ಪಡಿತರ ಪಡೆಯದ 41 ಸಾವಿರ ಕಾರ್ಡ್‌ದಾರರು


Team Udayavani, Sep 23, 2019, 5:45 AM IST

BPL-a

ಬೆಂಗಳೂರು: ರಾಜ್ಯದ ಅಂದಾಜು 2.11 ಕೋಟಿ ಬಿಪಿಎಲ್‌ ಕಾರ್ಡುದಾರರ ಪೈಕಿ 41 ಸಾವಿರ ಫ‌ಲಾನು ಭವಿಗಳು ಕಳೆದ 3 ತಿಂಗಳಿಂದ ಪಡಿತರ ತೆಗೆದುಕೊಂಡಿಲ್ಲ ಅಥವಾ ಹಂಚಿಕೆಯಾಗಿಲ್ಲ. ಹೀಗಾಗಿ ಆಹಾರ ಇಲಾಖೆಗೆ ಹೊಸದೊಂದು ತಲೆನೋವು ಉಂಟಾಗಿದೆ.

ಸಾಲ ಮನ್ನಾ, ಬೆಳೆ ವಿಮೆ, ನಷ್ಟ ಪರಿಹಾರ ಇತ್ಯಾದಿ ಫ‌ಲಾನುಭವಿ ಆಧಾರಿತ ಯೋಜನೆಗಳಿಗೆ ಬಿಪಿಎಲ್‌ ಕಾರ್ಡ್‌ ಪ್ರಮುಖ ದಾಖಲೆಯಾಗಿದೆ. ಕೇವಲ ಯೋಜನೆ ಗಳಿಗಾಗಷ್ಟೇ ಕಾರ್ಡ್‌ ಮಾಡಿಸಿಕೊಂಡಿರಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸು ತ್ತಾರೆ. ಅಥವಾ ಪಡಿತರ ಹಂಚಿಕೆಯಲ್ಲೂ ಸಮಸ್ಯೆ ಇರಬಹುದು ಎಂಬ ಮಾತುಗಳೂ ಕೇಳಿ ಬಂದಿವೆ.

ಬರ ಹಾಗೂ ನೆರೆಪೀಡಿತ ಉಕ ಭಾಗದ ಜಿಲ್ಲೆಗಳಲ್ಲೇ ಪಡಿತರ ತೆಗೆದುಕೊಳ್ಳದ ಕಾರ್ಡ್‌ದಾರರ ಸಂಖ್ಯೆ ಹೆಚ್ಚಿದೆ. ಈ ರೀತಿ 3 ತಿಂಗಳಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಿಪಿಎಲ್‌ ಕಾರ್ಡ್‌ದಾರರು ಪಡಿತರ ಪಡೆದುಕೊಳ್ಳದೇ ಇರು ವುದಕ್ಕೆ ಫ‌ಲಾನುಭವಿ ಆಧರಿತ ಯೋಜನೆಗಳಿಗೆ ಸೀಮಿತ ವಾಗಿ ಕಾರ್ಡ್‌ ಮಾಡಿಸಿಕೊಂಡಿರುವುದರ ಜತೆಗೆ ಬರ ಮತ್ತು ನೆರೆಯೂ ಪ್ರಮುಖ ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ.
ಪ್ರತಿ ತಿಂಗಳ ಪಡಿತರ ವಿತರಣೆ ನಿಗದಿತ ದಿನಾಂಕಗಳಲ್ಲಿ ಒಂದೆರಡು ದಿನ ತಡವಾದರೆ ಜನ ಸಹಿಸಿಕೊಳ್ಳುವುದಿಲ್ಲ. ಅಂಥದ್ದರಲ್ಲಿ ಕಳೆದ 3 ತಿಂಗಳಿಂದ 41 ಸಾವಿರ ಕಾರ್ಡ್‌ದಾರರು ಪಡಿತರ ಅಂಗಡಿಗಳತ್ತ ಸುಳಿದಿಲ್ಲವೇ? ಅಥವಾ ಅಷ್ಟೂ ಮಂದಿಗೆ ಪಡಿತರ ಹಂಚಿಕೆಯಾಗಿಲ್ಲವೇ? ಎಂಬುದು ಇಲಾಖೆಗೆ ಯಕ್ಷಪ್ರಶ್ನೆಯಾಗಿದೆ.

ಜೂನ್‌ನಿಂದ ಪಡಿತರ ತೆಗೆದುಕೊಂಡಿಲ್ಲ
ಸದ್ಯ ರಾಜ್ಯದಲ್ಲಿ ಎಎವೈ, ಬಿಪಿಎಲ್‌ ಸೇರಿ 2.11 ಕೋಟಿ ಬಿಪಿಎಲ್‌ ಕಾರ್ಡ್‌ಗಳಿವೆ. ಇದರಲ್ಲಿ 2019ರ ಜೂನ್‌ನಿಂದ ಸೆಪ್ಟಂಬರ್‌ವರೆಗೆ ಕಾರ್ಡ್‌ದಾರರು ಪಡಿತರ ತೆಗೆದುಕೊಂಡಿಲ್ಲ. ಈ ಕಾರ್ಡ್‌ಗಳನ್ನು ನಕಲಿ ಎಂದು ತೀರ್ಮಾನಿಸಲು ಆಗುವುದಿಲ್ಲ. ಏಕೆಂದರೆ ಕಾರ್ಡ್‌ ಇದೆ. ಅದರಲ್ಲಿ ನಮೂದಿಸಿರುವ ವ್ಯಕ್ತಿಗಳು ಮತ್ತು ವಿಳಾಸ ಎಲ್ಲವೂ ಸರಿ ಇದೆ. ಆದರೆ ಪಡಿತರ ಮಾತ್ರ ಅವರಿಗೆ ಹಂಚಿಕೆಯಾಗಿಲ್ಲ. ಕಳೆದ 6 ತಿಂಗಳ ಹಿಂದೆ ಈ ರೀತಿ ಪಡಿತರ ತೆಗೆದುಕೊಳ್ಳದ ಕಾರ್ಡ್‌ಗಳ ಸಂಖ್ಯೆ 17 ಸಾವಿರ ಇತ್ತು. ಆದರೆ ಈಗ ಏಕಾಏಕಿ 41 ಸಾವಿರಕ್ಕೆ ಏರಿದೆ.

3 ತಿಂಗಳು ಪಡೆಯದಿದ್ದರೆ ಅಮಾನತು
ಪ್ರತಿ ತಿಂಗಳು ಕಾರ್ಡ್‌ದಾರರು ಪಡಿತರ ಪಡೆದುಕೊಳ್ಳಬೇಕು. ಸತತ 3 ತಿಂಗಳು ಪಡಿತರ ಪಡೆದುಕೊಳ್ಳದೇ ಇದ್ದರೆ ನಿಯಮದ ಪ್ರಕಾರ ಈ ಕಾರ್ಡ್‌ಗೆ ಪಡಿತರದ ಆವಶ್ಯಕತೆ ಇಲ್ಲ ಎಂದು ಷರಾ ಬರೆದು ಕಾರ್ಡ್‌ನ್ನು ಅಮಾನತ್ತಿನಲ್ಲಿಡಲಾಗುತ್ತದೆ. ಅಂತಹ ಕಾರ್ಡ್‌ದಾರರಿಗೆ ಮತ್ತೆ ಪಡಿತರ ಬೇಕಾದರೆ ತಾಲೂಕು ಕಚೇರಿಗೆ ಭೇಟಿ ಕೊಟ್ಟು 3 ತಿಂಗಳು ಪಡಿತರ ಏಕೆ ಪಡೆದುಕೊಂಡಿಲ್ಲ ಎಂದು ಸಮಜಾಯಿಷಿ ನೀಡಿ ಮತ್ತೂಮ್ಮೆ ಬಯೋಮೆಟ್ರಿಕ್‌ ಕೊಟ್ಟು ಕಾರ್ಡ್‌ನ್ನು ಕ್ರಿಯಾಶೀಲ(ಆ್ಯಕ್ಟಿವ್‌) ವಾಗಿಸಿಕೊಳ್ಳಬೇಕು. ಇದು ಇಲಾಖೆ, ಪಡಿತರ ಅಂಗಡಿ ಹಾಗೂ ಕಾರ್ಡ್‌ದಾರರು ಎಲ್ಲರಿಗೂ ಸಮಸ್ಯೆ ಎಂದು ಅಧಿಕಾರಿಗಳು ಹೇಳುತ್ತಾರೆ.

2 ತಿಂಗಳಲ್ಲಿ 6 ಲಕ್ಷ ಅರ್ಜಿಗಳಿಗೆ ಮುಕ್ತಿ
ಹೊಸದಾಗಿ ಬಿಪಿಎಲ್‌ ಕಾರ್ಡ್‌ ಕೋರಿ ಸಲ್ಲಿಸಲಾದ ಅರ್ಜಿಗಳ ಪೈಕಿ ಸದ್ಯ 6 ಲಕ್ಷ ಅರ್ಜಿಗಳ ಬಾಕಿ ಉಳಿದಿವೆ. ಮೊದಲು ಬಂದವರಿಗೆ ಆದ್ಯತೆ ಎಂಬ ತತ್ವದಡಿ ಅರ್ಜಿಗಳ ವಿಲೇವಾರಿಗೆ ಫ‌ಸ್ಟ್‌ ಕಮ್‌ ಫ‌ಸ್ಟ್‌ ಸರ್ವ್‌ (ಎಫ್ಐಎಫ್ಒ) ವ್ಯವಸ್ಥೆ ಜಾರಿಗೆ ತರಲಾಗಿತ್ತು. ಇದರಡಿ ಒಂದು ಅರ್ಜಿ ಪೂರ್ಣಪ್ರಮಾಣದಲ್ಲಿ ವಿಲೇವಾರಿ ಆಗದ ಹೊರತು ಅದರ ಅನಂತರದ ಅರ್ಜಿ ವಿಲೇವಾರಿ ಅಸಾಧ್ಯ. ಹೀಗಾಗಿ, ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬಾಕಿ ಉಳಿದುಕೊಂಡಿವೆ. ಹೀಗಾಗಿ ಈಗ ಎಫ್ಐಎಫ್ಒ ವ್ಯವಸ್ಥೆ ತೆರವುಗೊಳಿಸಲಾಗಿದ್ದು, 2 ತಿಂಗಳಲ್ಲಿ ಎಲ್ಲ 6 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಈ ಸಂಬಂಧ ಆಹಾರ ನಿರೀಕ್ಷಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕಳಿಸಲಾಗಿದೆ ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿ’ಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.