ಕಲ್ಯಾಣ ಕರ್ನಾಟಕ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಶಿಫಾರಸ್ಸು:ಸಚಿವ ಅಶೋಕ್


Team Udayavani, Oct 16, 2020, 1:00 PM IST

ಕಲ್ಯಾಣ ಕರ್ನಾಟಕ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಶಿಫಾರಸ್ಸು:ಸಚಿವ ಅಶೋಕ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದೆಂದೂ ಕಂಡರಿಯದ ಮಳೆಯಿಂದಾಗಿರುವ ಅತಿವೃಷ್ಟಿ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂಬುದಾಗಿ ಘೋಷಿಸುವಂತೆ ಕೇಂದ್ರಕ್ಕೆ ಪತ್ರ ಬರೆದು ಶಿಫಾರಸ್ಸು ಸಲ್ಲಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಶುಕ್ರವಾರ ಜಿಲ್ಲೆಯ ಪ್ರವಾಹ ಹಾಗೂ ಅತಿವೃಷ್ಟಿ ಹಾನಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಭಾಗದಲ್ಲಿ ಹಿಂದೆಂದೂ ಆಗದಿರುವಷ್ಟು ಮಳೆಯಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಸೂಕ್ತ ಪರಿಹಾರೋಪಾಯ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸುವುದರ ಜತೆಗೆ ಕಳೆದ ವರ್ಷ ಬೆಳಗಾವಿಯಲ್ಲಿ ಆದ ಅತಿವೃಷ್ಟಿಯನ್ನು ವಿಶೇಷ ಎಂಬುದಾಗಿ ಪರಿಗಣಿಸಲಾಗುವುದು ಎಂದು ವಿವರಣೆ ನೀಡಿದರು.

ಅತಿವೃಷ್ಟಿ ಹಾಗೂ ಪ್ರವಾಹ ಹಾನಿ ವೀಕ್ಷಿಸಿದ ನಂತರ ಹಾನಿಯ ಸಮಗ್ರ ವರದಿಯನ್ನು ಮುಖ್ಯ ಮಂತ್ರಿಗಳಿಗೆ ಸಲ್ಲಿಸಿ ಸೂಕ್ತ ಪರಿಹಾರ ಕ್ರಮಕ್ಕೆ ಮುಂದಾಗಲಾಗುವುದು. ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಗಳ ಬಳಿ ಪಿಡಿ ಖಾತೆ ಯಲ್ಲಿ ಹಣವಿದೆ. ಪರಿಹಾರ ಕ್ರಮಗಳಿಗೆ ಹಣದ ಕೊರತೆಯಿಲ್ಲ ಎಂದರು.

ಇದನ್ನೂ ಓದಿ:ಐತಿಹಾಸಿಕ ಬೌದ್ಧ ಸ್ತೂಪ ನೆಲೆ, ಚಂದ್ರಲಾ ಪರಮೇಶ್ವರಿ ದೇವಾಲಯ ಸಂಪೂರ್ಣ ಜಲಾವೃತ

ಸಮೀಕ್ಷೆಗೆ ಸೂಚನೆ: ಪ್ರವಾಹ ಹಾನಿ ಜತೆಗೆ ಅತಿವೃಷ್ಟಿಯಿಂದಾಗಿರುವ ಬೆಳೆ ಹಾನಿ ಸಮೀಕ್ಷೆ ಗೈಯುವಂತೆ ಸೂಚನೆ ನೀಡಲಾಗಿದೆ. ಬಹು ಮುಖ್ಯವಾಗಿ ಕೇಂದ್ರದ ನೆರವಿಗೆ ಕಾಯದೇ ರಾಜ್ಯ ಸರ್ಕಾರದಿಂದ ನೆರವು ಕಲ್ಪಿಸಲಾಗುವುದು. ಈಗಾಗಲೇ ರಾಜ್ಯದ 173 ತಾಲೂಕುಗಳನ್ನು ಅತಿವೃಷ್ಟಿ ಎಂಬುದಾಗಿ ಘೋಷಿಸಲಾಗಿದೆ. 11000 ಮನೆಗಳು ಬಿದ್ದಿವೆ, 360 ಕೆರೆಗಳು ಒಡೆದಿವೆ. 3158 ಸರ್ಕಾರಿ ಕಟ್ಟಡಗಳಿಗೆ ಹಾಗೂ 1268 ಸೇತುವೆಗಳು ಹಾನಿಯಾಗಿವೆ ಎಂದು ಕಂದಾಯ ಸಚಿವರು ತಿಳಿಸಿದರು.

ಅಶೋಕ್

ಸೋಮಾರಿ ಅಧಿಕಾರಿಗಳಿಗೆ ಎತ್ತಂಗಡಿ: ಅತಿವೃಷ್ಟಿ ಹಾನಿಯ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ಸೋಮಾರಿ ತೋರುವ ಅಧಿಕಾರಿಗಳಿಗೆ ಎತ್ತಂಗಡಿ ಶಿಕ್ಷೆ ನೀಡಲಾಗುವುದು ಎಂದರು.

ಬೆಳೆವಿಮೆ: ಕಳೆದ ವರ್ಷದ ಬೆಳೆಹಾನಿಗೆ ಬೆಳೆವಿಮೆ ಪರಿಹಾರ ವಾರದೊಳಗೆ ರೈತರ ಖಾತೆಗೆ ಆರ್ ಟಿಜಿಎಸ್ ಮೂಲಕ ಜಮಾ ಆಗಲಿದೆ. ಈಗಾಗಲೇ ಸಭೆ ನಡೆಸಿ ವಿಮಾ ಕಂಪನಿಗಳಿಗೆ ಕೋರಲಾಗಿದೆ ಎಂದು ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು.

ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಚ ರಾಜುಗೌಡ, ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಡಾ. ಅವಿನಾಶ ಜಾಧವ್, ಸಹಾಯಕ ಆಯುಕ್ತ ರಾಮಚಂದ್ರ ಗಡದ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.