ರಾಜ್ಯ ಸಭಾ ಚುನಾವಣೆ : ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಗೆ ಟಿಕೆಟ್
Team Udayavani, May 30, 2022, 11:46 PM IST
ಬೆಂಗಳೂರು : ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರ ಹೆಸರನ್ನು ಬಿಜೆಪಿ ಹೈ ಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್ ಅವರು ನಾಮಪತ್ರ ಸಲ್ಲಿಸುವುದು ಖಚಿತವಾಗಿದೆ. ಇದಕ್ಕಾಗಿ ಬಿಜೆಪಿ ವರಿಷ್ಠರು ಸೋಮವಾರ ರಾತ್ರಿ ವೇಳೆಗೆ ಲೆಹರ್ ಸಿಂಗ್ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದರು.
ಈ ಮೂಲಕ 3ನೇ ಅಭ್ಯರ್ಥಿಯ ಕುತೂಹಲಕ್ಕೆ ತೆರೆ ಎಳೆದರು. ಬಿಜೆಪಿಯ ಮೂರನೇ ಅಭ್ಯರ್ಥಿಯ ಜತೆಗೆ ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದರೆ ಅಥವಾ ಬೇರೊಬ್ಬರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ “ಅಡ್ಡ ಮತದಾನ’ ಕುದುರೆ ವ್ಯಾಪಾರ ನಡೆಯುವ ಆತಂಕವೂ ಇದೆ. ಹೀಗಾಗಿ ಎಲ್ಲ ಪಕ್ಷಗಳು ಕಾದು ನೋಡುವ ತಂತ್ರ ಅನುಸರಿಸುತ್ತಿವೆ.
ಇದನ್ನೂ ಓದಿ : ಹರ್ಷ ಕೊಲೆ ಪ್ರಕರಣದ 10ನೇ ಆರೋಪಿ ಜಾಮೀನು ಅರ್ಜಿ ವಜಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ