ರವಿ ಪೂಜಾರಿ 15 ದಿನ ಮುಂಬಯಿ ಪೊಲೀಸರ ವಶಕ್ಕೆ
Team Udayavani, Feb 22, 2021, 10:30 PM IST
ಬೆಂಗಳೂರು: ಮುಂಬಯಿಯಲ್ಲಿ ದಾಖಲಾಗಿರುವ ಹಲವು ಕೊಲೆ, ದರೋಡೆ, ಪ್ರಾಣ ಬೆದರಿಕೆ ಪ್ರಕರಣಗಳ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯನ್ನು ಅಲ್ಲಿನ ಪೊಲೀಸರು ಬಾಡಿ ವಾರೆಂಟ್ ಮೂಲಕ 15 ದಿನಗಳಿಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ರವಿ ಪೂಜಾರಿ ವಿರುದ್ಧ ಮುಂಬಯಿಯಲ್ಲಿ ಸುಮಾರು 25ಕ್ಕೂ ಅಧಿಕ ಪ್ರಕರಣಗಳಿವೆ.
ಫೆ.18ರಂದು ಕೇರಳದ ಬ್ಯೂಟಿ ಪಾರ್ಲರ್ನಲ್ಲಿ ಮಹಿಳೆಯೊಬ್ಬರ ಹತ್ಯೆಗೈದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಔಪಚಾರಿಕವಾಗಿ ಐದು ದಿನಗಳ ಕಾಲ ಬಂಧಿಸಿ ವಿಚಾರಣೆ ನಡೆಸಲು ಎರ್ನಾಕುಲಂನ ಸಿಸಿಬಿ ಪೊಲೀಸರಿಗೆ ನಗರದ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿತ್ತು. ಈ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸರು ರವಿ ಪೂಜಾರಿಯನ್ನು ಕರೆದೊಯ್ದಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಆನ್ ಲೈನ್ ದೋಖಾ …ಊಟ ಆರ್ಡರ್ ಮಾಡಿದವನ ಮನೆಗೆ ಬಂತು ಮೂತ್ರದ ಬಾಟಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ