ರಾಜ್ಯಕ್ಕೆ ಮಹಾ ಜಲಾಘಾತ; ಜನರ ಬದುಕು ಮೂರಾಬಟ್ಟೆ

ಭಾರೀ ಮಳೆಗೆ ಮತ್ತೆ 4 ಬಲಿ; ಕೃಪೆ ತೋರದ ಕೃಷ್ಣಾ, ಭೀಮಾ, ಕಾಳಿ

Team Udayavani, Aug 7, 2019, 6:00 AM IST

s-44

ಹುಬ್ಬಳ್ಳಿ/ಬೆಂಗಳೂರು: ‘ಮಹಾಘಾತ’ ಜಲಪ್ರಳಯಕ್ಕೆ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಹೈದ್ರಾಬಾದ್‌ ಕರ್ನಾಟಕ ಜನರ ಬದುಕು ಮೂರಾಬಟ್ಟೆಯಾಗಿದೆ.

ಕೃಷ್ಣಾ, ಭೀಮಾ, ದೂಧಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ, ಕಾಳಿ, ಅಘನಾಶಿನಿ ಸೇರಿದಂತೆ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 52 ಸೇತುವೆಗಳು ಮುಳುಗಡೆಯಾಗಿವೆ. 9420 ಜನರನ್ನು ಸ್ಥಳಾಂತರಿಸಲಾಗಿದೆ. ಪುಣೆ-ಬೆಂಗಳೂರು, ವಿಜಯಪುರ-ಧಾರವಾಡ ರಸ್ತೆ ಸಂಚಾರ, ಕರ್ನಾಟಕ-ಗೋವಾ ರೈಲು ಸಂಚಾರ ಬಂದ್‌ ಆಗಿದೆ. ಮತ್ತೆ ನಾಲ್ವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ ಮಳೆಗೆ ಬೆಳಗಾವಿ ನಲುಗಿ ಹೋಗಿದೆ. 30 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 140 ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. 8,012 ಜನರನ್ನು ಸ್ಥಳಾಂತರಿಸಲಾಗಿದೆ. ಆರು ಜಾನುವಾರುಗಳು ಮೃತಪಟ್ಟಿವೆ. ಬೆಳಗಾವಿ ನಗರದಲ್ಲಿ ಒಂದೇ ದಿನ 27 ಸೇರಿ 599 ಮನೆಗಳು ಹಾನಿಯಾಗಿವೆ. 80,590 ಹೆಕ್ಟೇರ್‌ ಪ್ರದೇಶ ಜಲಾವೃತವಾಗಿದೆ. 1,048 ಕಿಮೀ ರಸ್ತೆ ಕಿತ್ತು ಹೋಗಿದೆ. ಆರು ಸರ್ಕಾರಿ ಕಟ್ಟಡಗಳು ಧರೆಗುರುಳಿವೆ. 23 ಗಂಜಿ ಕೇಂದ್ರ ಆರಂಭಿಸಲಾಗಿದೆ.

ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ, ಗೋಕಾಕ, ಖಾನಾಪುರ, ಮೂಡಲಗಿ, ಹುಕ್ಕೇರಿ ತಾಲೂಕುಗಳ 96 ಹಳ್ಳಿಗಳು ಪ್ರವಾಹ ಬಾಧಿತವಾಗಿವೆ. ರಾಜಾಪುರ ಬ್ಯಾರೇಜ್‌ದಿಂದ 2,52,585 ಕ್ಯೂಸೆಕ್‌, ದೂಧಗಂಗಾದಿಂದ 42,240 ಕ್ಯೂಸೆಕ್‌ ಸೇರಿದಂತೆ ಕೃಷ್ಣಾ ನದಿಗೆ ಒಟ್ಟು 2,94,825 ಕ್ಯೂಸೆಕ್‌ ನೀರು ಬರುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಕಿತ್ತೂರಿನ ಐತಿಹಾಸಿಕ ಕೋಟೆಯಲ್ಲಿ ಎರಡು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗೋಡೆಯ ಅಲ್ಪಭಾಗ ಕುಸಿದಿದೆ.

ಹೆದ್ದಾರಿ ಸಂಪರ್ಕ ಕಡಿತ: ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರ ನಡುವಿನ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಭೂ ಕುಸಿತದ ಕಾರಣ ಬೆಳಗಾವಿಯಿಂದ ಕೊಲ್ಲಾಪುರದವರೆಗೆ ಮುಂದಿನ 24 ಗಂಟೆಗಳ ಕಾಲ ರಸ್ತೆ ಸಂಚಾರ ನಿಷೇಧಿಸಲಾಗಿದೆ. ಕಾಕತಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

3 ಹೆದ್ದಾರಿ ಸಹಿತ 12 ಸೇತುವೆ ಬಂದ್‌: ಕೃಷ್ಣಾ, ಘಟಪ್ರಭಾ ಉಕ್ಕಿ ಹರಿಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆ ಹಾವಳಿ ಮಿತಿ ಮೀರಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಘಟಪ್ರಭಾ ನದಿಗೆ 1.28 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ ಹೀಗಾಗಿ ಮುಧೋಳದ ಕಾಂಬಳೆ ಗಲ್ಲಿ ಮತ್ತು ಕುಂಬಾರ ಗಲ್ಲಿಗಳು ಜಲಾವೃತಗೊಂಡಿದ್ದು, ಇಲ್ಲಿನ 35 ಕುಟುಂಬಗಳ 105 ಜನರನ್ನು ಸ್ಥಳಾಂತರಿಸಲಾಗಿದೆ. ಇನ್ನೂ 150 ಕುಟುಂಬಗಳ ಸುಮಾರು 350ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಸಿದ್ಧತೆ ನಡೆದಿದೆ. ಧಾರವಾಡ-ವಿಜಯಪುರ, ಜಮಖಂಡಿ-ಜತ್ತ, ಜಮಖಂಡಿ- ಸಾವಳಗಿ ಹೆದ್ದಾರಿ ಸೇರಿದಂತೆ ಮುಧೋಳ, ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಒಟ್ಟು 12 ಸೇತುವೆಗಳು ಜಲಾವೃತಗೊಂಡಿವೆ. ಹೀಗಾಗಿ ಈ ಮಾರ್ಗಗಳ ಸಂಚಾರ ಬಂದ್‌ ಆಗಿವೆ. ಕೃಷ್ಣಾ ನದಿಗೆ 4.22 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ 27 ಹಳ್ಳಿಗಳು ಬಾಧಿತಗೊಂಡಿವೆ. ನಾಲ್ಕು ಗ್ರಾಮಗಳು ಜಲಾವೃತಗೊಂಡಿದ್ದು, ಈವರೆಗೆ 225 ಕುಟುಂಬಗಳ 825 ಜನ ಹಾಗೂ 1,415 ಜಾನುವಾರು ಸ್ಥಳಾಂತರಿಸಲಾಗಿದೆ. ಜಮಖಂಡಿ ತಾಲೂಕಿನಲ್ಲಿ 11 ಹಾಗೂ ಮುಧೋಳ ನಗರದಲ್ಲಿ 2 ಸೇರಿ ಒಟ್ಟು 13 ಗಂಜಿ ಕೇಂದ್ರ ತೆರೆಯಲಾಗಿದೆ.

ಹೆದ್ದಾರಿಗಳ ಸಂಪರ್ಕವೇ ಕಡಿತ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಖಾನಾಪುರ-ಗೋವಾ, ಖಾನಾಪುರ-ಬೆಳಗಾವಿ, ಖಾನಾಪುರ-ಪಾರಿಶ್ವಾಡ, ಖಾನಾಪುರ -ಪಣಜಿ ರಾಜ್ಯ ಹೆದ್ದಾರಿ ಮೇಲೆ ನೀರು ಬಂದಿರುವುದರಿಂದ ಸಂಚಾರ ಸ್ಥಗಿತಗೊಂಡಿದೆ. ಚೋರ್ಲಾ ಬಳಿ ಭೂ ಕುಸಿತ ಉಂಟಾಗಿದ್ದರಿಂದ ಬೆಳಗಾವಿ-ಗೋವಾ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಲೋಂಡಾದಲ್ಲಿ 25 ಮನೆಗಳು ಜಲಾವೃತವಾಗಿದ್ದು ಲೋಂಡಾ ರೈಲ್ವೆ ನಿಲ್ದಾಣದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಖಾನಾಪುರ ಹೊರವಲಯದ ಜಮೀನಿನಲ್ಲಿರುವ ಶಾಸಕಿ ಅಂಜಲಿ ನಿಂಬಾಳಕರ ಮನೆ ಸಹ ಸಂಪೂರ್ಣ ಜಲಾವೃತಗೊಂಡಿದೆ. ನಂದಗಡ-ಬೀಡಿ ರಸ್ತೆ ಪಕ್ಕದಲ್ಲಿರುವ ಹೊನ್ನಮ್ಮ ದೇವಸ್ಥಾನದ ಎರಡೂ ಬದಿಗಳಿಂದ ಕೆರೆ ತುಂಬಿ ಉಕ್ಕಿ ಹರಿಯುತ್ತಿದೆ. ಬೀಡಿ-ಹಳಿಯಾಳ, ಬೀಡಿ-ಕಿತ್ತೂರ ಮಧ್ಯದಲ್ಲಿರುವ ತಟ್ಟಿ ಹಳ್ಳದ ಸೇತುವೆಗಳ ಮೇಲೆಯೇ ನೀರು ಹರಿಯುತ್ತಿದ್ದು ಸಂಚಾರಕ್ಕೆ ಬಂದ್‌ ಆಗಿದೆ.

ಮಳೆಗೆ ಮತ್ತೆ ನಾಲ್ವರು ಬಲಿ

ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಶ್ರೀಂಗೇರಿ ಗ್ರಾಮದ ಶಿವಪ್ಪ ಸೊಟ್ಟಕ್ಕನವರ(50) ಧರ್ಮಾ ಜಲಾಶಯದ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಚಿಕ್ಕನಕೋಟೆ ಬಳಿ ಬೈಕ್‌ ಮೇಲೆ ತೆರಳುತ್ತಿದ್ದ ವಿಠuಲ್ ಗಣಪತಿ ಶೆಟ್ಟಿ ಮರ ಬಿದ್ದು ಮೃತಪಟ್ಟಿದ್ದಾರೆ. ಕಾರವಾರ ತಾಲೂಕಿನ ಮಾಜಾಳಿಯ ಬೈರೆ ಬಳಿ ಮಗನ ಮನೆಗೆ ಬಂದಿದ್ದ ಶಿವ ಎಂಬವರು ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರು ಬಳಿ ಹೆದ್ದಾರಿ ಬಳಿ ಸಂಚಾರ ನಿಯಂತ್ರಣ ಮಾಡುತ್ತಿದ್ದ ಚನ್ನಮ್ಮನ ಕಿತ್ತೂರು ಠಾಣೆ ಪಿಎಸ್‌ಐ ವೀರಪ್ಪ ಲಕ್ಕಿ(46) ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.