇ ಸಹಿತ ಮೂಲಸೌಕರ್ಯಗಳ ಅಭಿವೃದ್ಧಿಗೆ 1.7 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಕಿಸಾನ್‌ ರೈಲುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಒಟ್ಟು 150 ರೈಲುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಓಡಿಸಲು ಹಾಗೂ ನಾಲ್ಕು ರೈಲು ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಪುನರುಜ್ಜೀವನಗೊಳಿಸುವ ಯೋಜನೆಯನ್ನೂ ಘೋಷಿಸಲಾಗಿದೆ. ರೈಲು ನಿಲ್ದಾಣಗಳ ಆಧುನೀಕರಣಕ್ಕೂ ಯೋಜನೆ ರೂಪಿಸಲಾಗಿದೆ.

ಮುಂಬಯಿ- ಅಹಮದಾಬಾದ್‌ ನಡುವೆ ಹೈಸ್ಪೀಡ್‌ ರೈಲು ಯೋಜನೆಗೆ ವೇಗ ಲಭಿಸಲಿದೆ. ಸುಮಾರು 550 ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಒದಗಿಸಲಾಗಿದೆ. ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.

ರೈಲ್ವೇ ಇಲಾಖೆಯ ಅಧೀನದಲ್ಲಿ ಹಳಿಗಳ ಪಕ್ಕದಲ್ಲಿರುವ ಜಾಗದಲ್ಲಿ ಸೌರಶಕ್ತಿ ಉತ್ಪಾದನ ಘಟಕಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ದೇಶದಲ್ಲಿ 1.25 ಲಕ್ಷ ಕಿ.ಮೀ. ಉದ್ದದ ರೈಲು ಜಾಲವಿದೆ. ದಿನಕ್ಕೆ 20,849 ಸಂಚಾರಗಳನ್ನು ಕೈಗೊಳ್ಳುತ್ತಿದ್ದು, ಸರಾಸರಿ 2.3 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. 30 ಲಕ್ಷ ಟನ್‌ ಸರಕು ಸಾಗಿಸುತ್ತಿದೆ. 10,773 ಲೋಕೋ ಮೋಟಿವ್‌ ರೈಲುಗಳಿದ್ದು, 53,046 ಕೋಚ್‌ ಗಳನ್ನು ಹೊಂದಿದೆ. ಸರಕು ಸಾಗಾಟದ ವ್ಯಾಗನ್‌ಗಳ ಒಟ್ಟು ಸಂಖ್ಯೆ 2.45 ಲಕ್ಷ. ಇದು ಜಗತ್ತಿನಲ್ಲಿಯೇ ಬೃಹತ್ತಾದ ಸಂಚಾರ ವ್ಯವಸ್ಥೆ. ಹಳಿಗಳ ಪಕ್ಕದಲ್ಲಿ ಇಲಾಖೆಗೆ ಸೇರಿದ ಸಾಕಷ್ಟು ಜಾಗವೂ ಇದೆ. ಇದನ್ನು ಬಳಸಿಕೊಂಡು ಸೌರಶಕ್ತಿ ಉತ್ಪಾದಿಸುವ ಗುರಿ ಹೊಂದಲಾಗಿದೆ. ಇಂಧನ ಮಿತವ್ಯಯ ಸಾಧಿಸುವ ಜತೆಗೆ ಸ್ವಾವಲಂಬನೆಗೂ ಇದು ಸಹಕಾರಿಯಾಗಲಿದೆ. ಪರಿಸರಕ್ಕೂ ಪೂರಕ ಯೋಜನೆ.

ಇದರ ಜತೆಗೆ 27,000 ಕಿ.ಮೀ. ರೈಲು ಹಳಿಗಳ ವಿದ್ಯುದೀಕರಣಕ್ಕೂ ಸರಕಾರ ಯೋಜನೆ ರೂಪಿಸಿದೆ. ಭವಿಷ್ಯದಲ್ಲಿ ವಿದ್ಯುತ್‌ ಚಾಲಿತ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ಇದು ಪೂರಕ ಯೋಜನೆ. ಈ ಮೂಲಕ ಇಂಧನ ಮಿತವ್ಯಯ ಸಾಧಿಸುವ ಯೋಜನೆಯೂ ನಿರ್ಮಲಾ ಅವರ ಬಜೆಟ್‌ನಲ್ಲಿದೆ.

2030ರ ಸುಮಾರಿಗೆ ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಶೂನ್ಯಕ್ಕಿಳಿಸುವ ಗುರಿಯನ್ನು ರೈಲ್ವೇ ಇಲಾಖೆ ಹೊಂದಿದೆ. ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ತನ್ನ ಒಟ್ಟು ಆವಶ್ಯಕತೆಯ ಶೇ. 10ರಷ್ಟು ಇಂಧನ ಉತ್ಪಾದಿಸಲು ಇಲಾಖೆ ಹೆಜ್ಜೆ ಇರಿಸಿದೆ.

ಪ್ರವಾಸಿ ತಾಣಗಳ ಸಂಪರ್ಕಕ್ಕೆ ಇನ್ನಷ್ಟು ತೇಜಸ್‌ ರೈಲುಗಳ ಅನುಷ್ಠಾನ ಮಾಡುವ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ದಿಲ್ಲಿ- ಮುಂಬಯಿ ನಡುವಿನ ಎಕ್ಸ್‌ಪ್ರೆಸ್‌ ವೇ 2023ರ ಒಳಗೆ ಪೂರ್ಣಗೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಸುಮಾರು 18,600 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳ್ಳುವ 148 ಕಿ.ಮೀ. ಉದ್ದದ ಬೆಂಗಳೂರಿನ ಸಬ್‌ ಅರ್ಬನ್‌ ರೈಲು ಯೋಜನೆಗೆ ಶೇ. 60ರಷ್ಟು ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ಗಳನ್ನು ಸರಕಾರ ಇಲ್ಲವಾಗಿಸುತ್ತಿದ್ದು, ಸುರಕ್ಷಿತ ಸಂಚಾರಕ್ಕೆ ಪೂರಕವಾಗಿ ಹಲವು ಉಪಕ್ರಮಗಳನ್ನೂ ಕೈಗೊಳ್ಳುತ್ತಿದೆ.

*ಅನಂತ್ ಹುದೆಂಗಜೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.