ರಾಮನಗರ: ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಭದ್ರಯ್ಯ ಅವಿರೋಧ ಆಯ್ಕೆ
Team Udayavani, May 20, 2020, 2:27 PM IST
ರಾಮನಗರ :ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚನ್ನಮಾನಹಳ್ಳಿ ತಾ.ಪಂ ಕ್ಷೇತ್ರದ ಭದ್ರಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ, ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ ಅವರು ಭದ್ರಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಜಡಿಎಸ್ ಚಿಹ್ನೆಯಲ್ಲಿ ಆಯ್ಕೆಯಾಗಿರುವ ಇವರು ನಿರೀಕ್ಷೆಯಂತೆ ಕಾಂಗ್ರೆಸ್ ಬೆಂಬಲದಲ್ಲಿ ಅಧ್ಯಕ್ಷ ಸ್ಥಾನಗಳಿಸಿಕೊಂಡಿದ್ದಾರೆ.
ಜೆಡಿಎಸ್ ೮, ಕಾಂಗ್ರೆಸ್ ೬ ಸದಸ್ಯ ಬಲದ ತಾಪಂನಲ್ಲಿ ಕಾಂಗ್ರೇಸ್ ರಾಜಕೀಯದಾಟದಲ್ಲಿ ಜೆಡಿಎಸ್ ನಾಲ್ವರು ಸದಸ್ಯರು ಕಾಂಗ್ರೇಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಜೆಡಿಎಸ್ ಸದಸ್ಯರುಗಳಾದ ಲಕ್ಷ್ಮಿಕಾಂತ್, ಪ್ರಕಾಶ್, ಪದ್ಮ ರಾಜಣ್ಣ ಅವರು ಚುನಾವಣಾ ಪ್ರಕ್ರಿಯೆಗೆ ಗೈರಾಗಿದ್ದರು. ಒಟ್ಟು 11 ಸದ್ಯರು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಬನ್ನಿಕುಪ್ಪೆ (ಬಿ) ಕ್ಷೇತ್ರದ ಸದಸ್ಯ ಗಾಣಕಲ್ ನಟರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಎಂ.ಎಲ್.ಸಿ ಸಿ.ಎಂ ಲಿಂಗಪ್ಪ, ಮಾಜಿ ಶಾಸಕ , ಎಚ್.ಸಿ.ಬಾಲಕೃಷ್ಣ, ಜಿ.ಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ಬ್ಲಾಕ್ ಅಧ್ಯಕ್ಷರಾದ ಎ.ಬಿ.ಚೇತನ್ ಕುಮಾರ್, ವಿ.ಎಚ್.ರಾಜು, ಎಲ್.ಚಂದ್ರಶೇಖರ್, ಮಾಜಿ ಅಧ್ಯಕ್ಷರಾದ ಗಾಣಕಲ್ ನಟರಾಜು, ಮಹದೇವಯ್ಯ, ತಾಪಂ ಉಪಾಧ್ಯಕ್ಷೆ ರಮಾಮಣಿ, ಮಾಜಿ ಉಪಾಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರಾದ ವರಲಕ್ಷ್ಮಿ, ಚಂದ್ರಕಲಾ, ರೇಣುಕಾ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಸದಸ್ಯರು , ಪಕ್ಷದ ಮುಖಂಡರು ಮತ್ತು ಕಾರ್ಯರ್ತರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಚುನಾವಣೆಗೂ ಮುನ್ನ ಕಾಂಗ್ರೇಸ್ ಜಿಲ್ಲಾ ಕಚೇರಿಯಲ್ಲಿ ಭದ್ರಯ್ಯ, ಜಗದೀಶ್ ಮತ್ತು ಮಹದೇವಯ್ಯ ತಾವು ಇನ್ಮುಂದೆ ಕಾಂಗ್ರೆಸ್ ಸದಸ್ಯರು ಎಂದು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ