ಮಾಜಾಳಿಯಲ್ಲಿ ಅಪರೂಪದ ಏಡಿ ಪತ್ತೆ

ಕಡಲ ವಿಜ್ಞಾನಿಗಳಲ್ಲಿ ಅಚ್ಚರಿ, ದೂರದರ್ಶಕ ಯಂತ್ರದ ಸ್ವರೂಪದ ಕಣ್ಣನ್ನು ಹೊಂದಿದೆ

Team Udayavani, May 22, 2022, 11:42 AM IST

4

ಕಾರವಾರ: ಮಾಜಾಳಿ ಕಡಲತೀರದಲ್ಲಿ ಉದ್ದ ಕಣ್ಣಿನ ಈಜುವ ಏಡಿಯೊಂದು ಪತ್ತೆಯಾಗಿದ್ದು, ಇದು ಕಡಲ ವಿಜ್ಞಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಅರಬ್ಬೀ ಸಮುದ್ರದಲ್ಲಿ ಈಚಿನ ವರ್ಷಗಳಲ್ಲಿ ಈ ಮಾದರಿಯ ಏಡಿ ತಳಿ ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಕಡಲ ಜೀವಶಾಸ್ತ್ರ ವಿಭಾಗದ ಉಪನ್ಯಾಸಕರು ಹೇಳಿದ್ದಾರೆ.

ಮಾಜಾಳಿಯ ಮೀನುಗಾರ ಧನೇಶ್‌ ಸೈಲ್‌ ಮೀನುಗಾರಿಕೆಗೆ ಹೋದಾಗ ಅವರ ಬಲೆಗೆ ಹೊಸ ಸ್ವರೂಪದ, ಅಪರೂಪದ ಏಡಿ ಸಿಕ್ಕಿದೆ.

ಅಸಾನಿ ಚಂಡಮಾರುತದ ಪರಿಣಾಮ ಮೀನುಗಾರಿಕೆ ಇಲ್ಲವಾಗಿದೆ. ದೋಣಿಗಳು ಬಂದರಲ್ಲಿ ಲಂಗುರ ಹಾಕಿವೆ. ಅಲ್ಲದೇ ಜೂನ್‌, ಜುಲೈ ಎರಡು ತಿಂಗಳು ಮೀನುಗಾರಿಕೆಗೆ ನಿಷೇಧ ಕೂಡ ಹೇರಲಾಗುತ್ತದೆ. ಚಂಡಮಾರುತದ ಪರಿಣಾಮ ಮಳೆ ಪ್ರಾರಂಭ ಆಗಿರುವುದರಿಂದ ಮೀನುಗಾರಿಕೆ ಕೂಡ ಸ್ತಬ್ಧವಾಗಿದೆ.

ಕಾರವಾರ, ಮಾಜಾಳಿ ಕಡಲತೀರದಲ್ಲಿ ಸಾಂಪ್ರದಾಯಿಕವಾಗಿ ಸಣ್ಣ ಸಣ್ಣ ದೋಣಿಗಳು ಹವಾಮಾನ ನೋಡಿಕೊಂಡು ಮೀನುಗಾರಿಕೆ ಮಾಡುವುದು ಸಹಜ. ಈ ಸಂದರ್ಭದಲ್ಲಿ ಧನೇಶ್‌ ಸೈಲ್‌ಗೆ ಈ ಏಡಿ ಸಿಕ್ಕಿದ್ದು, ವಿಚಿತ್ರವಾಗಿ ಕಂಡ ಕಾರಣ ಕಾರವಾರದ ಕಡಲಜೀವ ವಿಜ್ಞಾನಿಗಳಿಗೆ ಈ ಬಗ್ಗೆ ತಿಳಿಸಿದ್ದಾರೆ.

ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ| ಶಿವಕುಮಾರ್‌ ಹರಗಿ ಏಡಿಯ ತಳಿಯ ಕುರಿತಾಗಿ ಮಾಧ್ಯಮಗಳಿಗೆ ಕೆಲ ಮಾಹಿತಿ ಹಂಚಿಕೊಂಡರು. ತನ್ನ ಶರೀರದ ಗಾತ್ರದಷ್ಟೇ ಉದ್ದವಾದ ಕಣ್ಣನ್ನು ಹೊಂದಿರುವ ಈ ಏಡಿಗೆ ಜಪಾನ್‌ ಮತ್ತು ದಕ್ಷಿಣ ಏಷ್ಯಾ ರಾಷ್ಟ್ರಗಳ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ. ಈ ಏಡಿಗಳನ್ನು ಅಲ್ಲಿ ಆಹಾರಕ್ಕಾಗಿ ಬಳಸುವ ಕಾರಣ ಬಹು ಮೌಲ್ಯವುಳ್ಳದ್ದೂ ಆಗಿದೆ. ಉದ್ದನೆಯ ಕಣ್ಣಿನ ಜೊತೆಗೆ ಈಜುವ ಏಡಿಯಾಗಿರುವುದು ವಿಶೇಷವಾಗಿದೆ.

ಏಡಿ ಬಹಳ ಅಪರೂಪ ಹಾಗೂ ವಿಶೇಷತೆಯಿಂದ ಕೂಡಿದೆ. ಉಷ್ಣವಲಯ, ಸಮಶೀತೋಷ್ಣವಲಯದ ಸಾಗರದಲ್ಲಿ ಇವು ಕಂಡು ಬರುತ್ತವೆ. ಕೆಂಪು ಸಮುದ್ರ, ಹವಾಯಿ ದ್ವೀಪ, ಜಪಾನ್‌, ಆಸ್ಟ್ರೇಲಿಯಾ ಮತ್ತು ದಕ್ಷಿಣ ಏಷ್ಯಾ ದ್ವೀಪ ರಾಷ್ಟ್ರಗಳಲ್ಲಿ ಅತೀ ಹೆಚ್ಚಾಗಿ ಇವು ದೊರೆಯುತ್ತವೆ. ಭಾರತದ ಪೂರ್ವ ಕರಾವಳಿಯಲ್ಲೂ ಇವು ಸಿಕ್ಕ ದಾಖಲೆಗಳಿವೆ. ಆದರೆ ಪಶ್ಚಿಮ ಕರಾವಳಿಯಲ್ಲಿ ಬಹಳ ಅಪರೂಪ. ಅನೇಕ ವರ್ಷಗಳ ಹಿಂದೆ ಕರ್ನಾಟಕದ ಕರಾವಳಿಯಲ್ಲಿ ಈ ಪ್ರಕಾರದ ಏಡಿ ಪತ್ತೆಯಾಗಿತ್ತು ಎಂದು ಕಡಲಜೀವ ಶಾಸ್ತ್ರ ವಿಭಾಗದ ಉಪನ್ಯಾಸಕ ಡಾ| ಶಿವಕುಮಾರ್‌ ಹರಗಿ ಹೇಳಿದರು.

ಈಚಿನ ವರ್ಷಗಳಲ್ಲಿ ಈ ಮಾದರಿಯ ಏಡಿ ಕಾಣಿಸಿಕೊಂಡಿರಲಿಲ್ಲ. ಈಗ ಹೊಸ ತಳಿ ಪತ್ತೆಯಾಗಿದೆ ಎಂದರು. ಏಡಿಯ ಮೈಬಣ್ಣ ಬೂದು ಹಸಿರು ಇರುತ್ತದೆ. ಪ್ರೌಢಾವಸ್ಥೆಗೆ ಬಂದಾಗ ಇದರ ಕಂದು ಬಣ್ಣಕ್ಕೆ ತಿರುಗುತ್ತದೆ. ಸಮುದ್ರ ಜೀವಿಯಾಗಿದ್ದು, ಕಡಲ ಮರಳು ಮತ್ತು ಮಣ್ಣಿನಲ್ಲಿ ಇವು ವಾಸ ಮಾಡುತ್ತವೆ. ಈಜಲು ಕಾಲಿನ ವ್ಯವಸ್ಥೆಗಳನ್ನು ಹೊಂದಿರುವ ಈ ಏಡಿ ಆರಾಮವಾಗಿ ಸಾಗರದಲ್ಲಿ ಈಜಬಲ್ಲದು. ಸಮುದ್ರದ ಮೇಲ್ಮೈ ಮೇಲೆ ಹೆಚ್ಚು ಈಜುವ ಕಾರಣ ಇವುಗಳು ಬಹಳ ಸುಲಭವಾಗಿ ಮೀನುಗಾರರ ಬಲೆಗಳಿಗೆ ಸಿಕ್ಕಿಬಿಡುತ್ತವೆ. ಸಾಮಾನ್ಯವಾಗಿ 12- 15 ಸೆಂ. ಮೀ.ನಷ್ಟು ಬೆಳೆದು, 15- 20 ಗ್ರಾಂನಷ್ಟು ತೂಗುತ್ತವೆ ಎನ್ನುತ್ತಾರೆ ಅವರು.

ಇವುಗಳು ತನ್ನ ದೇಹದ ಗಾತ್ರದಷ್ಟೇ ಉದ್ದದ ಕಣ್ಣುಗಳನ್ನು ಹೊಂದಿರುತ್ತವೆ. ಈ ಕಣ್ಣುಗಳನ್ನು ಬೇಟೆಗಾಗಿ ಬಳಕೆ ಮಾಡುತ್ತವೆ. ಸಮುದ್ರದ ಮರಳಿನಲ್ಲಿ ಹೊಂಚು ಹಾಕಿ ಕುಳಿತು ಉದ್ದನೆಯ ದುರ್ಬಿನ್‌ ಮಾದರಿಯ ಕಣ್ಣಿನ ಮೂಲಕ ತನ್ನ ಬೇಟೆಯನ್ನು ಗುರುತಿಸಿ ಬೇಟೆಯಾಡುತ್ತವೆ. ಇದರ ವೈಜ್ಞಾನಿಕ ಹೆಸರು ಸ್ಯೂಡೊಪೊತಲಾಮಸ್‌ ವಿಜಿಲ್‌ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.