ರಮೇಶ್‌ – ಹೆಬ್ಟಾಳ್ಕರ್‌ ನಡುವೆ ಪ್ರತಿಷ್ಠೆಯ ಕದನ: ಲಕ್ಷ್ಮೀ ಕ್ಷೇತ್ರದಲ್ಲಿ ಕಾಂಚಾಣ-ಕಾಣಿಕೆ ಸವಾಲು ಜೋರು


Team Udayavani, Jan 23, 2023, 6:15 AM IST

ರಮೇಶ್‌ – ಹೆಬ್ಟಾಳ್ಕರ್‌ ನಡುವೆ ಪ್ರತಿಷ್ಠೆಯ ಕದನ: ಲಕ್ಷ್ಮೀ ಕ್ಷೇತ್ರದಲ್ಲಿ ಕಾಂಚಾಣ-ಕಾಣಿಕೆ ಸವಾಲು ಜೋರು

ಬೆಳಗಾವಿ: ನಗರದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ವಿಷಯದಲ್ಲಿ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್‌ ನಡುವೆ ಹತ್ತಿಕೊಂಡ ರಾಜಕೀಯ ಬೆಂಕಿ ಇನ್ನೂ ಆರಿಲ್ಲ. ಸರಕಾರವೇ ಉರುಳಿದ ಉದಾಹರಣೆಯ ಈ ಇಬ್ಬರ ನಡುವಿನ ರಾಜಕೀಯ ವೈಷಮ್ಯ ಹಾಗೂ ಪ್ರತಿಷ್ಠೆಯ ಕಿಡಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ತೀವ್ರತೆ ಪಡೆ ದು ಮತ್ತಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ.

2018ರ ಚುನಾವಣೆಯಲ್ಲಿ ಹೆಬ್ಟಾಳ್ಕರ್‌ ಪರ ನಿಂತು ಚುನಾವಣೆ ಮಾಡಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್‌ ಈಗ ಅದೇ ಹೆಬ್ಟಾಳ್ಕರ್‌ಸೋಲಿಸಲು ಪಣತೊಟ್ಟಿದ್ದಾರೆ. ಇದು ತಮ್ಮ ಏಕೈಕ ಅಜೆಂಡಾ ಎನ್ನುವಂತೆ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಸಂಚಾರ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಮರಾಠಾ ಸಮುದಾಯದ ಜನರನ್ನು ಸೇರಿಸಿ ಸಭೆಗಳನ್ನು ಮಾಡುತ್ತಿದ್ದಾರೆ. ಮತದಾರರಿಗೆ ಬಹಿರಂಗವಾಗಿಯೇ ಹಣ ಮತ್ತು ಕಾಣಿಕೆಯ ಆಮಿಷ ಸಹ ತೋರಿಸುತ್ತಿದ್ದಾರೆ.

ಹಾಗೆ ನೋಡಿದರೆ ಲಕ್ಷ್ಮೀ ಹೆಬ್ಟಾಳ್ಕರ್‌ ಮತ್ತು ರಮೇಶ್‌ ಜಾರಕಿಹೊಳಿ ನಡುವಿನ ಸ್ನೇಹ ಮತ್ತು ಆತ್ಮೀಯತೆಗೆ ಧಕ್ಕೆ ಬರಲು ಕೇವಲ ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯೊಂದೇ ಕಾರಣವಲ್ಲ. ಅದು ನೆಪ ಅಷ್ಟೇ. ಕಾರಣಗಳೇ ಬೇರೆ ಎಂಬುದು ಅವರ ಆಪ್ತರ ಮಾತು. ಇದರ ಜತೆಗೆ ಮುಖ್ಯವಾಗಿ ಜಿಲ್ಲೆಯ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ನೇರ ಹಸ್ತಕ್ಷೇಪ ರಮೇಶ್‌ಅವರ ಮುನಿಸಿಗೆ ಕಾರಣವಾಯಿತು. ಶಿವಕುಮಾರ್‌ ನಡೆಯ ಬಗ್ಗೆ ರಮೇಶ್‌ ಹಾಗೂ ಸಹೋದರ ಸತೀಶ್‌ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದು ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಸ್ಪಷ್ಟವಾಗಿ ಎದ್ದುಕಂಡಿತು. ಇದಾದ ಬಳಿಕ ರಮೇಶ್‌ ಜಾರಕಿಹೊಳಿ ತಮ್ಮ ರಾಜಕೀಯ ಸಾಮರ್ಥಯ ತೋರಿಸಲು ತೊಡೆತಟ್ಟಿ ನಿಂತರು. ಅದುವರೆಗೆ ಗೋಕಾಕ ಕ್ಷೇತ್ರಕ್ಕೆ ಮಾತ್ರ ತಮ್ಮನ್ನು ಸೀಮಿತಮಾಡಿಕೊಂಡಿದ್ದ ರಮೇಶ್‌ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಘಟನೆಯ ಅನಂತರ ರಾಜ್ಯ ನಾಯಕರಾಗಿ ಬೆಳೆದರು. ಶಿವಕುಮಾರ್‌ ಹಾಗೂ ಹೆಬ್ಟಾಳ್ಕರ್‌ ಮೇಲಿನ ಅವರ ಸಿಟ್ಟು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರಕಾರಕ್ಕೆ ಶಾಪವಾಗಿ ಪರಿಣಮಿಸಿತು. ದೇವರ ಮುಂದೆ ಪ್ರತಿಜ್ಞೆ ಮಾಡಿದವರಂತೆ ರಮೇಶ್‌ ಜಾರಕಿಹೊಳಿ ಸರಕಾರದ ಪತನಕ್ಕೆ ಕಾರಣರಾದರು. ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಸರಕಾರವನ್ನೇ ಪತನಗೊಳಿಸಿದರು. ಹೆಬ್ಟಾಳ್ಕರ್‌ ಮೇಲಿನ ಸಿಟ್ಟು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿತು. ಮುಂದೆ ನಡೆದಿ¨ªೆಲ್ಲ ಈಗ ಇತಿಹಾಸ.

ಇನ್ನು ರಮೇ ಶ್‌ ತಮ್ಮ ಗೋಕಾಕ ಕ್ಷೇತ್ರಕ್ಕಿಂತ ಹೆಬ್ಟಾಳ್ಕರ್‌ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರುವುದು ಅಚ್ಚರಿ ಉಂಟುಮಾಡಿದರೂ ಸಾಕಷ್ಟು ಕುತೂಹಲ ಮೂಡಿಸಿರುವುದು ಸುಳ್ಳಲ್ಲ. ಬೆಳಗಾವಿಗೆ ಬಂದಾಗಲೊಮ್ಮೆ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ಮಾಡುತ್ತಿರುವ ರಮೇಶ್‌, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ವಶ ಮಾಡಿಕೊಳ್ಳುವ ಸವಾಲು ಹಾಕಿದ್ದಾರೆ. ಇಲ್ಲಿ ಬಿಜೆಪಿ ಗೆಲ್ಲಬೇಕು ಎನ್ನುವುದಕ್ಕಿಂತ ಹೆಬ್ಟಾಳ್ಕರ್‌ ಸೋಲಬೇಕು ಎಂಬುದು ಅವರ ಏಕೈಕ ಗುರಿ. ಇದು ಯಾರಿಗೆ ಲಾಭ ತಂದುಕೊಡುತ್ತದೆ ಕಾದು ನೋಡ ಬೇಕು.

ಚುನಾವಣೆಯಲ್ಲಿ ಸೋಲು-ಗೆಲುವಿನ ಕಾರಣದಿಂದ ಇಬ್ಬರೂ ನಾಯಕರು ಪರಸ್ಪರ ನೇರ ಸವಾಲು ಹಾಕಿಕೊಂಡಿದ್ದಾರೆ. ಪಕ್ಷದ ವರಿಷ್ಠರು ಹೇಳಿದರೆ ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧ ಎಂದು ಹೆಬ್ಟಾಳ್ಕರ್‌ ಹೇಳಿದರೆ; ಈ ಕಡೆ ರಮೇಶ್‌ ಜಾರಕಿಹೊಳಿ ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ. ನಾನೇ ಖುದ್ದು ಇದರ ಉಸ್ತುವಾರಿ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇನೆ ಎಂದು ಪ್ರತಿಸವಾಲು ಹಾಕಿದ್ದಾರೆ. ಇಬ್ಬರ ಪ್ರತಿಷ್ಠೆಯೂ ಪಣಕ್ಕಿದೆ. ಯಾರಿಗೆ ನಗು ಮತ್ತು ಸಿಹಿ ಎಂಬುದು ಈಗಲೇ ಹೇಳುವುದು ಬಹಳ ಕಷ್ಟ. ಆದರೆ ಈ ಬಾರಿಯ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯುವುದು ನಿಶ್ಚಿತ.

ತಮಗೆ ರಾಜಕೀಯವಾಗಿ ಹಿನ್ನಡೆ ಮತ್ತು ಸಚಿವ ಸ್ಥಾನ ಕಳೆದುಕೊಳ್ಳುವಲ್ಲಿ ಕಾರಣರಾದವರಲ್ಲಿ ಹೆಬ್ಟಾ ಳ್ಕರ್‌ ಕೂಡ ಒಬ್ಬರು ಎಂದು ಖಚಿತವಾಗಿ ನಂಬಿರುವ ರಮೇಶ್‌ ಇದೇ ಕಾರಣದಿಂದ ಅ ವರ ಮೇಲೆ ತಿರುಗಿ ಬಿದ್ದಿದ್ದಾರೆ. ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಸಮಯದಲ್ಲಿ ಆರಂಭವಾದ ಈ ರಾಜಕೀಯ ದ್ವೇಷ ಈಗ ಪರಾಕಾಷ್ಠೆಗೆ ಬಂದು ನಿಂತಿದೆ. ಪರಸ್ಪರ ಆರೋಪ, ಟೀಕಾ ಪ್ರಹಾರ ರಾಜಕೀಯದ ಗಡಿ ಮೀರಿವೆ. ಒಮ್ಮೊಮ್ಮೆ ಜವಾಬ್ದಾರಿ ಮರೆತು ವೈಯಕ್ತಿಕ ಟೀಕೆಗಳು ಲಕ್ಷ ¾ಣ ರೇಖೆಯನ್ನೂ ದಾಟಿವೆ.

ಈಗ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಡೆಗೆ ಹೆಚ್ಚು ಗಮನಹರಿಸಿರುವ ರಮೇಶ್‌ ಈ ಕ್ಷೇತ್ರದಿಂದ ತಮ್ಮ ಆಪ್ತ ನಾಗೇಶ್‌ ಮುನ್ನೋಳಕರ ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಶಕ್ತಿಮೀರಿ ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದಾರೆ. ಈ ಪ್ರಯತ್ನ ಎಷ್ಟರಮಟ್ಟಿಗೆ ಫಲಕಾರಿಯಾಗುವದೋ ಗೊತ್ತಿಲ್ಲ. ಆದರೆ ಇದರಿಂದ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಲಕ್ಷಣಗಳು ಮಾತ್ರ ದಟ್ಟವಾಗಿವೆ.

ಈ ಕಡೆ ರಮೇಶ್‌ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಾಸಕಿ ಹೆಬ್ಟಾಳ್ಕರ್‌ ಸಹ ಸುಮ್ಮನೆ ಕೂತಿಲ್ಲ. ಒಂದೆಡೆ ಸ್ವಲ್ಪಮಟ್ಟಿನ ಆತಂಕ ಕಂಡುಬಂದರೂ ವಿಚಲಿತರಾಗದೆ ತಮ್ಮ ಎಲ್ಲ ರಾಜಕೀಯ ತಂತ್ರಗಾರಿಕೆಯನ್ನು ಒರೆಗೆ ಹಚ್ಚಿದ್ದಾರೆ. ಪ್ರೀತಿಯಿಂದ ನಾನು ನಿಮ್ಮ ಮನೆ ಮಗಳು’ ಎನ್ನುತ್ತಲೇ ಪ್ರತೀದಿನ ಕ್ಷೇತ್ರದ ಒಂದು ಗ್ರಾಮದಲ್ಲಿ ಸಭೆ ಮಾಡುತ್ತಿದ್ದಾರೆ. ಮತದಾರರನ್ನು ಯಾವ ರೀತಿ ಹಿಡಿದಿಟ್ಟುಕೊಳ್ಳಬೇಕು ಎಂಬುದನ್ನು ಕರಗತ ಮಾಡಿಕೊಂಡು ಆ ನಿಟ್ಟಿನಲ್ಲಿ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

– ಕೇಶವ ಆದಿ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.