ಜನರಲ್ಲಿ ಆತಂಕ ಸೃಷ್ಟಿಸಿದ ದಿಢೀರ್ ಮಳೆ
Team Udayavani, Mar 20, 2020, 9:35 PM IST
ಬೆಂಗಳೂರು: ಕೋವಿಡ್ 19 ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆ ನಗರದಲ್ಲಿ ದಿಢೀರ್ ಮಳೆ ಆಗಮನವಾಗಿದ್ದು, ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ!
ಸಾಮಾನ್ಯವಾಗಿ ತಾಪಮಾನ ಹೆಚ್ಚಾದಾಗ ವೈರಸ್ ಹರಡುವುದು ಕಡಿಮೆ. ಆದರೆ, ಮಳೆ ಮತ್ತು ತಂಪಾದ ವಾತಾವರಣ ಉಂಟಾದರೆ ತಾಪಮಾನ ಕಡಿಮೆಯಾಗಲಿದೆ. ಮೂಲಗಳ ಪ್ರಕಾರ ಇನ್ನು 2 ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ನಗರದಲ್ಲಿ ಶುಕ್ರವಾರ ಮಧ್ಯಾಹ್ನ 35.2 ಗರಿಷ್ಠ ತಾಪಮಾನ ದಾಖಲಾಗಿದ್ದು, ಸಂಜೆ 4 ಗಂಟೆಯ ನಂತರ ತಂಪಾದ ವಾತಾವರಣ ಕಂಡುಬಂದಿತು. ನಗರದ ಕೆಂಗೇರಿ, ಮೆಜೆಸ್ಟಿಕ್, ಮಲ್ಲೇಶ್ವರ, ಜಯನಗರ, ಹಂಪಿನಗರ, ಹಲಸೂರು, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಕೋವಿಡ್ 19 ಹಿನ್ನೆಲೆ ಜನರ ಓಡಾಟ ಕಡಿಮೆಯಾಗಿತ್ತು.
ಮಂತ್ರಿಮಾಲ್ ಮುಂಭಾಗ, ನಾಯಂಡಹಳ್ಳಿ ಸಿಗ್ನಲ್ ಸೇರಿದಂತೆ ಕೆಳಸೇತುವೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಪಾಲಿಕೆ ಸಿಬ್ಬಂದಿ ತಗ್ಗು ಪ್ರದೇಶದಲ್ಲಿ ನಿಂತ ನೀರನ್ನು ತೆರವುಗೊಳಿಸಿದರು.
ಎಲ್ಲೆಲ್ಲಿ ಎಷ್ಟು ಮಳೆ?
ಬಿದರಹಳ್ಳಿ 44.5ಮಿ.ಮೀ., ಕೆಂಗೇರಿ 20.5 ಮಿ.ಮೀ, ಚಿಕ್ಕ ಬಾಣಾವರ 18 ಮಿ.ಮೀ, ಸಂಪಂಗಿ ರಾಮನಗರ 13 ಮಿ.ಮೀ, ರಾಜರಾಜೇಶ್ವರಿ ನಗರ 12 ಮಿ.ಮೀ, ವಿದ್ಯಾರಣ್ಯಪುರ 12 ಮಿ.ಮೀ, ಚಾಮರಾಜಪೇಟೆ 12 ಮಿ.ಮೀ, ಬಸವನಗುಡಿ 9 ಮಿ.ಮೀ, ಬಿಟಿಎಂ ಲೇಔಟ್ 9.5 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
MUST WATCH
ಹೊಸ ಸೇರ್ಪಡೆ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು