ಕರ್ನಾಟಕದಲ್ಲಿ ರಾಮಜನ್ಮಭೂಮಿ ಹೋರಾಟ


Team Udayavani, Nov 9, 2019, 7:48 PM IST

dd-15

-ಕರ್ನಾಟಕದಲ್ಲಿ 35 ವರ್ಷಗಳ ಹಿಂದೆಯೇ ಶುರುವಾಗಿತ್ತು ರಾಮಜನ್ಮಭೂಮಿ ಆಂದೋಲನ
-ರಾಮಮಂದಿರ್‌ ವಹಿ ಬನಾಯೇಂಗೇ ಘೋಷವಾಕ್ಯದಡಿ ಅಯೋಧ್ಯೆ ತಲುಪಿದ್ದರು ಲಕ್ಷ ಕರಸೇವಕರು
– ಅಡ್ವಾಣಿ ರಥಯಾತ್ರೆ ರಾಜ್ಯದಲ್ಲೂ ಸಂಚರಿಸಿತ್ತು

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ಆಂದೋಲನ ಕರ್ನಾಟಕದಲ್ಲಿ ಮೂವತ್ತೈದು ವರ್ಷಗಳ ಹಿಂದೆಯೇ ದೊಡ್ಡ ಪ್ರಮಾಣದಲ್ಲೇ ಪ್ರಾರಂಭವಾಗಿತ್ತು.
1984 ಡಿಸೆಂಬರ್‌ ತಿಂಗಳಲ್ಲಿ ವಿಶ್ವ ಹಿಂದೂ ಪರಿಷತ್‌ ಎರಡನೇ ಮಹಾ ಸಮ್ಮೇಳನ ಉಜಿರೆಯಲ್ಲಿ ನಡೆದಾಗ ರಾಮಜನ್ಮ ಭೂಮಿ ಜಾಗೃತಿ ರಥಯಾತ್ರೆಯೂ ಆರಂಭವಾಗಿತ್ತು, ರಾಮಜನ್ಮಭೂಮಿ ಮುಕ್ತಿಗಾಗಿ ಕರೆ ನೀಡಲಾಗಿತ್ತು.

1990 ರಲ್ಲಿ ಆದಿಚುಂಚನಗಿರಿ, ಧರ್ಮಸ್ಥಳ, ಕೂಡಲಸಂಗಮ ಸೇರಿ ರಾಜ್ಯದ ಏಳು ಭಾಗಗಳಿಂದ ರಾಮಶಿಲಾ ರಥಯಾತ್ರೆ ಹೆಸರಿನಲ್ಲಿ ಏಳು ರಥಗಳು ಬೀದರ್‌ನಲ್ಲಿ ಸಮಾವೇಶಗೊಂಡು ಬೃಹತ್‌ ಸಮಾವೇಶದ ಮೂಲಕ ಸುಮಾರು 60 ರಿಂದ 70 ಸಾವಿರ ಕರಸೇವಕರು ಅಯೋಧ್ಯೆ ತಲುಪಿದರು.

ಆಗ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂಸಿಂಗ್‌ ಯಾದವ್‌ ಅವರು ಕರಸೇವಕರನ್ನು ಉತ್ತರಪ್ರದೇಶ ಪ್ರವೇಶದಲ್ಲೇ ತಡೆಯಲು ಸೂಚಿಸಿದಾಗ ಪೊಲೀಸರು ಬಂಧಿಸಿದರು. ಆಗ ಕೆಲವರ ಪ್ರಾಣತ್ಯಾಗ ಸಹ ಯಿತು. ಸ್ವಾತಂತ್ರಾéನಂತರ ಭಾರತದಲ್ಲಿ ರಾಮಜನ್ಮಭೂಮಿ ಮುಕ್ತಿಗಾಗಿ ನಡೆದ ಬಲಿದಾನ ಎಂದೇ ಆಗ ಕರಸೇವಕರು ಹೇಳಿಕೊಂಡರು.

ಆ ನಂತರ 1992 ರಲ್ಲಿ ಮತ್ತೆ ರಾಜ್ಯದ ದಕ್ಷಿಣ ಭಾಗದಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ರಾಮಜನ್ಮಭೂಮಿ ಆಂದೋಲನ ಪ್ರಾರಂಭವಾಯಿತು. ಉತ್ತರ ಕರ್ನಾಟಕ ಭಾಗದ ನೇತೃತ್ವ ವಾದಿರಾಜ ಪಂಚಮುಖೀ ಅವರು ವಹಿಸಿಕೊಂಡಿದ್ದರು. (ಪ್ರಸ್ತುತ ಅವರು ಅಲಹಾಬಾದ್‌ನಲ್ಲಿ ಶ್ರೀಗಳಾಗಿದ್ದಾರೆ) ಆಗ ರಾಜ್ಯದಿಂದ 1 ಲಕ್ಷ ಕರಸೇವಕರು ಅಯೋಧ್ಯೆಗೆ ತೆರಳಿ ಅಶೋಕ್‌ ಸಿಂಘಾಲ್‌ ಅವರ ನೇತೃತ್ವದಲ್ಲಿ ಡಿಸೆಂಬರ್‌ 6 ರ ಘಟನೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯದ 28 ಸಾವಿರ ಗ್ರಾಮಗಳಿಂದ ಒಂದು ಗ್ರಾಮದಿಂದ ಒಂದು ಇಟ್ಟಿಗೆ, ಒಬ್ಬ ಹಿಂದೂನಿಂದ 1.25 ರೂ. ಸಂಗ್ರಹ ಮಾಡಲಾಗಿತ್ತು. ರಾಜ್ಯದ ಪ್ರತಿ ಹಳ್ಳಿಯಿಂದಲೂ ಇಟ್ಟಿಗೆಗಳನ್ನು ಪೂಜಿಸಿ ರಾಮಮಂದಿರ ನಿರ್ಮಾಣಕ್ಕಾಗಿ ಸ್ವಯಂ ಪ್ರೇರಿತರಾಗಿ ಜನತೆ ಕಳುಹಿಸಿಕೊಟ್ಟಿದ್ದರು.

ವಹಿ ಬನಾಯೆಂಗೇ
ರಾಜ್ಯದಲ್ಲಿ ರಾಮಜನ್ಮಭೂಮಿ ಆಂದೋಲನ ಕುರಿತು ಆಗ ಕೂಡಲಸಂಗಮ ಭಾಗದಿಂದ ಹೊರಟ ರಥದ ಸಾರಥ್ಯ ವಹಿಸಿದ್ದ ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಮಂತ್ರಿ ಆಗಿರುವ ಜಗದೀಶ್‌ ಕಾರಂತ್‌ ಅವರು “ಉದಯವಾಣಿ’ಯೊಂದಿಗೆ ಮಾತನಾಡಿ, 500 ವರ್ಷಗಳ ಕಾಲ ರಾಮಜನ್ಮಭೂಮಿಯ ಮುಕ್ತಿಗಾಗಿ ನಡೆದ ಹೋರಾಟ 73 ಬಾರಿಯ ವಿಫ‌ಲ ಯತ್ನದ ನಂತರ 1992 ರಲ್ಲಿ ನಾವು ಯಶಸ್ವಿಯಾಗಿದ್ದೆವು. ಅಲ್ಲಿಂದ “ಮಂದಿರ್‌ ವಹಿ ಬನಾಯೆಂಗೇ’ ಘೋಷವಾಕ್ಯ ಮೊಳಗಿತು. ಆ ಜಾಗವನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂಬುದು ಖಾತರಿಯಾಯಿತು.

ರಾಮಜನ್ಮಭೂಮಿ ಆಂದೋಲನವು ಭಾರತದ ರಾಜಕೀಯ ದಿಕ್ಕನ್ನೇ ಬದಲಾಯಿಸಿತು. ಹಿಂದೂಗಳ ಭಾವನೆ ಭಾರತಕ್ಕಷ್ಟೇ ಅಲ್ಲದೆ ವಿಶ್ವಕ್ಕೆ ಗೊತ್ತಾಯಿತು. ಆದರೆ, ಈ ಸತ್ಯ ಅರ್ಥ ಮಾಡಿಕೊಳ್ಳದ ಸೆಕ್ಯುಲರ್‌ ವಾದಿಗಳ ರಾಜಕೀಯ ಭವಿಷ್ಯಕ್ಕೆ ನೆಲಕಚ್ಚಿತು. ಎಡವಾದಿಗಳಂತೂ ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡರು.

1980-85 ರಲ್ಲಿ ಏನೇನೂ ಅಲ್ಲದ ಬಿಜೆಪಿ ಕೋಟಿ ಕೋಟಿ ಹಿಂದೂಗಳ ಭಾವನೆಗಳಿಗೆ ಬೆಲೆ ಕೊಟ್ಟಿದ್ದರಿಂದ ಇಂದು ದೊಡ್ಡ ಮಟ್ಟದಲ್ಲಿ ಬಳೆದಿದೆ. ಕೇಂದ್ರದಲ್ಲಿ ಆಡಳಿತ ಮಾಡಿದ ಸರ್ಕಾìಗಳಿಗೆ ನಾವು ಕಾನೂನಾತ್ಮಕವಾಗಿಯೇ ರಾಮಜನ್ಮಭೂಮಿ ಹಿಂದೂಗಳಿಗೆ ಬಿಟ್ಟುಕೊಡಲು ಬೇಡಿಕೆ ಇಟ್ಟಿದ್ದೆವು. ಅಂತಿಮವಾಗಿ ಅದು ನ್ಯಾಯಾಲಯದ ಅಂಗಳಕ್ಕೆ ಹೋಗಿತ್ತು.

ಇದೀಗ 500 ವರ್ಷಗಳ ಸುದೀರ್ಘ‌ವಾದ ಸಂಘರ್ಷಕ್ಕೆ ಪುರಸ್ಕಾರ, ಗೌರವ ಸಂದಿದೆ. ರಾಮಜನ್ಮಭೂಮಿ ವಿಚಾರದಲ್ಲಿ ತುಷ್ಠಿಕರಣ ನೀತಿ ಅನುರಿಸಿದ ಸೋಗಲಾಡಿ ಸೆಕ್ಯುಲರ್‌ವಾದಿಗಳು, ನಕಲಿ ಜಾತ್ಯತೀತವಾದಿಗಳಿಗೆ ಪಾಠವಾಗಿದೆ ಎಂದು ಹೇಳಿದ್ದಾರೆ.

ಅಡ್ವಾಣಿ ರಥಯಾತ್ರೆ
ರಾಮಮಂದಿರ ನಿರ್ಮಾಣಕ್ಕಾಗಿ ಎಲ್‌.ಕೆ.ಅಡ್ವಾಣಿಯವರು ನಡೆಸಿದ ರಥಯಾತ್ರೆ ಕರ್ನಾಟಕದಲ್ಲೂ ಐದು ದಿನ ಸಂಚರಿಸಿತ್ತು. ಬೆಂಗಳೂರಿಗೆ ಆಗಮಿಸಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಭೆಯ ನಂತರ ತುಮಕೂರು, ಶಿವಮೊಗ್ಗ, ಹರಿಹರ, ಹೊಸಪೇಟೆ, ಗಂಗಾಗವತಿ, ರಾಯಚೂರು ಮೂಲಕ ಸಾಗಿ ನಂತರ ಆಂಧ್ರಪ್ರದೇಶಕ್ಕೆ ಹೊರಟಿತ್ತು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.