ವೋಟಿನ ಸೇಡು; ಸಿಎಂ ಮಾತಿಗೆ ಕಾಂಗ್ರೆಸ್‌ ಸಹಮತ

ಬಿಜೆಪಿ ನಾಯಕರ ತೀವ್ರ ವಾಗ್ಧಾಳಿ

Team Udayavani, Jun 28, 2019, 6:00 AM IST

Congess-545

ಬೆಂಗಳೂರು: ‘ವೋಟು ಮಾತ್ರ ಮೋದಿಗೆ, ಸಮಸ್ಯೆ ಬಗೆಹರಿಸಲಿಕ್ಕೆ ಮಾತ್ರ ನಾವಾ?’ ಎಂಬ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಿಡಿಮಿಡಿ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಧ್ಯೆಯೇ, ಕಾಂಗ್ರೆಸ್‌ ನಾಯಕರು ಮತ್ತು ಸಚಿವರು ಸಿಎಂ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವೋಟಿನ ಸೇಡು’ ರಾಜಕೀಯ ತೀವ್ರತೆ ಪಡೆದುಕೊಂಡಿದೆ.


ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಮೊದಲಿಗರಾಗಿ ಸಿಎಂ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ತವರು ಕ್ಷೇತ್ರ ಬಾದಾಮಿ ತಾ|ನ ಆಲೂರ ಎಸ್‌.ಕೆ. ಗ್ರಾಮದಲ್ಲಿ ಮಾತನಾಡಿದ ಸಿದ್ದು, ಅಭಿವೃದ್ಧಿ ಮಾಡದವರಿಗೆ ಮತ ಹಾಕ್ತೀರಿ. ಆದರೆ ಕೆಲಸ ಮಾತ್ರ ನಮಗೆ ಹೇಳ್ತೀರಿ. ಬಿಜೆಪಿಗೆ ಓಟ್ ಹಾಕಿ, ಅಭಿವೃದ್ಧಿ ಕೆಲ್ಸ ಮಾಡಿ ಎಂದು ಮೋದಿಗೆ ಕೇಳ್ತೀರಾ ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಹೆಚ್ಚು ಮತಗಳು ನಮಗೆ ಬರುತ್ತವೆ ಅಂದುಕೊಂಡಿದ್ದೆ. ಅನ್ನಭಾಗ್ಯ ಅಕ್ಕಿ, ಮಕ್ಕಳಿಗೆ ಬಟ್ಟೆ, ಹಾಲು, ಮಹಿಳೆಯರಿಗೆ ಉಚಿತ ಶಿಕ್ಷಣ… ಎಲ್ಲವೂ ನಾವು ಕೊಟ್ಟಿದ್ದೆವು. ಆದರೂ ನಮಗೆ ಮತ ಹಾಕಲಿಲ್ಲ. ಕೆಲಸಾನೇ ಮಾಡದಿದ್ದರೂ ಬಿಜೆಪಿಹೆ ಓಟು ಹಾಕುತ್ತಾರಾ ಅಂತ ನನಗೆ ತಿಳಿಯುತ್ತಿಲ್ಲ ಎಂದರು.

ಸಿಎಂ ಹೇಳಿದ್ದು ವಾಸ್ತವ
ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೂ ಕುಮಾರಸ್ವಾಮಿ ವಾಸ್ತವವನ್ನೇ ಪ್ರಸ್ತಾವ ಮಾಡಿದ್ದಾರೆ ಎಂದಿದ್ದಾರೆ. ರಾಜಕೀಯದಲ್ಲಿ ಕೆಲವೊಂದು ಬಾರಿ ವಾಸ್ತವಾಂಶ ಮಾತನಾಡಿದರೆ ಕೆಲವರಿಗೆ ಹಿಡಿಸುವುದಿಲ್ಲ. ಸಿಎಂ 2 ದಿನ ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸಿ, ಸ್ಪಂದಿಸಿದ್ದಾರೆ ಎಂದರು.

ಗೃಹ ಸಚಿವ ಎಂ.ಬಿ. ಪಾಟೀಲರೂ ಸಿಎಂ ಹೇಳಿಕೆಗೆ ಧ್ವನಿಗೂಡಿಸಿದ್ದು, ಯರಮರಸ್‌ ಬಳಿ ರಾಜಕೀಯ ಪ್ರೇರಿತ ಪ್ರತಿಭಟನಕಾರರೇ ಹೆಚ್ಚಿದ್ದರು. ಸಿಎಂ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಹತಾಶೆ
ಲೋಕಸಭೆ ಚುನಾವಣೆಯ ಸೋಲಿನಿಂದ ಕುಮಾರಸ್ವಾಮಿ ಹತಾಶರಾಗಿ ಜನರ ಮೇಲೆಸಿಟ್ಟು ತೋರುತ್ತಿದ್ದಾರೆ ಎಂದು ಬಿಜೆಪಿ ನಾಯಕ ಬಿ.ಶ್ರೀರಾಮುಲು ಆರೋಪಿಸಿದರು.

ಸಿಎಂ ರಾಜೀನಾಮೆ ನೀಡಲಿ
ಸಿಎಂ ಸಿಟ್ಟಿನ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಾಗ್ಧಾಳಿ ನಡೆಸಿ, ರಾಜೀನಾಮೆಯನ್ನೂ ಕೇಳಿದ್ದಾರೆ. ಮೋದಿಗೆ ಓಟ್ ಹಾಕ್ತೀರಿ, ಕೆಲಸ ಕೇಳ್ಳೋಕೆ ನನ್ನ ಬಳಿ ಬರ್ತೀರಿ’ ಎಂದು ಪ್ರಶ್ನಿಸಿದರೆ ಏನರ್ಥ? ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ. ಅವರು ರಾಜೀನಾಮೆ ನೀಡಿದರೆ ರಸ್ತೆಯಲ್ಲಿ ಹೋಗುವ ದಾಸನೂ ಅವರ ಬಳಿ ಹೋಗುವುದಿಲ್ಲ. ಮುಖ್ಯಮಂತ್ರಿ ಎಂಬ ಕಾರಣಕ್ಕೆ ಜನ ಅವರ ಬಳಿ ಹೋಗುತ್ತಾರೆ. ಆ ಜನರಿಗೆ ಸ್ಪಂದಿಸುವುದಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ವಾಗ್ಧಾಳಿ ನಡೆಸಿದರು.

ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಜನ ಮತ ಹಾಕಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.