ಕುತುಹಲ ಮೂಡಿಸಿದ ಯತ್ನಾಳ, ಜಾರಕಿಹೊಳಿ ರಹಸ್ಯ ಭೇಟಿ : ತೋಟದ ಮನೆಯಲ್ಲಿ ರಹಸ್ಯ ಮಾತುಕತೆ
Team Udayavani, Nov 14, 2021, 8:13 PM IST
ವಿಜಯಪುರ : ಆರೋಪ ಒಂದರಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬಿಜೆಪಿ ಬಂಡುಕೋರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರಸ್ಪರ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರದ ಸಾಂಗಲಿ ನಗರದಿಂದ ನೆರವಾಗಿ ವಿಜಯಪುಕ್ಕೆ ಆಗಮಿಸಿದ್ದ ರಮೇಶ ಜಾರಕಿಹೊಳಿ, ನಗರದ ಹೊರ ವಲಯದಲ್ಲಿ ಇರುವ ಯತ್ನಾಳ ಅವರ ತೋಟದ ಮನೆಯಲ್ಲಿ ಗಂಟೆಗೂ ಹೆಚ್ಚುಕಾಲ ಜಾರಕಿಹೊಳಿ-ಯತ್ನಾಳ ಇಬ್ಬರೇ ರಹಸ್ಯ ಮಾತುಕತೆ ನಡೆಸಿದರು.
ಈ ಇಬ್ಬರೂ ಶಾಸಕರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ರಾಜಕೀಯ ಕುತೂಹಲ ಕೆರಳಿಸಿದೆ.
ಜಾರಕಿಹೊಳಿ- ಯತ್ನಾಳ ಭೇಟಿ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುಧೀರ್ಘ ಚರ್ಚೆ ನಡೆಸಿದರೆ. ಉಭಯ ನಾಯಕರಿಗೆ ಸಚಿವ ಸ್ಥಾನ ಬೇಡಿಕೆ, ಬಿಟ್ ಕಾಯಿನ್ ವಿಚಾರ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಬಿಟ್ ಕಾಯಿನ್ ವಿಚಾರದಲ್ಲಿ ಮೂಲ ಬಿಜೆಪಿ ಸಚಿವರು, ನಾಯಕರ ಮೌನ: ಸಿಎಂ ಬೇಸರ
ಯತ್ನಾಳ ಭೇಟಿಯ ಬಳಿಕ ರಮೇಶ ಜಾರಕಿಹೊಳಿ ಬೆಳಗಾವಿಗೆ ತೆರಳಿದರೆ, ಯತ್ನಾಳ ಸಿಂದಗಿ ಉಪ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ನೂತನ ಬಿಜಪಿ ಶಾಸಕ ರಮೇಶ ಭೂಸನೂರ ಅವರಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಿಯಾಗಲು ಸಿಂದಗಿ ಪಟ್ಟಣದತ್ತ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ