ಕೇರಳ ಮಳೆಯಬ್ಬರ : ತಿರುವನಂತಪುರದಲ್ಲಿ ರೆಡ್ ಅಲರ್ಟ್, 6 ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್
6 ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್
Team Udayavani, Nov 13, 2021, 9:00 PM IST
ತಿರುವನಂತಪುರಂ: ತಮಿಳುನಾಡಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆ, ಕೇರಳದಲ್ಲಿ ವರುಣ ಅಬ್ಬರಿಸತೊಡಗಿದ್ದಾನೆ. ಶುಕ್ರವಾರ ರಾತ್ರಿಯಿಂದೀಚೆಗೆ ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ತಿರುವನಂತಪುರಂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಾಗೂ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ರಾತ್ರೋರಾತ್ರಿ ಆರಂಭವಾದ ಮಳೆಯು ಶನಿವಾರವಿಡೀ ನಿರಂತರವಾಗಿ ಸುರಿಯುತ್ತಿದ್ದು, ಹಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ. ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಳಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ನ.25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಇನ್ನು, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅಲ್ಪಪ್ರಮಾಣದ ಭೂಕುಸಿತ, ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಮಳೆಯ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ತಮಿಳುನಾಡು, ಆಂಧ್ರದಲ್ಲಿ ಮುನ್ನೆಚ್ಚರಿಕೆ
ತಮಿಳುನಾಡಿನ ಕನ್ಯಾಕುಮಾರಿ, ತಿರುನ್ವೇಲಿ ಜಿಲ್ಲೆಗಳಲ್ಲಿ ನ. 14, 15ರಂದು ಭಾರೀ ಮಳೆ ಸುರಿಯಲಿದೆ ಎಂದು ಪ್ರಾಂತೀಯ ಹವಾಮಾನ ಇಲಾಖೆ (ಆರ್ಎಂಸಿ) ಮುನ್ನಚ್ಚರಿಕೆ ನೀಡಿದೆ. ತಮಿಳುನಾಡಿನ ಡೆಲ್ಟಾ ಜಿಲ್ಲೆಗಲಾದ ಅರಿಯಲೂರ್, ಕರೈಕಲ್, ನಾಗಪಟ್ಟಿಣಂ, ಪೆರಂಬದೂರ್, ಪುದುಕೊಟ್ಟೈ, ತಂಜಾವೂರು, ತಿರುಚನಾಪಲ್ಲಿ, ತಿರುವಾವೂರ್ ಹಾಗೂ ಸೇಲಂ ಜಿಲ್ಲೆಗಳಲ್ಲೂ ಅಪಾರ ಮಳೆ ಸುರಿಯಲಿದೆ ಎಂದು ಆರ್ಎಂಸಿ ಹೇಳಿದೆ.
ಪಾಲಿಕೆಯಿಂದ ಸೊಳ್ಳೆ ನಿಯಂತ್ರಣಕ್ಕೆ ಕ್ರಮ
ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸುವ ಸಲುವಾಗಿ ಚೆನ್ನೈ ಮಹಾನಗರ ಪಾಲಿಗೆ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದಕ್ಕಾಗಿ, 287 ಪೋರ್ಟಬಲ್ ಫಾಗಿಂಗ್ ಮೆಷೀನ್ಗಳನ್ನು ಬಳಸಲಾಗುತ್ತಿದೆ. ಜೊತೆಗೆ, 479 ಬ್ಯಾಟರಿ ಚಾಲಿತ ಸ್ಪ್ರೆàಯರ್ಗಳನ್ನು ಬಳಸಲಾರಂಭಿಸಲಾಗಿದೆ.
ಇದನ್ನೂ ಓದಿ : ಕಾರ್ಯಶೈಲಿ ಬದಲಿಸಿಕೊಳ್ಳಿ; ಹೆಚ್ ಡಿಕೆಯಿಂದ ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ
ಮಳೆಬಾಧಿತ ಪ್ರದೇಶಗಳಿಗೆ ಸ್ಟಾಲಿನ್ ಭೇಟಿ
ಅಗಾಧ ಮಳೆಯಿಂದ ತೀವ್ರವಾಗಿ ಹಾನಿಗೀಡಾಗಿರುವ ತಮಿಳುನಾಡಿನ ಪ್ರಾಂತ್ಯಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಶನಿವಾರ ಭೇಟಿ ನೀಡಿದ್ದಾರೆ. ಕಡಲೂರ್ ಜಿಲ್ಲೆಯ ಕುರುಂಜಿಪಾಡಿ ಪಂಚಾಯ್ತಿಯಿಂದ ಪ್ರವಾಸ ಆರಂಭಿಸಿದ ಅವರು, ಆನಂತರ ಅಡೂರು ಅಗಾರಂ, ತರಂಗಂಪಾಡಿ, ಕೇಶವನ್ಪಾಳಯಂಗಳಿಗೆ ಭೇಟಿ ನೀಡಿ, ಅಲ್ಲಿ ಮಳೆಯ ನಿರಾಶ್ರಿತರಿಗೆ ಅಕ್ಕಿ, ಹೊದಿಕೆ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ನೀಡಿದರು. ಈ ಪ್ರಾಂತ್ಯಗಳ ಆದಿ ದ್ರಾವಿಡರ್ ಸಮುದಾಯಕ್ಕೆ ಸೇರಿದ 18 ಕುಟುಂಬಗಳಿಗೆ 5.22 ಲಕ್ಷ ಮೌಲ್ಯದ ಮನೆ ನಿವೇಶನಗಳ ದಾಖಲೆಗಳನ್ನು (ಪಟ್ಟಾ) ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ