ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಡಿವಾಣ ಅನಿವಾರ್ಯ


Team Udayavani, May 19, 2021, 6:35 AM IST

ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಡಿವಾಣ ಅನಿವಾರ್ಯ

ಸತತ ನಾಲ್ಕು ವರ್ಷಗಳಿಂದ ಮುಂಗಾರು ಪೂರ್ವದಲ್ಲಿಯೇ ಅರಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗುವ ಮೂಲಕ ದೇಶದ ಪಶ್ಚಿಮ ಕರಾವಳಿಯ ಜನರನ್ನು ಆತಂಕಕ್ಕೀಡು ಮಾಡುತ್ತಲೇ ಬಂದಿದೆ. ಕಳೆದ ಮೂರು ವರ್ಷಗಳಲ್ಲಿ ಈ ಮುಂಗಾರು ಪೂರ್ವ ಚಂಡಮಾರುತ ಗಳು ಕಡಲತಡಿಯ ಸನಿಹವೇ ಹಾದುಹೋಗಿವೆ. ವರ್ಷಗಳುರುಳಿ ದಂತೆಯೇ ಅರಬಿ ಸಮುದ್ರ ಮತ್ತು ಬಂಗಾಲ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿರುವ ಚಂಡಮಾರುತಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನವೇ ಅರಬಿ ಸಮುದ್ರದಲ್ಲಿ ಎದ್ದ ತೌಖೆ¤à ಚಂಡಮಾರುತ ದೇಶದ ಪಶ್ಚಿಮ ಕರಾವಳಿಯ ರಾಜ್ಯ ಗಳನ್ನು ಹೈರಾಣಾಗಿಸಿದೆ. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳು ಈ ಭೀಕರ ಚಂಡಮಾರುತದ ಹೊಡೆತ ಅನುಭವಿಸಿದ್ದು ವ್ಯಾಪಕ ನಷ್ಟ ಸಂಭವಿಸಿದೆ.

ದಶಕಗಳ ಹಿಂದೆ ಆಗೊಮ್ಮೆ ಈಗೊಮ್ಮೆ ಅರಬಿ ಸಮುದ್ರದಲ್ಲಿ ಚಂಡಮಾರುತಗಳು ಸೃಷ್ಟಿಯಾಗುತ್ತಿದ್ದರೆ ಇತ್ತೀಚಿನ ವರ್ಷಗಳಲ್ಲಿ ಚಂಡಮಾರುತದ ವಿಚಾರದಲ್ಲಿ ಇದು ಬಂಗಾಲ ಕೊಲ್ಲಿಗೆ ಸಡ್ಡು ಹೊಡೆಯಲಾರಂಭಿಸಿದೆ. ಬಂಗಾಲಕೊಲ್ಲಿ ಸಮುದ್ರದ ಮೇಲ್ಮೆ„ ತಾಪಮಾನ ಹೆಚ್ಚಿರುವುದರಿಂದಾಗಿ ಸಮುದ್ರ ಮಧ್ಯೆ ಸೃಷ್ಟಿಯಾಗುವ ವಾಯುಭಾರ ಕುಸಿತಗಳು ಚಂಡಮಾರುತವಾಗಿ ಮಾರ್ಪಾಡು­ಗೊಳ್ಳುವುದು ಸಾಮಾನ್ಯ. ಆದರೆ ಅರಬಿ ಸಮುದ್ರದಲ್ಲಿ ಇತ್ತೀಚಿನ ವರ್ಷಗಳವರೆಗೆ ಇಂತಹ ಸನ್ನಿವೇಶ ಇರಲಿಲ್ಲ. ಆದರೆ ಇದೀಗ ವರ್ಷ ಗಳುರುಳಿದಂತೆಯೇ ಅರಬಿ ಸಮುದ್ರದಲ್ಲಿಯೂ ಕೂಡ ಚಂಡ ಮಾರುತಗಳು ಸೃಷ್ಟಿಯಾಗಿ ಕರಾವಳಿ ತೀರದ ನಿವಾಸಿಗಳು ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುವಂತೆ ಮಾಡುತ್ತಿವೆ. ಅರಬಿ ಸಮುದ್ರದಲ್ಲಿ ಚಂಡಮಾರುತ ಹೆಚ್ಚಾಗಲು ಹವಾಮಾನ ಬದಲಾವಣೆಗೂ ನೇರ ಸಂಬಂಧವಿದೆ. ಸಮುದ್ರದ ಮೇಲ್ಮೆ„ ತಾಪಮಾನ 28 ಡಿ.ಸೆ. ದಾಟಿದರೆ ವಾಯುಭಾರ ಕುಸಿತಗಳು ಚಂಡಮಾರುತವಾಗಿ ಪರಿವರ್ತಿತವಾಗುವ ಸಾಧ್ಯತೆಗಳು ಹೆಚ್ಚು. ಈಗ ಅರಬಿ ಸಮುದ್ರದಲ್ಲಿ ಇಂಥ ಸ್ಥಿತಿ ನಿರ್ಮಾಣÊ­ಾ ಗುತ್ತಿದೆ ಎಂದು ಹವಾಮಾನ ತಜ್ಞರು ಮತ್ತು ವಿಜ್ಞಾನಿಗಳು ಹೇಳಿದ್ದಾರೆ.

ಅರಬಿ ಸಮುದ್ರದಲ್ಲಿ ಈ ಬಾರಿ ಸೃಷ್ಟಿಯಾದ ತೌಖೆ¤à ಚಂಡಮಾರುತ ಕಳೆದ ಮೂರು ದಶಕಗಳಲ್ಲಿಯೇ ಅತ್ಯಂತ ವೇಗದಲ್ಲಿ ದೇಶದ ಪಶ್ಚಿಮ ಕರಾವಳಿಗೆ ಮುನ್ನುಗ್ಗಿ ಅಪ್ಪಳಿಸಿದೆ. ಇಂಗಾಲದ ಹೊರಸೂಸುವಿಕೆ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಸಮುದ್ರದ ಮೇಲ್ಮೆ„ ತಾಪಮಾನ ಏರಿಕೆಯಾಗುತ್ತಲೇ ಇದೆ. ತಾಪಮಾನ ಏರಿಕೆಗೆ ಕಡಿವಾಣ ಹಾಕದೇ ಹೋದಲ್ಲಿ ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಅಪಾಯಕಾರಿ ಯಾದ ಚಂಡಮಾರುತಗಳು ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಗೆ ಬಡಿದಪ್ಪಳಿಸಲಿವೆ ಎಂಬ ಎಚ್ಚರಿಕೆಯನ್ನೂ ತಜ್ಞರು ಇದೇ ವೇಳೆ ನೀಡಿದ್ದಾರೆ.

ಕಳೆದೆರಡು ದಶಕಗಳಿಂದ ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಹೆಚ್ಚಳದ ಕುರಿತಂತೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದರೂ ಇದಕ್ಕೊಂದು ಪರಿಹಾರ ಕಂಡುಕೊಳ್ಳಲು ಸಾಧ್ಯ­ವಾಗಿಲ್ಲ. ಜಾಗತಿಕ ತಾಪಮಾನ ಹೆಚ್ಚಳದಿಂದಾಗಿ ನಾನಾ ರೀತಿಯ ಸಮಸ್ಯೆ, ಸಂಕಷ್ಟಗಳನ್ನು ಮನುಕುಲ ಎದುರಿಸುತ್ತಿದೆ. ನೈಸರ್ಗಿಕ ಪ್ರಕ್ರಿಯೆ­ಗಳು ಅಸ್ತವ್ಯಸ್ತಗೊಂಡಿದ್ದರೆ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತಿವೆ. ಈ ಬಗ್ಗೆ ಈಗಲೇ ಎಚ್ಚರಿಕೆಯಿಂದ ಇರುವುದು ಒಳಿತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.