ಮಳೆ ಕೊರತೆ: ವಿದ್ಯುತ್‌ ವ್ಯತ್ಯಯ ಭೀತಿ

ಜಲವಿದ್ಯುತ್‌ ಘಟಕಗಳಿರುವ ಜಲಾಶಯಗಳಲ್ಲಿ ಕುಸಿದ ನೀರಿನ ಸಂಗ್ರಹ

Team Udayavani, Jun 19, 2019, 6:00 AM IST

power

ಬೆಂಗಳೂರು: ಮಳೆ ಶೀಘ್ರ ಚುರುಕುಗೊಳ್ಳದಿದ್ದಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆ ತಲೆದೋರುವ ಆತಂಕ ಎದುರಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಸದ್ಯ ಜಲವಿದ್ಯುತ್‌ ಘಟಕಗಳಿರುವ ಜಲಾಶಯಗಳಲ್ಲಿನ ನೀರಿನ ಮಟ್ಟ ತೀರಾ ಕಡಿಮೆಯಾಗಿದೆ. ಮಳೆ ವಿಳಂಬದ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆಯೂ ಹೆಚ್ಚಾಗುತ್ತಿದೆ. ಶೀಘ್ರ ಮಳೆ ತೀವ್ರಗೊಳ್ಳದಿದ್ದಲ್ಲಿ ಜಲ ವಿದ್ಯುತ್‌ನ ಸಮಸ್ಯೆ ಉದ್ಭವಿಸುವ ಭೀತಿ ಸೃಷ್ಟಿಯಾಗಿದೆ ಎಂದು ಇಂಧನ ಇಲಾಖೆಯ ಮೂಲಗಳು ತಿಳಿಸಿವೆ. ಬೇಸಗೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ ತಗ್ಗಿದ್ದು, 11,500 ಮೆಗಾ ವ್ಯಾಟ್‌ನಷ್ಟಿದ್ದ ಬೇಡಿಕೆ ಸದ್ಯ ಸರಾಸರಿ 10,000ದಿಂದ 10,500 ಮೆಗಾವ್ಯಾಟ್‌ಗೆ ಇಳಿಕೆಯಾಗಿದೆ.

ಹಾಗಾಗಿ ಬೇಡಿಕೆಯಷ್ಟು ವಿದ್ಯುತ್‌ ಪೂರೈಕೆಯಾಗುತ್ತಿದೆ. ಆದರೆ ಕೆಲವು ದಿನಗಳಿಂದ ವಿದ್ಯುತ್‌ ಬೇಡಿಕೆ ದಿಢೀರ್‌ ಏರಿಕೆಯಾಗಿದ್ದು, ಇನ್ನೂ ಬೇಡಿಕೆ ಹೆಚ್ಚಾದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ.

ಶೇ.10ರಷ್ಟು ಸಂಗ್ರಹ ಕೊರತೆ
ಜೂನ್‌ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುವುದು ವಾಡಿಕೆ. ಒಂದು ವಾರ ವಿಳಂಬವಾಗಿ ಕರಾವಳಿ ಪ್ರವೇಶಿಸಿದರೂ ಅದು ಇತರೆಡೆಗೆ ವ್ಯಾಪಿಸಿಲ್ಲ. ಉತ್ತಮ ಮಳೆಯಾಗುತ್ತಿದ್ದರೆ ಈ ಹೊತ್ತಿಗೆ ಜಲಾಶಯಗಳಲ್ಲಿ
ಶೇ.10 ರಷ್ಟು ಹೆಚ್ಚುವರಿ ನೀರು ಸಂಗ್ರಹ ವಾಗು ತ್ತಿತ್ತು. ಒಳಹರಿವು ಇಲ್ಲದಿರುವುದು ಒಂದೆಡೆಯಾದರೆ ಮತ್ತೂಂದೆಡೆ ಜಲವಿದ್ಯುತ್‌ ಉತ್ಪಾದನೆಯಿಂದ ನೀರು ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಕರ್ನಾಟಕ ವಿದ್ಯುತ್‌ ನಿಗಮದ ಮೂಲಗಳು ತಿಳಿಸಿವೆ.

ಬೇಡಿಕೆ ಹೆಚ್ಚಾದರೆ ಕಷ್ಟ
ಸೋಮವಾರ 203 ದಶಲಕ್ಷ ಯೂನಿಟ್‌ ವಿದ್ಯುತ್‌ ಹಂಚಿಕೆ ಯಿದ್ದರೆ, ಬಳಕೆ ಪ್ರಮಾಣ 219 ದಶಲಕ್ಷ ಯೂನಿಟ್‌ ದಾಟಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಕೃಷಿ ಪಂಪ್‌ಸೆಟ್‌ ಬಳಕೆ ಹೆಚ್ಚಾಗ ಲಿದ್ದು, ಬೇಡಿಕೆ ಏರಿಕೆಯಾಗಲಿದೆ. ಇನ್ನೊಂದೆಡೆ ಸೌರ ವಿದ್ಯುತ್‌ ತಗ್ಗಿದರೆ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತದೆ. ಮಾಸಾಂತ್ಯದೊಳಗೆ ಮಳೆ ಚುರುಕಾಗದಿದ್ದರೆ ವಿದ್ಯುತ್‌ ಉತ್ಪಾದನೆ ಯಲ್ಲಿ ವ್ಯತ್ಯಯ ಉಂಟಾಗಬಹುದು. ಜಲವಿದ್ಯುತ್‌ ಉತ್ಪಾದನೆ ಯನ್ನು ಬಯಸಿದಾಗ ಆರಂಭಿಸಲು ಹಾಗೂ ತ್ವರಿತವಾಗಿ ಸ್ಥಗಿತಗೊಳಿಸಲು ಅವಕಾಶವಿರುತ್ತದೆ. ಹೀಗಾಗಿ ಪರಿಸ್ಥಿತಿಗೆ ತಕ್ಕಂತೆ ಉಪಯೋಗಿಸಬಹುದು. ಒಂದೊಮ್ಮೆ ನೀರಿನ ಸಂಗ್ರಹ ಕುಸಿದು ಉತ್ಪಾದನೆ ಸಾಧ್ಯವಾಗದಿದ್ದರೆ ವಿದ್ಯುತ್‌ ಉತ್ಪಾದನೆ, ನಿರ್ವಹಣೆ ವ್ಯವಸ್ಥೆ ಬದಲಾಯಿಸಿಕೊಳ್ಳಬೇಕಾಗುತ್ತದೆ. ಅಷ್ಟರೊಳಗೆ ಮಳೆ ಯಾಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಇಂಧನ ಇಲಾಖೆಯ ಉನ್ನತ ಮೂಲಗಳು ಹೇಳಿವೆ.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.