ಇತ್ತೀಚೆಗಿನ ರೈಲ್ವೆ ದುರಂತದ ಹಿಂದೆ ಭಯೋತ್ಪಾದಕರ ವಿಧ್ವಂಸಕ ಕೃತ್ಯದ ಕರಿನೆರಳು ಶಂಕೆ!

ಎನ್‌ ಐಎ ಐಐಟಿ ಕಾನ್ಪುರ್‌ ವರದಿಗಾಗಿ ಕಾಯುತ್ತಿದೆ

Team Udayavani, Jun 3, 2023, 5:00 PM IST

ಇತ್ತೀಚೆಗಿನ ರೈಲ್ವೆ ದುರಂತದ ಹಿಂದೆ ಭಯೋತ್ಪಾದಕರ ವಿಧ್ವಂಸಕ ಕೃತ್ಯದ ಕರಿನೆರಳು ಶಂಕೆ!

ಕಾನ್ಪುರ್‌, ಕುನೇರು ಹಾಗೂ ಉಜ್ಜೈನ್‌ ನಲ್ಲಿ ಸಂಭವಿಸಿದ್ದ ರೈಲು ಸ್ಫೋಟ ಮತ್ತು ಹಳಿ ತಪ್ಪಿರುವ ಘಟನೆ ಭಯೋತ್ಪಾದಕರ ವಿಧ್ವಂಸಕ ಕೃತ್ಯ ಎಂಬುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್‌ ಗೆ ತಿಳಿಸಿದ್ದು, ಈ ಮೂರು ಘಟನೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ ಐಎ) ತನಿಖೆ ನಡೆಸುತ್ತಿದೆ.

2016ರ ನವೆಂಬರ್‌ 20ರಂದು ಕಾನ್ಪುರದಲ್ಲಿ ಇಂದೋರ್-ಪಾಟ್ನಾ ಎಕ್ಸ್‌ ಪ್ರೆಸ್‌ ರೈಲು ಹಳಿತಪ್ಪಿ ಸಂಭವಿಸಿದ ದುರಂತದಲ್ಲಿ 148 ಪ್ರಯಾಣಿಕರು ಕೊನೆಯುಸಿರೆಳೆದಿದ್ದರು. ಏತನ್ಮಧ್ಯೆ ಎನ್‌ ಐಎಗೆ ಈ ವಿಧ್ವಂಸಕ ಕೃತ್ಯದ ಹಿಂದಿನ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲವಾಗಿತ್ತು. ಆ ನಿಟ್ಟಿನಲ್ಲಿ ಎನ್‌ ಐಎ ಇದೀಗ ಐಐಟಿ ವರದಿಗಾಗಿ ಕಾಯುತ್ತಿದೆ. ಆದರೆ ಇದೊಂದು ವ್ಯವಸ್ಥಿತ ವಿಧ್ವಂಸಕ ಕೃತ್ಯವಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಇದನ್ನೂ ಓದಿ:ಬಾಲಸೋರ್ ಭೀಕರ ದುರಂತ: ರೈಲು ಅಪಘಾತ ತಪ್ಪಿಸುವ ಕವಚ ತಂತ್ರಜ್ಞಾನ ಕೆಲಸ ಮಾಡಲಿಲ್ಲವೇ?

ಕಾನ್ಪುರ್‌ ರೈಲು ಹಳಿತಪ್ಪಿರುವ ವಿಧ್ವಂಸಕ ಕೃತ್ಯದ ಹಿಂದೆ ಉಜ್ಜೈನ್‌ ರೈಲು ಸ್ಫೋಟ ಘಟನೆಯಲ್ಲಿ ಶಾಮೀಲಾಗಿದ್ದ ಅತೀಫ್‌ ಮುಝಾಫರ್‌ ನೇತೃತ್ವದ ಐಸಿಸ್‌ ಕೈವಾಡ ಇದೆಯೇ ಎಂಬ ಬಗ್ಗೆ ಎನ್‌ ಐಎ ತನಿಖೆ ನಡೆಸುತ್ತಿದೆ.

ಶುಕ್ರವಾರ ರಾಜ್ಯಸಭೆಯಲ್ಲಿ ಹಿರಿಯ ರಾಜಕಾರಣಿ ಕಪಿಲ್‌ ಸಿಬಲ್‌ ಎತ್ತಿರುವ ಪ್ರಶ್ನೆಗೆ ರೈಲ್ವೆ ಸಚಿವಾಲಯ ನೀಡಿರುವ ಲಿಖಿತ ಉತ್ತರದಲ್ಲಿ ವಿಧ್ವಂಸಕ ಕೃತ್ಯದ ಹಿಂದೆ ಉಗ್ರರ ಕೈವಾಡ ಇದ್ದಿರುವುದಾಗಿ ತಿಳಿಸಿದೆ.

2023ರ ಜನವರಿ 21ರಂದು ಆಂಧ್ರಪ್ರದೇಶದ ಕುನೇರುವಿನಲ್ಲಿಸಂಭವಿಸಿದ್ದ ಹೀರಾಖಂಡ್‌ ಎಕ್ಸ್‌ ಪ್ರೆಸ್‌ ರೈಲು ಹಳಿತಪ್ಪಿದ್ದ ದುರಂತದಲ್ಲಿ 41 ಪ್ರಯಾಣಿಕರು ಕೊನೆಯುಸಿರೆಳೆದಿದ್ದು, ಈ ಘಟನೆಯಲ್ಲಿಯೂ ಎನ್‌ ಐಎ ಐಐಟಿ ಕಾನ್ಪುರ್‌ ವರದಿಗಾಗಿ ಕಾಯುತ್ತಿದೆ. ಇದು ಕೂಡಾ ವಿಧ್ವಂಸಕ ಕೃತ್ಯವಾಗಿದೆಯೇ ಎಂಬ ಶಂಕೆಯೊಂದಿಗೆ ಎನ್‌ ಐಎ ತನಿಖೆ ನಡೆಸುತ್ತಿದೆ.

2017ರ ಮಾರ್ಚ್‌ 3ರಂದು ಭೋಪಾಲ್-ಉಜ್ಜೈನ್‌ ರೈಲು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್‌ ಪ್ರಭಾವಿತ ಆರು ಮಂದಿ ಶಂಕಿತರನ್ನು ಎನ್‌ ಐಎ ಬಂಧಿಸಿತ್ತು. ರೈಲ್ವೆ ಹಳಿ ಸೇರಿದಂತೆ ಭಾರತೀಯ ರೈಲ್ವೆ ವ್ಯವಸ್ಥೆಗೆ ಬೆದರಿಕೆ ಇದ್ದಿರುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ರೈಲ್ವೆ ಹಳಿ ದುರಂತ ಮತ್ತು ಸ್ಫೋಟ ಘಟನೆಯ ನಂತರ ಭಯೋತ್ಪಾದಕರ ದುಷ್ಕೃತ್ಯ ನಿಗ್ರಹಕ್ಕಾಗಿ ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.  ರೈಲ್ವೆ ಮೂಲಭೂತ ಸೌಕರ್ಯ, ರೈಲ್ವೆ ಹಳಿ ಹಾಗೂ ರೈಲ್ವೆ ನಿಲ್ದಾಣ ಭದ್ರತಾ ಅಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ, ಗೃಹ ಇಲಾಖೆಯ ಜೊತೆ ರೈಲ್ವೆ ಸಚಿವಾಲಯ ಸಮರ್ಪಕ ಸಂವಹನ ನಡೆಸುತ್ತಿರುವುದಾಗಿ ಲಿಖಿತ ಉತ್ತರದಲ್ಲಿ ತಿಳಿಸಿದೆ.

ರೈಲ್ವೆ ಹಳಿ ಮತ್ತು ಪ್ರಯಾಣಿಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಎಲ್ಲಾ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ರೈಲ್ವೆ ಸಚಿವರು ಮನವಿ ಮಾಡಿಕೊಂಡಿದ್ದಾರೆ. ಆಯ್ದ ರೈಲ್ವೆ ಮಾರ್ಗಗಳಲ್ಲಿ ಪ್ರತಿದಿನ ಸುಮಾರು 2,500 ರೈಲುಗಳಿಗೆ ಆರ್‌ ಪಿಎಫ್‌ (ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್)‌ ಬೆಂಗಾವಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚುವರಿಯಾಗಿ ವಿವಿಧ ರಾಜ್ಯಗಳಲ್ಲಿ ಪ್ರತಿದಿನ 2,200 ರೈಲುಗಳಿಗೆ ಜಿಆರ್‌ ಪಿ(ಗವರ್ನಮೆಂಟ್‌ ರೈಲ್ವೆ ಪೊಲೀಸ್)‌ ಬೆಂಗಾವಲು ಹೊಂದಿರುವುದಾಗಿ ಸಚಿವಾಲಯ ಅಂಕಿಅಂಶದಲ್ಲಿ ತಿಳಿಸಿದೆ.

ಶುಕ್ರವಾರ ಸಂಜೆ 7ಗಂಟೆ ಸುಮಾರಿಗೆ ಪಶ್ಚಿಮಬಂಗಾಳದ ಬಾಲಸೋರ್‌ ನಲ್ಲಿ ಏಕಾಏಕಿ ಮೂರು ರೈಲುಗಳು ಡಿಕ್ಕಿಯಾದ ಪರಿಣಾಮ 280ಕ್ಕೂ ಅಧಿಕ ಪ್ರಯಾಣಿಕರು ಕೊನೆಯುಸಿರೆಳೆದಿದ್ದು ಸಾವಿರ ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ರೈಲ್ವೆ ಹಳಿತಪ್ಪಿ ಸಂಭವಿಸಿರುವ ದುರಂತ ವಿಧ್ವಂಸಕ ಕೃತ್ಯವಾಗಿದೆಯೇ ಎಂಬ ಚರ್ಚೆ ನಡೆಯುತ್ತಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.