ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ

1 ಲಕ್ಷ ಠೇವಣಿದಾರರಿಗೆ 1,300 ಕೋ.ರೂ. ಪಾವತಿ

Team Udayavani, Dec 13, 2021, 7:15 AM IST

ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ

ಹೊಸದಿಲ್ಲಿ: ಠೇವಣಿದಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದಲ್ಲಿ ಇದುವರೆಗೆ 1 ಲಕ್ಷ ಠೇವಣಿದಾರರಿಗೆ ಅವರ 1,300 ಕೋಟಿ ರೂ. ಮೊತ್ತವನ್ನು ವಾಪಸ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ರವಿವಾರ ನಡೆದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ (ತಿದ್ದುಪಡಿ) (ಡಿಐಸಿಜಿಸಿ) ಮಸೂದೆ 2021ಕ್ಕೆ ಸಂಸತ್ತು ಆಗಸ್ಟ್‌ ನಲ್ಲಿ ಅನುಮೋದನೆ ನೀಡಿತ್ತು.

ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದವರಿಗೆ ಠೇವಣಿ ಮೇಲಿನ ವಿಮೆ ಯನ್ನು 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಅದನ್ನು ಬ್ಯಾಂಕ್‌ ವ್ಯವಹಾರ ನಿಷೇಧಗೊಂಡ ಬಳಿಕ 90 ದಿನಗಳ ಒಳಗೆ ಪಾವತಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ವಹಿವಾಟು ನಿಷೇಧಿತ ಬ್ಯಾಂಕ್‌ಗಳ 3 ಲಕ್ಷ ಗ್ರಾಹಕರಿಗೆ ಶೀಘ್ರದಲ್ಲೇ ಮೊತ್ತ ಪಾವತಿಯಾಗಲಿದೆ ಎಂದು ತಿಳಿಸಿದ್ದಾರೆ.

ವಹಿವಾಟು ನಿಷೇಧಕ್ಕೆ ಒಳಗಾದ ಬ್ಯಾಂಕ್‌ಗಳ ಮೂರು ಲಕ್ಷ ಮಂದಿ ಗ್ರಾಹಕರಿಗೆ ಶೀಘ್ರದಲ್ಲಿಯೇ ಅವರು ಹೊಂದಿದ್ದ ಮೊತ್ತ ಪಾವತಿಯಾಗಲಿದೆ. 76 ಲಕ್ಷ ಕೋಟಿ ರೂ.ಗಳಷ್ಟು ಮೊತ್ತದ ಉಳಿತಾಯವನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿಯೂ ಇಂಥ ಠೇವಣಿ ಸುರಕ್ಷೆ ವ್ಯವಸ್ಥೆ ಇಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.

ತಾನು ಗುಜರಾತ್‌ ಮುಖ್ಯಮಂತ್ರಿ ಯಾಗಿದ್ದ ವೇಳೆ ಬ್ಯಾಂಕೊಂದು ಸಂಕಷ್ಟಕ್ಕೆ ಈಡಾಗಿತ್ತು. ಆ ಸಂದರ್ಭದಲ್ಲಿಯೇ ತಾನು ಠೇವಣಿ ವಿಮೆ ಮೊತ್ತವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.

ಗ್ರಾಹಕರಿಗೆ ಅನುಕೂಲ ಹೇಗೆ?
01 ಹಿಂದಿನ ವ್ಯವಸ್ಥೆಯಲ್ಲಿ ಠೇವಣಿ ವಾಪಸ್‌ಗೆ 8-10 ವರ್ಷ ಕಾಯಬೇಕಾಗಿತ್ತು.
02 ಪಂಜಾಬ್‌ ಮತ್ತು ಮಹಾ ರಾಷ್ಟ್ರ ಸಹಕಾರ ಬ್ಯಾಂಕ್‌ ವಹಿವಾಟಿನ ಮೇಲೆ ಆರ್‌ಬಿಐ ನಿರ್ಬಂಧ ಹೇರಿದ ಬಳಿಕ ನಿಯಮಗಳಲ್ಲಿ ಬದಲು.
03 ನಿರ್ಬಂಧಕ್ಕೆ ಒಳಪಟ್ಟ ಬ್ಯಾಂಕ್‌ನ ಬಗ್ಗೆ ಮೊದಲ 45 ದಿನಗಳ ಅವಧಿಯಲ್ಲಿ ಡಿಐಸಿಜಿಸಿ ಮಾಹಿತಿ ಸಂಗ್ರಹಿಸುತ್ತದೆ.
04 ಉಳಿದ 45 ದಿನಗಳಲ್ಲಿ ಠೇವಣಿ ದಾರರಿಗೆ ಎಷ್ಟು ಮೊತ್ತ ನೀಡ ಬೇಕು ಎಂಬುದನ್ನು ನಿರ್ಧರಿಸಿ 90ನೇ ದಿನಕ್ಕೆ ಪಾವತಿ ಪೂರ್ಣ ಮಾಡುತ್ತದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.