ಮಕರಜ್ಯೋತಿ: ಪಂಪಾಗೆ ಖಾಸಗಿ ವಾಹನಗಳಿಗೆ ನಿರ್ಬಂಧ
Team Udayavani, Jan 15, 2020, 11:49 AM IST
ಶಬರಿಮಲೆ: ಶಬರಿಮಲೆಯಲ್ಲಿ ಇಂದು ಸಂಜೆ ಮಕರಜ್ಯೋತಿ ದರ್ಶನವಾಗುವ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ವಾಹನಗಳನ್ನು ಪಂಪಾಗೆ ಹೋಗುವುದನ್ನು ನಿರ್ಬಂಧಿಸಲಾಗಿದೆ.
ಎಲ್ಲಾ ವಾಹನಗಳು ನೀಲಕ್ಕಲ್ ಶಿವ ದೇವಸ್ಥಾನದ ಸಮೀಪದಲ್ಲಿರುವ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಬೇಕಿದೆ. 1 ರಿಂದ 12 ವಿಭಾಗಗಳನ್ನು ಮಾಡಲಾಗಿದ್ದು, ಕಾರು, ವ್ಯಾನ್, ಬಸ್ ಗಳಿಗೆ ಪ್ರತ್ಯೇಕ ಪ್ರತ್ಯೇಕವಾಗಿ ಮೇಲಿನ ವಿಭಾಗಗಳಲ್ಲಿ ವಿಂಗಡಿಸಲಾಗಿದೆ.
ವಾಹನಗಳ ದಟ್ಟನೆ ಹೆಚ್ಚಳವಾಗಿದ್ದು ಪರಿಣಾಮವಾಗಿ, ಬೆಳಿಗ್ಗೆ 11 ಗಂಟೆಯ ನಂತರ ನಿಲಕ್ಕಲ್ನಿಂದ ಖಾಸಗಿ ವಾಹನಗಳನ್ನು ಪಂಪಾಗೆ ಅನುಮತಿಸಲಾಗುವುದಿಲ್ಲ. ನೀಲಕ್ಕಲ್ ನಿಂದ ಪಂಪಾವರೆಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾತ್ರ ಇದ್ದು,ಈ ರಸ್ತೆಯಲ್ಲಿ ತುರ್ತು ಸೇವೆಯ ವಾಹನ ಹಾಗೂ ಕೇರಳ ರಾಜ್ಯ ಸಾರಿಗೆ ವಾಹನಗಳು ಮಾತ್ರ ಓಡಾಟ ನಡೆಸಲು ಅವಕಾಶ ನೀಡಲಾಗಿದೆ.
ಈಗಾಗಲೇ ಪೊಲೀಸ್ ಇಲಾಖೆಯು ಈ ಕುರಿತು ನೀಲಕ್ಕಲ್ ನಲ್ಲಿ ಭಕ್ತಾಧಿಗಳಿಗೆ ಸೂಚನೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಪತ್ತನಂತಿಟ್ಟ ಜಿಲ್ಲಾಧಿಕಾರಿ ಪಿ.ಬಿ.ಕೃಷ್ಣನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ