ಪರ್ಕಳ ರಾ.ಹೆ.169 ರಸ್ತೆ ಅವ್ಯವಸ್ಥೆ : ಭೂ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ನೀಡಲು ಆಗ್ರಹ


Team Udayavani, Sep 19, 2021, 5:23 PM IST

ಪರ್ಕಳ ರಾ.ಹೆ.169 ರಸ್ತೆ ಅವ್ಯವಸ್ಥೆ : ಭೂ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ನೀಡಲು ಆಗ್ರಹ

ಉಡುಪಿ : ಪರ್ಕಳ ರಾ.ಹೆ. 169 (ಎ) ಭೂ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ಮತ್ತು ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ರವಿವಾರ ಪರ್ಕಳದ ಬಾಬುರಾಯ ಸರ್ಕಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆ‌ಸಲಾಯಿತು.

ಪರ್ಕಳ ಪ್ರದೇಶದಲ್ಲಿ ಹಾದು ಹೋಗುವ ರಾ.ಹೆ.169ಎ ಸಂಪೂರ್ಣ ಹದಗೆಟ್ಟಿರುವುದರಿಂದ ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ಇದರ ಜತೆಗೆ ಭೂಸಂತ್ರಸ್ತರಿಗೆ ಕಳೆದ ನಾಲ್ಕು ತಿಂಗಳಿಂದ ಪರಿಹಾರ ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಕಾರರು ಆರೋಪಿದರು. ಇದೇ ವೇಳೆ ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ ನೆಡವು ಮೂಲಕ ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌, ರಾಷ್ಟ್ರೀಯ ಹೆದ್ದಾರಿ ವಿಚಾರವಾಗಿ ಪರ್ಕಳದ ಜನತೆ ಕಳೆದ ಎರಡು ವರ್ಷಗಳಿಂದ ಕಷ್ಟ ಅನುಭವಿಸುತ್ತಿದ್ದಾರೆ. ಈಗಿನ ಜನಪ್ರತಿನಿಧಿಗಳು ಇದನ್ನು ನೋಡಿಯೂ ನೋಡದಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಶಾಸಕರು, ಸಂಸದರು ಎಚ್ಚೆತ್ತು ಕೂಡಲೇ ರಸ್ತೆಯ ಕಾಮಗಾರಿ ಅವಧಿಯೊಳಗೆ ಪೂರ್ಣ ಗೊಳಿಸಬೇಕು ಮತ್ತು ಭೂಸಂತ್ರಸ್ತರಿಗೆ ಪರಿಹಾರ ಹಣ ಶೀಘ್ರ ಬಿಡುಗಡೆ ಮಾಡಬೇಕು ಒತ್ತಾಯಿಸಿದರು.

ಇದನ್ನೂ ಓದಿ :ಕುಟುಂಬದವರಿಗೆ ವಿಷವುಣಿಸಿ ಪ್ರಿಯಕರನೊಂದಿಗೆ ಪರಾರಿಯಾದ ಯುವತಿ

ಭೂಸಂತ್ರಸ್ತ ಗೋಪಾಲ ಆಚಾರ್ಯ ಮಾತನಾಡಿ, ಪರಿಹಾರ ನೀಡುವ ಬಗ್ಗೆ ಸಭೆ ನಡೆಸಿ ನಾಲ್ಕು ತಿಂಗಳು ಕಳೆ‌ದರೂ ನಮ್ಮ ಖಾತೆಗೆ ಯಾವುದೇ ಪರಿಹಾರ ಹಣ ಬಂದಿಲ್ಲ. ಎಲ್ಲ ದಾಖಲೆಗಳನ್ನು ನೀಡಿ, ಭೂಮಿ ಬಿಟ್ಟು ಕೊಟ್ಟರೂ ಜಿಲ್ಲಾಡಳಿತ ಹಾಗೂ ಸರಕಾರ ಈ ವಿಚಾರದಲ್ಲಿ ವಿಳಂಬ ಮಾಡುತ್ತಿದೆ. ನಮ್ಮ ಅಂಗಡಿ, ಮನೆಗಳನ್ನು ಈಗಾಗಲೇ ತೆರವು ಮಾಡಿದ್ದಾರೆ. ಆದರೆ ಕೊಟ್ಟ ಭರವಸೆ ಮಾತ್ರ ಇನ್ನೂ ಈಡೇರಿಸಿಲ್ಲ ಎಂದು ದೂರಿದರು.

ಕಾಂಗ್ರೆಸ್‌ ಮುಖಂಡ ಅಮೃತ ಶೆಣೈ ಮಾತನಾಡಿ, ಪರ್ಕಳದ ಅಂಗಡಿಗಳನ್ನು ತೆರವುಗೊಳಿಸಿ ಪರಿಹಾರ ನೀಡದ ಪರಿಣಾಮ ಭೂಸಂತ್ರಸ್ತರಿಗೆ ಅತ್ತ ಹಣವೂ ಇಲ್ಲ, ಇತ್ತ ಜೀವನ ಸಾಗಿಸಲು ದಾರಿಯೂ ಇಲ್ಲವಾಗಿದೆ. ಅದೇ ರೀತಿ ಇಲ್ಲಿನ ರಸ್ತೆ ಕೂಡ ಸಂಪೂರ್ಣ ಮಾಡಿಕೊಡಲಾಗುತ್ತಿದೆ. ಇದೀಗ ಸಾಂಕೇತಿಕವಾಗಿ ಮಾತ್ರ ಪ್ರತಿಭಟನೆ ನಡೆಸಲಾಗಿದೆ. ಮುಂದಿನ 15 ದಿನಗಳೊಳಗೆ ಪರಿಹಾರ ಹಾಗೂ ರಸ್ತೆ ದುರಸ್ತಿ ಮಾಡದಿದ್ದರೆ ರಸ್ತೆ ತಡೆ ತೀವ್ರ ಹೋರಾಟ ನಡೆಸಲಾಗು ವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ಕೋವಿಡ್ ಸಮಯದಲ್ಲಿ ಮನಮೋಹನ್‌ ಸಿಂಗ್ ಪಿಎಂ ಆಗಿದ್ದರೆ ಏನಾಗಿರುತ್ತಿತ್ತೋ: ಅರುಣ್ ಸಿಂಗ್ ಲೇವಡಿ

ಕಾಂಗ್ರೆಸ್‌ ಮುಖಂಡರಾದ ಸುಕೇಶ್‌ ಕುಂದರ್‌ ಹೆರ್ಗ, ಮೋಹನ್‌ದಾಸ್‌ ನಾಯಕ್‌, ಗಣೇಶ್‌ರಾಜ್ ಸರಳೇಬೆಟ್ಟು, ಗಣೇಶ್‌ ನೆರ್ಗಿ, ಸುಧಾಕರ್‌ ಪೂಜಾರಿ, ಸದಾನಂದ ಪೂಜಾರಿ, ಸತೀಶ್‌ ಶೆಟ್ಟಿ ಕೆಳಪರ್ಕಳ, ಅಶೋಕ್‌ ಸಾಲಿಯಾನ್‌ ಹೆರ್ಗ, ಗಣೇಶ್‌ ಮಾರುತಿನಗರ, ನವೀನ್‌ ಪೂಜಾರಿ ಶೆಟ್ಟಿಬೆಟ್ಟು, ದಿನೇಶ್‌ ಪೂಜಾರಿ ಮದಗ, ತುಳಜಾ ಉಪೇಂದ್ರ ನಾಯ್ಕ, ಶಂಭು ಶೆಟ್ಟಿ, ರಾಜೇಶ್ ಪ್ರಭು ಪರ್ಕಳ ಮೊದಲಾದವರು ಉಪಸ್ಥಿತರಿದ್ದರು. ಮುಖೇಶ್‌ ಶೆಟ್ಟಿಗಾರ್‌ ಸ್ವಾಗತಿಸಿದರು. ವೆಂಕಟೇಶ್‌ ಶೆಟ್ಟಿಗಾರ್‌ ವಂದಿಸಿದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.