ಕೋವಿಡ್‌ ವಿರುದ್ಧದ ಹೋರಾಟಕ್ಕೆ ಆರ್‌ಸಿಬಿ 45 ಕೋ.ರೂ. ನೆರವು


Team Udayavani, May 25, 2021, 7:00 AM IST

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಆರ್‌ಸಿಬಿ 45 ಕೋ.ರೂ. ನೆರವು

ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕೆ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್‌ ಚಾಲೆಂಜರ್ ಬೆಂಗಳೂರಿನ ಮೂಲ ಸಂಸ್ಥೆಯಾಗಿರುವ “ಡಿಯಾಜಿಯೋ’ದ ಎಂಡಿ ಹಾಗೂ ಸಿಇಒ ಆನಂದ್‌ ಕೃಪಾಲು 45 ಕೋಟಿ ರೂ.ಗಳ ದೇಣಿಗೆ ಘೋಷಿಸಿದ್ದಾರೆ.

“ಭಾರತವಿಂದು ತೀವ್ರ ಕಷ್ಟಕ್ಕೆ ಸಿಲುಕಿದೆ. ಇಂತಹ ಸಮಯದಲ್ಲಿ ದೇಶದ ಪರವಾಗಿ ನಿಂತು ವೈರಸ್‌ ವಿರುದ್ಧ ಹೋರಾಡುವುದು ನಮ್ಮ ಜವಾಬ್ದಾರಿಯಾಗಿದೆ. ವೈದ್ಯಕೀಯ ಸವಲತ್ತು, ಬೆಡ್‌ ಮತ್ತು ಆಕ್ಸಿಜನ್‌ ಒದಗಿಸಲು ಈ ದೇಣಿಗೆ ನೀಡುತ್ತಿದ್ದೇವೆ’ ಎಂದು ಆನಂದ್‌ ಕೃಪಾಲು ಟ್ವೀಟ್‌ ಮಾಡಿದ್ದಾರೆ. ಇದಕ್ಕೂ ಮೊದಲು ಹೈದರಾಬಾದ್‌ ಫ್ರಾಂಚೈಸಿ 30 ಕೋಟಿ ರೂ. ನೆರವು ಒದಗಿಸಿತ್ತು.

ಬಿಸಿಸಿಐನಿಂದಲೂ ನೆರವು

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ಕೋವಿಡ್‌-19 ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದೆ. 10 ಲೀಟರ್‌ ಸಾಮರ್ಥ್ಯದ 2,000 ಆಮ್ಲಜನಕ ಸಾಂದ್ರಕಗಳನ್ನು ನೀಡುವುದಾಗಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ತಿಳಿಸಿದೆ.

“ಕೋವಿಡ್‌-19 ಪಿಡುಗಿನ ವಿರುದ್ಧದ ಭಾರತದ ಹೋರಾಟಕ್ಕೆ ಬೆಂಬಲಿಸಿ 10 ಲೀಟರ್‌ಗಳ 2,000 ಆಮ್ಲಜನಕ ಸಾಂದ್ರಕಗಳನ್ನು ನೀಡಲಿದ್ದೇವೆ. ಮುಂದಿನ ಕೆಲವು ತಿಂಗಳ ಕಾಲ ಭಾರತದಾದ್ಯಂತ ಆಸ್ಪತ್ರೆಗಳಲ್ಲಿ ಆಮ್ಲಜನಕ ನೆರವು ಬೇಕಾದವರಿಗೆ ಈ ಸಾಂದ್ರಕಗಳನ್ನು ವಿತರಿಸಲಾಗುತ್ತದೆ. ತುರ್ತಾಗಿ ಆಮ್ಲಜನಕದ ಅಗತ್ಯವಿರುವವರಿಗೆ ಈ ನೆರವು ಸಿಗಲಿ ಎಂಬುದು ನಮ್ಮ ಆಶಯ’ ಎಂದು ಬಿಸಿಸಿಐ ತಿಳಿಸಿದೆ.

ಪಾಂಡ್ಯ ಸಹೋದರರಿಂದ ಮತ್ತೂಂದು ಕಂತಿನ ಸಹಾಯ
ಟೀಮ್‌ ಇಂಡಿಯಾದ ಆಲ್‌ರೌಂಡರ್‌ಗಳಾದ ಪಾಂಡ್ಯ ಸಹೋದರರು ಕೊರೊನಾ ಪರಿಹಾರಕ್ಕೆ ಮತ್ತೂಂದು ಕಂತಿನ ನೆರವು ಒದಗಿಸಿದ್ದಾರೆ. ಕೋವಿಡ್‌ ಕೇಂದ್ರಗಳಿಗೆ ಇನ್ನಷ್ಟು ಆಮ್ಲಜನಕದ ಸಾಂದ್ರಕಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕೃಣಾಲ್‌ ಮತ್ತು ಹಾರ್ದಿಕ್‌, “ಸೋಂಕಿತರು ಶೀಘ್ರ ಗುಣಮುಖರಾಗಲಿ ಎಂಬ ತುಂಬು ಮನದ ಹಾರೈಕೆಯೊಂದಿಗೆ ಕೋವಿಡ್‌ ಕೇಂದ್ರಗಳಿಗೆ ಹೊಸ ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿಕೊಡುತ್ತಿದ್ದೇವೆ. ನಾವು ಕಠಿನ ಯುದ್ಧದ ಮಧ್ಯಭಾಗದಲ್ಲಿದ್ದೇವೆ. ನಾವೆಲ್ಲರೂ ಜತೆಯಾಗಿ ಹೋರಾಡಿದರೆ ಮಾತ್ರ ಈ ಕೊರೊನಾ ಯುದ್ಧವನ್ನು ಗೆಲ್ಲಬಹುದು’ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಂಡ್ಯ ಕುಟುಂಬ 200 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.