ಕರಾವಳಿಯ ಕೆಲವೆಡೆ ಸಾಧಾರಣ ಮಳೆ, ಕುಕ್ಕೆ ಪರಿಸರದಲ್ಲಿ ಮಳೆ
Team Udayavani, Mar 16, 2023, 12:44 AM IST
ಮಂಗಳೂರು/ಉಡುಪಿ: ಕರಾವಳಿ ಭಾಗದ ಕೆಲವು ಕಡೆ ಬುಧವಾರ ಮುಂಜಾನೆ ಮಳೆ ಸುರಿದಿದೆ. ಆದರೂ, ಉರಿ ಸೆಕೆ ಮುಂದುವರಿದಿದೆ.
ಬೆಳ್ತಂಗಡಿ, ಮುಂಡಾಜೆ, ಧರ್ಮಸ್ಥಳ, ಮಚ್ಚಿನ ಸುತ್ತಮುತ್ತ ಮುಂಜಾನೆ 5 ಗಂಟೆಯಿಂದ ಉತ್ತಮ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ನಾವೂರು, ಸರಪಾಡಿ, ಉಳಿ, ಮಾಣಿ ಭಾಗದಲ್ಲಿ ಹನಿ ಮಳೆಯಾಗಿದೆ. ಪುತ್ತೂರಿನ ಕಬಕ, ಪುಣಚ, ಬಂಟ್ವಾಳ, ಸುಬ್ರಹ್ಮಣ್ಯ, ಕಲ್ಮಕಾರು, ಹರಿಹರ ಪಲ್ಲತ್ತಡ್ಕ, ಐನೆಕಿದು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದ ಅಲ್ಲಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಉಡುಪಿ: ಹನಿ ಮಳೆ
ಉಡುಪಿ: ಹವಾಮಾನ ವೈಪರಿತ್ಯದಿಂದಾಗಿ ಬುಧವಾರ ಉಡುಪಿ ನಗರದಲ್ಲಿ ಮುಂಜಾನೆ ವೇಳೆ ಹನಿ, ಹನಿ ಮಳೆ ಸುರಿಯಿತು. ಜಿಲ್ಲೆಯಾದ್ಯಂತ ಬೆಳಗ್ಗೆ ಮೋಡ ಕವಿದ ವಾತಾವರಣ ಇತ್ತಾದರೂ ಮಳೆಯಾಗಲಿಲ್ಲ.
ಮುಂದುವರಿದ ಉರಿ ಸೆಕೆ
ಮಂಗಳೂರು ಸಹಿತ ಕೆಲವು ಕಡೆಗಳಲ್ಲಿ ಮಳೆ ಸುರಿದಿಲ್ಲ. ಬೆಳಗ್ಗೆಯಿಂದಲೇ ಬಿಸಿಲಿನ ತಾಪ ಹೆಚ್ಚು ಇತ್ತು. ಇದೇ ಕಾರಣಕ್ಕೆ ದಿನವಿಡೀ ಉರಿ ಸೆಕೆ ಮುಂದುವರಿದಿತ್ತು. ಮಂಗಳೂರಿನಲ್ಲಿ 33 ಡಿ.ಸೆ. ಗರಿಷ್ಠ ಮತ್ತು 24.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ವೇಳೆ ಮತ್ತೆ ಮಳೆಯಾಯಿತು. ಮಂಗಳವಾರಕ್ಕಿಂತ ಮಳೆ ಅಲ್ಪ ಬಿರುಸು ಪಡೆದಿತ್ತು. ಸುಮಾರು ಅರ್ಧ ತಾಸಿಗೂ ಅಧಿಕ ಸಮಯ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಐನೆಕಿದು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಳ್ಪ ಸೇರಿದಂತೆ ಪರಿಸರದ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಗರಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ