Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

1890ರಲ್ಲಿ ಪುರಾತತ್ವ ಶಾಸ್ತ್ರಜ್ಞರಾದ ಹೆನ್ರಿ ಕೌಸೆನ್ಸ್‌ ಮತ್ತು ಜೇಮ್ಸ್‌  ಬರ್ಗೆಸ್‌ ಈ ಸ್ಥಳಕ್ಕೆ ಭೇಟಿ ನೀಡಿದ್ದರು

ನಾಗೇಂದ್ರ ತ್ರಾಸಿ, Jul 24, 2024, 3:00 PM IST

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

ಭಾರತದಲ್ಲಿ ಕಣ್ಮನ ಸೆಳೆಯುವ ಅದೆಷ್ಟೋ ಸ್ಥಳಗಳಿವೆ. ಅಷ್ಟೇ ಅಲ್ಲ ಪ್ರವಾಸಿಗರನ್ನು ಮೂಕವಿಸ್ಮಿತಗೊಳಿಸುವ ಹಲವಾರು ಅದ್ಭುತಗಳಿವೆ. ಅದಕ್ಕೊಂದು ಸೇರ್ಪಡೆ “ರಾಣಿ ಕೀ ವಾವ್”‌. ಇದು ಪ್ರಾಚೀನ ಭಾರತೀಯ ವಾಸ್ತುಶಿಲ್ಪ ಮತ್ತು ಎಂಜಿನಿಯರಿಂಗ್‌ ಗೆ ಅತ್ಯುತ್ತಮ ಉದಾಹರಣೆಯಾಗಿದೆ.

ರಾಣಿ ಕೀ ವಾವ್‌ ನ ಮೆಟ್ಟಿಲು ಬಾವಿಯ ರಚನೆಯ ಕೌಶಲ್ಯ ಮತ್ತು ಕಲಾತ್ಮಕತೆ ಎಂತಹವರನ್ನು ಚಕಿತಗೊಳಿಸುತ್ತದೆ. ಗುಜರಾತ್‌ ನ ಪಟಾನ್‌ ಎಂಬ ಪಟ್ಟಣದಲ್ಲಿರುವ ಅದ್ಭುತವಾದ ಮೆಟ್ಟಿಲು ಬಾವಿಯ ರಾಣಿ ಕೀ ವಾವ್‌ ಜನಪ್ರಿಯ ಪ್ರವಾಸಿ ತಾಣವಾಗಿದೆ.

ರಾಣಿಯು ತನ್ನ ಪತಿಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಈ ಮೆಟ್ಟಿಲು ಬಾವಿ ಸರಸ್ವತಿ ನದಿ ದಂಡೆಯ ಪ್ರದೇಶದಲ್ಲಿದೆ. ರಾಣಿ ಕೀ ವಾವ್‌ ಪುರಾತನ ಬಾವಿಗಳಲ್ಲಿ ಒಂದಾಗಿದೆ. ಇಂದಿಗೂ ಕೂಡಾ ಈ ಮೆಟ್ಟಿಲು ಬಾವಿ ಅದ್ಬುತವಾದ ಸ್ಥಿತಿಯಲ್ಲಿದೆ.

ರಾಣಿ ಕೀ ವಾವ್‌ (Rani Ki Vav) ಭಾರತೀಯ ಇತಿಹಾಸದಲ್ಲಿನ ಅತ್ಯದ್ಭುತವಾದ ವಾಸ್ತುಶಿಲ್ಪಗಳನ್ನೊಳಗೊಂಡಿದ್ದು, ಅಂದಾಜು 800ಕ್ಕೂ ಅಧಿಕ ವಾಸ್ತುಶಿಲ್ಪಗಳಿವೆ. ಈ ಮೆಟ್ಟಿಲು ಬಾವಿಯ ಅನೇಕ ಕಂಬಗಳ ರಚನೆ ಕಲಾತ್ಮಕ ವಿನ್ಯಾಸ ಹೊಂದಿದೆ. ಬಾವಿಯ ಮೆಟ್ಟಿಲುಗಳನ್ನು ಇಳಿಯುತ್ತಾ ಕೆಳ ಹೋದಂತೆ ಮೈ ರೋಮಾಂಚನಗೊಳಿಸುವ ವಾಸ್ತುಶಿಲ್ಪಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಇಲ್ಲಿರುವ ತಲೆಕೆಳಗಾದ ದೇವಾಲಯ ಏಳು ಹಂತದ ಮೆಟ್ಟಿಲುಗಳನ್ನು ಒಳಗೊಂಡಿದೆ.

ಇತಿಹಾಸದ ಹಿನ್ನೆಲೆ:

ಚಾಲುಕ್ಯ ವಂಶದ ರಾಣಿ ಉದಯಮತಿ ತನ್ನ ಪತಿ ಮೊದಲನೇ ಭೀಮ್‌ ದೇವ್‌ ಅವರ ನೆನಪಿಗಾಗಿ ಈ ಐತಿಹಾಸಿಕ ಸ್ಮಾರಕವನ್ನು ನಿರ್ಮಿಸಿದ್ದರು. ಇದೊಂದು ಪ್ರೀತಿಯ ಸಂಕೇತವಾಗಿದ್ದು, ಆ ಕಾರಣಕ್ಕಾಗಿ ಮೆಟ್ಟಿಲು ಬಾವಿಯನ್ನು ರಾಣಿ ಕೀ ವಾವ್‌ ಎಂದು ಕರೆಯಲಾಯಿತು.

ರಾಣಿ ಕೀ ವಾವ್‌ ಪುರಾತನ ಮೆಟ್ಟಿಲು ಬಾವಿಯಾಗಿದೆ. ಇದು ಹಲವು ವರ್ಷಗಳವರೆಗೆ ಮರಳು ಮತ್ತು ಮಣ್ಣಿನಿಂದ ಮುಚ್ಚಿಹೋಗಿತ್ತು. 1890ರ ದಶಕದಲ್ಲಿ ಬಾವಿಯ ಪ್ರದೇಶದಲ್ಲಿ ಕೆಲವು ಕಂಬಗಳು ಮಾತ್ರ ಕಾಣಿಸುತ್ತಿದ್ದ ಸಂದರ್ಭದಲ್ಲಿ ಪುರಾತತ್ವ ಶಾಸ್ತ್ರಜ್ಞರಾದ ಹೆನ್ರಿ ಕೌಸೆನ್ಸ್‌ ಮತ್ತು ಜೇಮ್ಸ್‌  ಬರ್ಗೆಸ್‌ ಈ ಸ್ಥಳಕ್ಕೆ ಭೇಟಿ ನೀಡಿದ್ದರು. ಅಚ್ಚರಿಯ ಸಂಗತಿ ಏನೆಂದರೆ ಈ ಸ್ಮಾರಕ 1940ರವರೆಗೂ ಮರಳಿನಡಿಯೇ ಹೂತು ಹೋಗಿತ್ತು.!

ಕೊನೆಗೂ 1980ರಲ್ಲಿ ಭಾರತೀಯ ಪುರಾತತ್ವ ಇಲಾಖೆ ಈ ಐತಿಹಾಸಿಕ ಸ್ಥಳದ ಮರುಸ್ಥಾಪನೆಯ ಸಾಹಸ ಕಾರ್ಯಕ್ಕೆ ಮುಂದಾಗಿತ್ತು. ಮರಳ ರಾಶಿಯಲ್ಲಿ ಹೂತು ಹೋಗಿದ್ದ ಪುರಾತನ ಮೆಟ್ಟಿಲು ಬಾವಿಯ ರಚನೆಯನ್ನು ಕಂಡು ಅಧಿಕಾರಿಗಳು ದಂಗಾಗಿಬಿಟ್ಟಿದ್ದರಂತೆ. 2014ರಲ್ಲಿ ರಾಣಿ ಕೀ ವಾವ್‌ ಅನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವೆಂದು ಘೋಷಿಸಿತ್ತು. ಈ ಅದ್ಭುತ ವಾಸ್ತುಶಿಲ್ಪ, ಸ್ಮಾರಕವನ್ನು ವೀಕ್ಷಿಸಲು ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ.

ರಾಣಿ ಕೀ ವಾವ್‌ ನಲ್ಲಿರುವ ಹೆಚ್ಚಿನ ಶಿಲ್ಪಗಳು ಭಗವಾನ್‌ ವಿಷ್ಣುವಿಗೆ ಸಂಬಂಧಪಟ್ಟ ಶಿಲ್ಪಗಳನ್ನು ಇಲ್ಲಿ ಕಾಣಬಹುದಾಗಿದೆ. ವಿಷ್ಣುವಿನ ಅವತಾರಗಳಾದ ರಾಮ, ಶ್ರೀಕೃಷ್ಣ, ನರಸಿಂಹ, ವಾಮನ ಹೀಗೆ ಹಲವು ರೂಪಗಳ ಶಿಲ್ಪಗಳನ್ನು ಇಲ್ಲಿ ಕಾಣಬಹುದಾಗಿದೆ.

ಐತಿಹಾಸಿಕ ಮೆಟ್ಟಿಲು ಬಾವಿಯ ವಿನ್ಯಾಸ ಹೇಗಿದೆ…

ಈ ಪುರಾತನ ಮೆಟ್ಟಿಲು ಬಾವಿಯು 64 ಮೀಟರ್‌ ಉದ್ದ, 20 ಮೀಟರ್‌ ನಷ್ಟು ಅಗಲ ಹಾಗೂ 28 ಮೀಟರ್‌ ಗಳಷ್ಟು ಆಳ ಹೊಂದಿದೆ. ಮೆಟ್ಟಿಲು ಬಾವಿಯ ಸ್ಮಾರಕದಲ್ಲಿ 800ಕ್ಕೂ ಅಧಿಕ ಅತ್ಯಾಕರ್ಷಕವಾದ ವಾಸ್ತುಶಿಲ್ಪಗಳಿವೆ. ರಾಣಿ ಕೀ ವಾವ್‌ ಕೇವಲ ನೀರಿನ ಮೂಲವನ್ನು ಮಾತ್ರ ಹೊಂದಿಲ್ಲ, ಜೊತೆಗೆ ಇದೊಂದು ಪೂಜಾ ಸ್ಥಳವೂ ಹೌದು. ಇಲ್ಲಿನ ಅಪ್ರತಿಮವಾದ ವಾಸ್ತುಶಿಲ್ಪವನ್ನು ನೋಡಲು ಒಮ್ಮೆಯಾದರೂ ಇಲ್ಲಿಗೆ ಭೇಟಿ ನೀಡಬೇಕು.

ಪ್ರಯಾಣ: ಗುಜರಾತ್‌ ನ ಅಹಮದಾಬಾದ್‌ ನಿಂದ ಪಟಾನ್‌ ಗೆ ಸುಮಾರು 4 ಗಂಟೆಯ ಪ್ರಯಾಣ ಬೆಳೆಸಿ, ಅಲ್ಲಿಂದ ಮೆಹ್ಸನ್‌ ಗೆ ತಲುಪಿ, ಬಳಿಕ ಅಲ್ಲಿಂದ ರಾಣಿ ಕೀ ವಾವ್‌ ಗೆ ಭೇಟಿ ನೀಡಬಹುದಾಗಿದೆ.  ರೈಲು ಮಾರ್ಗ ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಪಟಾನ್‌ ನಲ್ಲಿ ರೈಲ್ವೆ ನಿಲ್ದಾಣವಿದೆ. ವಿಮಾನದಲ್ಲಿ ತೆರಳಿದರೆ ಅಹಮದಾಬಾದ್‌ ನಲ್ಲಿ ಇಳಿದು, ಅಲ್ಲಿಂದ ರಾಣಿ ಕೀ ವಾವ್‌ ಗೆ 125 ಕಿಲೋ ಮೀಟರ್‌ ದೂರವಿದೆ. ಬಸ್‌ ಅಥವಾ ಕಾರನ್ನು ಬಳಸಬಹುದಾಗಿದೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BitCoin: ದಶಕದ ಹಿಂದೆ ಬಿಡಿಗಾಸು ಹೊಂದಿದ್ದ 1 ಬಿಟ್‌ ಕಾಯಿನ್‌ ಮೌಲ್ಯ ಈಗ ಎಷ್ಟು ಗೊತ್ತಾ?!

BitCoin: ದಶಕದ ಹಿಂದೆ ಬಿಡಿಗಾಸು ಹೊಂದಿದ್ದ 1 ಬಿಟ್‌ ಕಾಯಿನ್‌ ಮೌಲ್ಯ ಈಗ ಎಷ್ಟು ಗೊತ್ತಾ?!

ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೌತ್ ಸ್ಟಾರ್‌ ನಟರ ಮುಂದಿನ ಸಿನಿಮಾಗಳಿವು

ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೌತ್ ಸ್ಟಾರ್‌ ನಟರ ಮುಂದಿನ ಸಿನಿಮಾಗಳಿವು

China:ನದಿ&ಮೀನುಗಳ ರಕ್ಷಣೆಗಾಗಿ 300 ಡ್ಯಾಂ ಧ್ವಂಸ-ಜಲವಿದ್ಯುತ್‌ ಘಟಕ ಬಂದ್;‌ ಏನಿದು ಯೋಜನೆ…

China:ನದಿ&ಮೀನುಗಳ ರಕ್ಷಣೆಗಾಗಿ 300 ಡ್ಯಾಂ ಧ್ವಂಸ-ಜಲವಿದ್ಯುತ್‌ ಘಟಕ ಬಂದ್;‌ ಏನಿದು ಯೋಜನೆ…

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.