ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಮಳೆಯ ಮುನ್ಸೂಚನೆ
Team Udayavani, Oct 18, 2020, 8:48 PM IST
ಧಾರವಾಡ : ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಅ. 20ರಿಂದ ಮತ್ತೆ ಮಳೆಯ ಅಬ್ಬರ ಶುರುವಾಗಲಿದ್ದು, ಮೂರು ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆ ಇದೆ.
ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಬೆಳಗಾವಿ, ರಾಯಚೂರ, ಬಳ್ಳಾರಿ, ಗದಗ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಯಲ್ಲಿ ಸೋಮವಾರ ಮಳೆಯಾಗುವ ಯಾವುದೇ ಮುನ್ಸೂಚನೆ ಇಲ್ಲ. ಆದರೆ ಅ.20 ರಿಂದ ಮತ್ತೆ ಮಳೆಯಾಗುವ ಮುನ್ಸೂಚನೆ ಇದ್ದು, ಅ.20 ರಿಂದ 22 ರವರೆಗೆ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಕೃಷಿ ವಿವಿಯ ಕೃಷಿ ಹವಾಮಾನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಆರ್.ಎಚ್.ಪಾಟೀಲ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಈಗಾಗಲೇ ಮಳೆಯಿಂದ ತತ್ತರಿಸಿ ಹೋದ ಕೆಲವು ಜಿಲ್ಲೆಗಳು ಈಗ ಮತ್ತೆ ಮಳೆಯ ಮುನ್ಸೂಚನೆ ಕೇಳಿ ಆತಂಕಗೊಂಡಿದ್ದಾರೆ.