ಅಧಿವೇಶನದಲ್ಲಿ CM ಈ ರೀತಿ ಹೇಳಿರುವುದು ತಪ್ಪು: ಸಾಮಾಜಿಕ ಕಾರ್ಯಕರ್ತ ಮುಲಾಲಿ ಹೇಳಿದ್ದೇನು ?
Team Udayavani, Mar 10, 2021, 1:48 PM IST
ಶಿವಮೊಗ್ಗ: ನಾನು ಇದುವರೆಗೂ ಎಲ್ಲಿಯೂ ನನ್ನ ಬಳಿ 19 ಸಿಡಿಗಳಿವೆ ಎಂದು ಪ್ರಸ್ತಾಪವೇ ಮಾಡಿಲ್ಲ. ಈ ಬಗ್ಗೆ ಒಂದೇ ಒಂದು ದಾಖಲೆ ಇದ್ದರೂ ನನಗೆ ಕೊಡಿ. 19 ಸಿಡಿ ಇವೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ರಾಜಶೇಖರ್ ಮುಲಾಲಿ, ಇದೊಂದು ದೊಡ್ಡ ಷಡ್ಯಂತರ. ಸಂಬಂಧಪಟ್ಟ ಸಚಿವರ ವಿರುದ್ಧ ಷಡ್ಯಂತರ ನಡೆದಿದೆ. ಸಚಿವರ ಬೆಳವಣಿಗೆಯನ್ನು ಸಹಿಸದ ಕೆಲವರು ಷಡ್ಯಂತರ ನಡೆಸಿದ್ದಾರೆ. ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಭಾಗದ ಶಾಸಕರುಗಳು ತಾಂತ್ರಿಕವಾಗಿ ಮುಗ್ಧರಾಗಿದ್ದಾರೆ. ಅವರೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕು. ಎಲ್ಲಿಯೂ ಮೈ ಮರೆಯಬಾರದು ಎಂದರು.
ರಾಜಕಾರಣಿಗಳು ಬೆಳಗಾವಿ ಅಧಿವೇಶನಕ್ಕೆ ಬಂದು ಶನಿವಾರ, ಭಾನುವಾರವಾದ ಕೂಡಲೇ ಗೋವಾಕ್ಕೆ ತೆರಳುತ್ತಾರೆ. ಈ ರೀತಿ ಅವರು ಮಾಡಬಾರದು. ಅವರು ಅವರ ಎಚ್ಚರಿಕೆಯಲ್ಲಿ ಇರಬೇಕು. ನಾಳೆ ಎಲ್ಲಿಯಾದರೂ ಮತ್ತೆ ಸಿಕ್ಕಿಹಾಕಿಕೊಳ್ಳುವ ಸಂಭವವಿರುತ್ತದೆ ಎಂದು ತಿಳಿಸಿದರು.
ನಿಷ್ಟಾವಂತ ಪ್ರಾಮಾಣಿಕ ಹೋರಾಟಗಾರರು ಕೇವಲ ಬೆರಳೆಣಿಕೆಯಷ್ಟು ಜನರಿದ್ದಾರೆ ಎಂದ ಅವರು ನ್ಯಾಯಬದ್ಧವಾಗಿ ವ್ಯವಸ್ಥಿತವಾಗಿ ಹೋರಾಟ ಮಾಡಿದರೆ, ಖಂಡಿತ ಗೆಲುವು ಸಿಗಲಿದೆ. ಸಚಿವರ ಪ್ರಕರಣದಲ್ಲಿ, ಸಂತ್ರಸ್ತೆಯಾಗಲೀ ಅವರ ಗಂಡನಾಗಲೀ ದೂರು ನೀಡಿಲ್ಲ. ಅವರು ದೂರು ನೀಡಿಲ್ಲವಾದರೆ ಈ ಪ್ರಕರಣವೂ ಅಲ್ಲಿಯೇ ಅಂತ್ಯವಾಗಲಿದೆ ಎಂದು ನುಡಿದರು.
ಬೆಂಗಳೂರಿನ ಕಬ್ಬನ್ ಪೇಟೆ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದಾರೆ ಎಂಬುದು ತಿಳಿದು ಬಂದಿದೆ. ಈ ಕುರಿತಾಗಿ ನನಗೆ ವಾಟ್ಸ್ ಆ್ಯಪ್ ಮೂಲಕ ನೋಟಿಸ್ ಬಂದಿದೆ. ಆದರೆ ನಾನು ನನ್ನದೇ ಆದ ಕೆಲಸದಲ್ಲಿ ತೊಡಗಿಸಿಕೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಅತ್ಯಾಚಾರ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!
ಈ ನಡುವೆ ಹಾದಿಬೀದಿಯಲ್ಲಿ ಹೋಗುವವರೆಲ್ಲಾ ಮಾಹಿತಿ ಹಕ್ಕಿನಡಿ ಮಾಹಿತಿ ಕೇಳುತ್ತಾರೆ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಾರೆ ಎಂದ ಅವರು, ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಒಬ್ಬ ಘನತೆವೆತ್ತ ಮುಖ್ಯಮಂತ್ರಿಗಳು ಈ ರೀತಿ ಮಾತನಾಡಬಾರದು. ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಈ ರೀತಿ ಹೇಳಿರುವುದು ತಪ್ಪು ಎಂದು ತಿಳಿಸಿದರು.
RTI ನಲ್ಲಿ ದನ ಕಾಯುವನಿಂದ ಹಿಡಿದು ಯಾರು ಬೇಕಾದರೂ ಮಾಹಿತಿ ತೆಗೆದುಕೊಳ್ಳಬಹುದು. ಬುದ್ಧಿವಂತರೇ ಕೇಳಬೇಕು ಎಂದು ಏನೂ ಇಲ್ಲ, ಅನಕ್ಷರಸ್ಥ ಕೂಡ ಮಾಹಿತಿ ಕೇಳಬಹುದು ಎಂದು ಅಭಿಪ್ರಾಯಪಟ್ಟರು.
ಹೋರಾಟಗಾರರನ್ನು ಈ ರೀತಿ ಹತ್ತಿಕ್ಕುವ ಪ್ರಯತ್ನ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಾನು ಸಾಕಷ್ಟು ಈ ರೀತಿ ನೋಡಿಕೊಂಡು ಬಂದಿದ್ದೇನೆ. ನಾನು ಆಸೆ, ಆಮೀಷಗಳಿಗೆ ಬಲಿಯಾಗದೇ, ಕಾನೂನು ವ್ಯಾಪ್ತಿಯಲ್ಲಿ ನನ್ನ ಕೆಲಸ ಮಾಡುತ್ತಿದ್ದೇನೆ. ನಾನು ಹೆದರಿಕೆಗೆ, ಬೆದರಿಕೆಗೆ ಬಗ್ಗುವವನಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ